ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ

ಮೃತದೇಹವನ್ನು ಉಪ್ಪಿನಲ್ಲಿ ಮುಚ್ಚಿ ಬದುಕಿಸಲು ಪ್ರಯತ್ನಿಸಿದ ಘಟನೆಗ ವರದಿಯಾಗಿದೆ. ಹೌದು..ಬಾಗಲಕೋಟೆಯಲ್ಲಿ 18 ತಿಂಗಳ ಮಗುವೊಂದು ಸಂಪ್​​​ಗೆ ಬಿದ್ದು ಸಾವನ್ನಪ್ಪಿದೆ. ಆದ್ರೆ, ಸಾವನ್ನಪ್ಪಿದ ನಂತರ ಮಗುವನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ ಪ್ರಯತ್ನ ಮತ್ತು ಮೂಢನಂಬಿಕೆಯ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೋಷಿಯಲ್ ಮೀಡಿಯಾದ ವೈರಲ್ ಪೋಸ್ಟ್​​ ಗಳನ್ನ ನಂಬಿ ಈ ರೀತಿ ಮಾಡಿದ್ರೂ ಸಹ ಮಗು ಬದುಕುಳಿದಿಲ್ಲ. ಇದರೊಂದಿಗೆ ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನು ಮತ್ತೆ ಬದುಕಿಸಬಹುದು ಎಂಬ ವೈರಲ್ ಮೆಸೇಜ್​ನ ಸತ್ಯಾಸತ್ಯತೆ ಅನಾವಣವಾಗಿದೆ.

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ
Ameena
Edited By:

Updated on: Jun 08, 2026 | 8:53 PM

ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ. ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ.  ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ.  ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ, ಪೋಷಕರು ಆಕೆಯ ದೇಹವನ್ನು ಗಂಟೆಗಟ್ಟಲೆ ಉಪ್ಪಿನಲ್ಲಿ ಮುಳುಗಿಸಿಟ್ಟಿದ್ದಾರೆ. ಆದರೂ ಮಗು ಮಾತ್ರ ಬದುಕಲಿಲ್ಲ. ಕೊನೆಗೆ ವೈದ್ಯರ ಸೂಚನೆ ಮೇರೆಗೆ ಮಗುವಿನ ಮೃತ ದೇಹವನ್ನು ಹೊರತೆಗೆಲಾಯ್ತು.

ಮುಖ್ಯಾಂಶಗಳು

  • ನೀರಿನ ಟ್ಯಾಂಕ್​ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ಸಾವು
  • ಬಾಗಲಕೋಟೆ ಸೆಕ್ಟರ್ ನಂಬರ್ 38ರಲ್ಲಿ ಅಮೀನಾ ಪಠಾಣ್ ಸಾವು
  • ಉಪ್ಪಿನಲ್ಲಿ ಮುಳುಗಿಸಿಟ್ಟರೆ ಮಗು ಬದುಕುತ್ತೆ ಎಂಬ ನಂಬಿಕೆ ಹಿನ್ನೆಲೆ
  • 2 ತಾಸಿಗೂ ಹೆಚ್ಚು ಕಾಲ ಉಪ್ಪಿನಲ್ಲಿ ಮುಳುಗಿಸಿಟ್ಟರೂ ಬದುಕದ ಮಗು

ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ. ಮಗು ನೀರಿನಲ್ಲಿ ಮುಳುಗಿದ್ದನ್ನು ತಡವಾಗಿ ಗಮನಿಸಲಾಗಿದ್ದು, ಅಷ್ಟರಲ್ಲೇ ಮಗು ಕೊನೆಯುಸಿರೆಳೆದಿದೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಆಯುಷ್ಮಾನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ

ಉಪ್ಪಿನಲ್ಲಿಟ್ಟರೇ ಮಗು ಬದುಕುತ್ತೆ ಎಂಬ ನಂಬಿಕೆ

ಮಗು ಮೃತಪಟ್ಟಿದ್ದರೂ ಅದನ್ನು ಒಪ್ಪಿಕೊಳ್ಳದ ಕುಟುಂಬಸ್ಥರು, ಮಗುವನ್ನು ಹೇಗಾದರೂ ಮಾಡಿ ಬದುಕಿಸಲೇಬೇಕು ಎಂದು ಮುಂದಾಗಿದ್ದಾರೆ. ನೀರಿನಲ್ಲಿ ಮುಳುಗಿ ಸತ್ತವರನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟರೆ ಮತ್ತೆ ಜೀವ ಬರುತ್ತದೆ ಎಂಬ ಬಲವಾದ ನಂಬಿಕೆ ಅವರದ್ದಾಗಿತ್ತು. ಹೀಗಾಗಿ, ಮಗುವಿನ ಮುಖವನ್ನು ಮಾತ್ರ ಹೊರಗಿಟ್ಟು, ಇಡೀ ದೇಹವನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟಿದ್ದಾರೆ. ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯ ಬಳಿಯೇ ಮಗುವನ್ನು ಉಪ್ಪಿನಲ್ಲಿ ಮುಳುಗಿಸಿ ಇಟ್ಟಿದ್ದ ಪೋಷಕರು, ಮಗುವಿನ ಕಿವಿಯ ಬಳಿ ಮೊಬೈಲ್‌ನಲ್ಲಿ ಕುರಾನ್ ಪ್ರಾರ್ಥನೆಯನ್ನು ಹಾಕಿ ಬದುಕಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಸರಿಸುಮಾರು ಎರಡು ತಾಸಿಗೂ ಅಧಿಕ ಕಾಲ ಮಗುವಿನ ದೇಹವನ್ನು ಉಪ್ಪಿನಲ್ಲೇ ಇಟ್ಟಿದ್ದರು. ಆದರೆ ಯಾವುದೇ ಪವಾಡಗಳು ನಡೆಯದಿದ್ದಾಗ ಮತ್ತು ಮಗುವಿನಲ್ಲಿ ಯಾವುದೇ ಚಲನೆ ಕಾಣಿಸದಿದ್ದಾಗ ಪೋಷಕರು ನಿರಾಶೆಗೊಂಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಶವ ಹೊರಕ್ಕೆ

ಎರಡು ಗಂಟೆಗಳ ನಂತರ ಸ್ಥಳದಲ್ಲಿದ್ದ ವೈದ್ಯರು ಪೋಷಕರಿಗೆ ತಿಳಿಹೇಳಿ, ವೈದ್ಯಕೀಯ ಸಲಹೆಗಳನ್ನು ನೀಡಿದ್ದಾರೆ. ವೈದ್ಯರ ಮಾತನ್ನು ಕೇಳಿದ ಕುಟುಂಬಸ್ಥರು ಕೊನೆಗೂ ಮಗುವಿನ ದೇಹವನ್ನು ಉಪ್ಪಿನಿಂದ ಹೊರಗೆ ತೆಗೆದಿದ್ದಾರೆ. ಬಳಿಕ ಮಗುವಿನ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯ್ತು. ನಂತರ ಪೋಷಕರು ಮೃತದೇಹವನ್ನು ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ.

ಇದರೊಂದಿಗೆ ಸಾರ್ವಜನಿಕರಲ್ಲಿ ಮನವಿ ಏನೆಂದರೆ ಅರೇಬರೇ ಜೀವ ಇದ್ದಾಗಲು ಇಂತಹ ಮೂಢನಂಬಿಕೆಗಳನ್ನು ನಂಬಿಕೊಂಡು ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು.  ಜೀವ ಉಳಿಸಲು ವೈದ್ಯಕೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Mon, 8 June 26

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us