AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ತ್ರಿವರ್ಣಧ್ವಜ ಹಾರಿಸಿದ ಶತಾಯುಷಿ ಅಜ್ಜಿ

ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ತುಂಬೆಲ್ಲ ಸಂಭ್ರಮ ಮನೆಮಾಡಿದೆ. ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿದೆ. ಹೀಗೆಯೇ ಶಸ್ತ್ರಚಿಕಿತ್ಸೆಗೆ ಬಂದಿದ್ದ ಶತಾಯುಷಿ ಮಹಿಳೆಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಲ್ಲಿ ಧ್ವಜಾರೋಹಣ ನೆರೆವೇರಿಸಿದ ಅಪರೂಪದ ಘಟನೆ ನಗರದ ವಾಸನದ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಕಾಶಮ್ಮ ಹಿರೇಮಠ (103) ಧ್ವಜಾರೋಹಣ ನೆರವೇರಿಸಿದವರು.

ಬಾಗಲಕೋಟೆ: ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯ ತ್ರಿವರ್ಣಧ್ವಜ ಹಾರಿಸಿದ ಶತಾಯುಷಿ ಅಜ್ಜಿ
ಧ್ವಜಾರೋಹಣ ನೆರವೇರಿಸಿದ ಶತಾಯುಶ ಅಜ್ಜಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 15, 2023 | 2:58 PM

Share

ಬಾಗಲಕೋಟೆ: ಶಸ್ತ್ರಚಿಕಿತ್ಸೆಗೆ ಬಂದಿದ್ದ ಶತಾಯುಷಿ ಅಜ್ಜಿಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಲ್ಲಿ (Hospital) ಧ್ವಜಾರೋಹಣ ನೆರೆವೇರಿಸಿದ ಅಪರೂಪದ ಘಟನೆ ನಗರದ ವಾಸನದ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಕಾಶಮ್ಮ ಹಿರೇಮಠ (103) ಧ್ವಜಾರೋಹಣ ನೆರವೇರಿಸಿದವರು. ಬಾಗಲಕೋಟೆ (Bagalkot) ತಾಲೂಕಿನ ತಳಗಿಹಾಳ ಗ್ರಾಮದ ಇವರು ಕೆಲವು ದಿನಗಳ ಹಿಂದೆ ಆಯತಪ್ಪಿ ಬಿದ್ದಿದ್ದರು. ಇದರಿಂದ ಎಡ ಭಾಗದ ಚಪ್ಪೆ ಮುರಿದಿತ್ತು. ಆಸ್ಪತ್ರೆಗೆ ಬಂದಾಗ ಅಜ್ಜಿಯ ಹೆಮೊಗ್ಲೋಬಿನ್ ಕಡಿಮೆ ಇದ್ದದ್ದರಿಂದ ಎರಡು ಪಾಯಿಂಟ್ ರಕ್ತ ನೀಡಿಲಾಯಿತು. ನಂತರ ಆ.10ರಂದು ಆಸ್ಪತ್ರೆಯ ಎಲುಬು ಕೀಲು ತಜ್ಞ ಡಾ.ಗಿರೀಶ ವಾಸನದ ಶಸ್ತ್ರಚಿಕಿತ್ಸೆ ಮಾಡಿದರು. ಸದ್ಯ ಅಜ್ಜಿ ಚೇತರಿಸಿಕೊಂಡಿದ್ದು ವಾಲ್ಕೆರ್ಸ್ ಸಹಾಯದಿಂದ ಆಸ್ಪತ್ರೆಯಲ್ಲಿ ನಡೆದಾಡುತ್ತಿದ್ದಾರೆ.

103 ವರ್ಷದಲ್ಲೂ ಅಷ್ಟೆ ಆತ್ಮವಿಶ್ವಾಸದಿಂದ ಶಸ್ತ್ರಚಿಕಿತ್ಸೆಗೆ ಸಹಕರಿಸಿದರು. ಇಳಿ ವಯಸ್ಸಿನಲ್ಲೂ ಸ್ವಾವಲಂಬಿಯಾಗಿ ನಡೆದಾಡಬೇಕು ಎಂಬ ಛಲವಿರುವ ಶತಾಯುಷಿಯನ್ನು ಕಂಡು ಹೆಮ್ಮೆ ಎನಿಸಿತು. ಆದ್ದರಿಂದ ಅವರಿಂದಲೇ ನಮ್ಮ ಆಸ್ಪತ್ರೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ನಮ್ಮ ಆಸ್ಪತ್ರೆಗೆ ರೋಗಿಯಾಗಿ ಬಂದು ಶಸ್ತ್ರಚಿಕಿತ್ಸೆ ಪಡೆದ ನಂತರ ಅಜ್ಜಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಮರಳುತ್ತಿದ್ದಾರೆ. ಈ ದಾರಿ ನಮ್ಮ ಆಸತ್ರೆಯ ಸ್ವಾತಂತ್ರೋತ್ಸವಕ್ಕೆ ಹೊಸ ಮೆರಗು ತಂದಿದ್ದಾರೆ ಎಂದು ಡಾ.ವಾಸನದ ತಿಳಿಸಿದ್ದಾರೆ.

ಎಲುಬು ಕೀಲು ತಜ್ಞ ಡಾ.ಹರ್ಷಾ ಕ್ಯಾಲಕೊಂಡ, ಅರಿವಳಿಕೆ ತಜ್ಞೆ ಡಾ.ಶಿಲಾ ಮಾಸೂರ, ಹೃದಯರೋಗ ತಜ್ಞ ಡಾ.ಎಂ.ಜಿ.ಹೆರಕಲ್, ಡಾ.ರವೀಂದ್ರ ಕುಲಕರ್ಣಿ, ಶುಶೂಷಕರಾದ ಮೋಹನ್ ಜೋಶಿ, ಪರಶುರಾಮ ದೊಡ್ಡಮನಿ, ರೇಣುಕಾ ಕರಬಾನಿ, ಸತೀಶ ಸಿಂಗದ, ಮಂಜುನಾಥ ಹಾಗೂ ಇತರರು ಶಸ್ತ್ರಚಿಕಿತ್ಸೆಗೆ ಸಹಕರಿಸಿದ್ದಾರೆ.

ಇದನ್ನೂ ಓದಿ: Independence Day 2023: ಭಾರತದ ಸ್ವಾತಂತ್ರ್ಯ ದಿನಾಚರಣೆ ಇತಿಹಾಸ, ಮಹತ್ವ ಮತ್ತು ಈ ಬಾರಿಯ ಥೀಮ್

ಚಪ್ಪೆ ಮುರಿತದ ಸಮಸ್ಯೆಯನ್ನು ವೈದ್ಯಕೀಯ ಭಾಷೆಯಲ್ಲಿ ಫ್ಯಾಕ್ಟರ್ ನೆಕ್ ಆಫ್ ಥೀಮರ್‌ ಎನ್ನುತ್ತಾರೆ. ಅಜ್ಜಿಗೆ 103 ವರ್ಷಗಳಾಗಿದ್ದರಿಂದ ಶಸ್ತ್ರಚಿಕಿತ್ಸೆ ನಡೆಸುವುದು ಸವಾಲಿನ ಕೆಲಸವಾಗಿತ್ತು, ಬಿದ್ದ ನಂತರ ಮನೆಯಲ್ಲಿ ಒಂದೆರಡು ದಿನ ಅವರು ಓಡಾಡದೆ ಒಂದೇ ಕಡೆ ಮಲಗಿದ್ದರಿಂದ ಗಾಯ (ಬೆಡ್ ಸೋರ್) ಕೂಡ ಆಗಿದ್ದವು. ಎಲ್ಲ ಕೆಲಸಕ್ಕೂ ಇನ್ನೊಬ್ಬರನ್ನು ಅವಲಂಬಿಸುವಂತಾಯಿತು ಎಂದು ಆಜ್ಜಿ ಕುಗ್ಗಿದ್ದರು. ನಾನು ಮತ್ತೆ ಮೊದಲಿನಂತೆ ನಡೆದಾಡುಬೇಕು ಎಂದು ಆತ್ಮವಿಶ್ವಾಸ ತೋರಿದ್ದರಿಂದ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಸದ್ಯ ಗಾಯವೂ ವಾಸಿಯಾಗಿ ಗುಣಮುಖರಾಗಿದ್ದಾರೆ. 60 ವರ್ಷ ಮೇಲ್ಪಟ್ಟವರು ಆಯತಪ್ಪಿ ಬಿದ್ದು ಮೂಳೆ ಮುರಿತಕ್ಕೆ ಒಳಗಾಗುವುದು ಸಾಮಾನ್ಯ, ಆದರೆ ಗಾಯಾಳು ಅಥವಾ ಅವರ ಸಂಬಂಧಿಕರು ಧೈರ್ಯ ಕಳೆದುಕೊಳ್ಳದೆ ಆಸ್ಪತ್ರೆಗೆ ಬಂದರೆ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯ ಎಂದು ಎಲುಬು ಕೀಲು ತಜ್ಞ ಡಾ.ಗಿರೀಶ ವಾಸನದ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?