AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಕೋಟ್ಯಾಂತರ ರೂ ಅಕ್ರಮ ಕೇಸ್​: ಸಿಐಡಿಗೆ ಹಸ್ತಾಂತರ

ಬಾಗಲಕೋಟೆಯ ಐಡಿಬಿಐ ಶಾಖೆಯಲ್ಲಿರುವ 5 ಇಲಾಖೆಗಳ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಆ.26ರಂದು ಬಾಗಲಕೋಟೆಗೆ ಸಿಐಡಿ ಅಧಿಕಾರಿಗಳ ತಂಡ ಆಗಮಿಸಲಿದೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಪ್ರಕರಣದಲ್ಲಿ 19 ಜನರ ಬಂಧನವಾಗಿದೆ.

ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಕೋಟ್ಯಾಂತರ ರೂ ಅಕ್ರಮ ಕೇಸ್​: ಸಿಐಡಿಗೆ ಹಸ್ತಾಂತರ
ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಕೋಟ್ಯಾಂತರ ರೂ ಅಕ್ರಮ ಕೇಸ್​: ಸಿಐಡಿಗೆ ಹಸ್ತಾಂತರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 22, 2024 | 3:34 PM

Share

ಬಾಗಲಕೋಟೆ, ಆಗಸ್ಟ್​ 22: ಸರ್ಕಾರದ ವಿವಿಧ ಇಲಾಖೆಗಳ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಬಾಗಲಕೋಟೆ ಜಿಲ್ಲಾ ಪೊಲೀಸ್​ ಇಂದು ಸಿಐಡಿಗೆ (CID) ಹಸ್ತಾಂತರಿಸಿದ್ದಾರೆ. ಜಿಲ್ಲೆಯ ಪ್ರವಾಸೋದ್ಯಮ, ಅಲ್ಪಸಂಖ್ಯಾತ, ಕಾರ್ಮಿಕ, ಕೈಮಗ್ಗ-ಜವಳಿ, ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ 6 ಕೋಟಿ 8 ಲಕ್ಷ ರೂ. ಹಣವನ್ನು ವಿವಿಧ ಖಾತೆಗಳಿಗೆ ಬ್ಯಾಂಕ್ ಸಿಬ್ಬಂದಿಯಿಂದ ಅಕ್ರಮ ವರ್ಗಾವಣೆ ಮಾಡಲಾಗಿತ್ತು.

ಇಲಾಖೆಗಳ ಹಣ ಒಟ್ಟು 33 ವಿವಿಧ ಖಾತೆಗಳಿಗೆ ವರ್ಗಾವಣೆ ಆಗಿತ್ತು. ಇದುವರೆಗೆ ಬ್ಯಾಂಕ್​ನ 9 ಸಿಬ್ಬಂದಿ ಸೇರಿ 19 ಆರೋಪಿಗಳನ್ನು ಬಂಧಿಸಲಾಗಿದೆ. 3 ಕೋಟಿ ರೂ. ಹೆಚ್ಚು ಅವ್ಯವಹಾರ ಹಿನ್ನೆಲೆ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಆ.26ರಂದು ಬಾಗಲಕೋಟೆಗೆ ಸಿಐಡಿ ಅಧಿಕಾರಿಗಳ ತಂಡ ಆಗಮಿಸಲಿದೆ ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರವಾಸೋದ್ಯಮ ಇಲಾಖೆ ಹಣ ವಂಚನೆ ಪ್ರಕರಣ: 19 ಆರೋಪಿಗಳ ಬಂಧನ, ಕೇಸ್ ಶೀಘ್ರ ಸಿಐಡಿಗೆ ಹಸ್ತಾಂತರ

ಐದು ಇಲಾಖೆಯಲ್ಲಿ ಹಣ ಕೂಡ ಅಕ್ರಮ ವರ್ಗಾವಣೆಯಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ 79 ಲಕ್ಷ 75 ಸಾವಿರ ರೂ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ 86 ಲಕ್ಷ 40 ಸಾವಿರ ರೂ, ಕೈಮಗ್ಗ ಮತ್ತು ಜವಳಿ ಇಲಾಖೆಯ 18 ಲಕ್ಷ 15 ಸಾವಿರ ರೂ, ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ 1 ಕೋಟಿ 76 ಲಕ್ಷದ 58 ಸಾವಿರ ರೂ, ಐಡಿಬಿಐ ಬ್ಯಾಂಕ್‌‌‌ನಲ್ಲಿದ್ದ ಒಟ್ಟು ಐದು ಇಲಾಖೆಯ 6 ಕೋಟಿ ರೂ. ವಂಚನೆ ಹೊರಬಿದ್ದಿದೆ.

ಇತರೆ ಇಲಾಖೆಗಳ ವಂಚನೆಯಲ್ಲೂ ಬ್ಯಾಂಕ್​ ಸಿಬ್ಬಂದಿಗಳದ್ದೇ ಕೈವಾಡ ಬಹುತೇಕ ಖಚಿತವಾಗಿದ್ದು, ಪರಿಶೀಲನೆ ಮುಂದುವರೆದಿದೆ. ಇನ್ನು ಇದರಲ್ಲಿ ಐದು ಇಲಾಖೆಯ ಅಧಿಕಾರಿಗಳ ಪಾತ್ರ ಇದ್ದೇ ಇರುತ್ತದೆ, ಇಲಾಖೆ ಸಿಬ್ಬಂದಿಯನ್ನು ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಇದನ್ನೂ ಓದಿ; ಬಾಗಲಕೋಟೆ: NHM ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ

ಬಾಗಲಕೋಟೆ ಐಡಿಬಿಐ ಬ್ಯಾಂಕ್ ಗುತ್ತಿಗೆ ನೌಕರ ಸೇಲ್ಸ್ ಎಕ್ಸಿಕ್ಯೂಟಿವ್ ಸೂರಜ್ ಸಗರ ಮೊದಲ‌ ಆರೋಪಿ ಕಿಂಗ್​ಪಿನ್​​​​ 2021 ರಿಂದ 2024ರವರೆಗೆ 54 ಬಾರಿ 33 ಖಾತೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ‌ಮ್ಯಾನೇಜರ್​ಗಳಾದ ನಿಶಾ ಹಾಗೂ ಸರಸ್ವತಿ ಬ್ಯಾಂಕ್‌ ಪಬ್ಲಿಕ್‌ ರಿಲೇಷನ್ಶಿಪ್ ಆಫಿಸರ್ ವಿದ್ಯಾಧರ ಹಿರೆಮಠ, ಲೋನ್ ವಿಭಾಗದ ಅಸಿಸ್ಟೆಂಟ್ ಮ್ಯಾನೇಜರ್ ರೋಹಿತ್, ಹಣ ಹಾಕಿಸಿಕೊಂಡ 14 ಜನ ಸೇರಿ ಒಟ್ಟು 19 ಜನರನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ