ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ; ಮತ್ತೆ‌ ಹೋರಾಟಕ್ಕೆ ಸಜ್ಜಾದ ಬಸವ ಜಯಮೃತ್ಯುಂಜಯಶ್ರೀ

ಕಳೆದ ಮೂರು ವರ್ಷದಿಂದ ಪಂಚಮಸಾಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟಗಳು ನಡೆಯುತ್ತಲೇ ಬಂದಿತ್ತು. ಆದರೆ, ಸ್ವಲ್ಪ ದಿನಗಳ ಕಾಲ ಇದು ತಣ್ಣಗಾಗಿತ್ತು. ಇದೀಗ ಮತ್ತೆ 2ಎ ಮೀಸಲಾತಿ ಕೂಗು ಕೇಳಿಬಂದಿದ್ದು, ಈ ಕುರಿತು ಇಳಕಲ್​ನಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಶ್ರೀಗಳು, ‘ಮೀಸಲಾತಿಗೆ ಆಗ್ರಹಿಸಿ ನಾಳೆ(ಜು.03)ಯಿಂದ ಆಗ್ರಹ ಪತ್ರ ಚಳವಳಿ ಆರಂಭಿಸಲಿದ್ದೇವೆ ಎಂದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ; ಮತ್ತೆ‌ ಹೋರಾಟಕ್ಕೆ ಸಜ್ಜಾದ ಬಸವ ಜಯಮೃತ್ಯುಂಜಯಶ್ರೀ
ಬಸವ ಜಯಮೃತ್ಯುಂಜಯ ಸ್ವಾಮೀಜಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 02, 2024 | 10:05 PM

ಬಾಗಲಕೋಟೆ, ಜು.02: ಇಷ್ಟು ದಿನ ತಣ್ಣಗಾಗಿದ್ದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಹೌದು, ಮತ್ತೆ‌ ಮೀಸಲಾತಿ ಹೋರಾಟಕ್ಕೆ ಬಸವ ಜಯಮೃತ್ಯುಂಜಯಶ್ರೀ(Basava Jaya Mrityunjaya Shree) ಸಜ್ಜಾಗಿದ್ದಾರೆ. ಈ ಕುರಿತು ಬಾಗಲಕೋಟೆ ಜಿಲ್ಲೆಯ ಇಳಕಲ್​ನಲ್ಲಿ ಮಾತನಾಡಿದ ಶ್ರೀಗಳು, ‘ಮೀಸಲಾತಿಗೆ ಆಗ್ರಹಿಸಿ ನಾಳೆ(ಜು.03)ಯಿಂದ ಆಗ್ರಹ ಪತ್ರ ಚಳವಳಿ ಆರಂಭಿಸಲಿದ್ದೇವೆ. ಈ ಬಾರಿ ಶಾಸಕ ವಿನಯ್​ ಕುಲಕರ್ಣಿ ಮನೆಯಿಂದಲೇ ಈ ಹೋರಾಟ ಶುರುವಾಗುತ್ತದೆ ಎಂದಿದ್ದಾರೆ.

ಇನ್ನು ನಮ್ಮ ಸಮುದಾಯದ(ಪಂಚಮಸಾಲಿ)20 ಜನ ಶಾಸಕರಿದ್ದಾರೆ. ಅವರೆಲ್ಲರ ಮನೆಗಳಿಗೆ ಹೋಗುತ್ತೇವೆ. ಅಧಿವೇಶನದಲ್ಲಿ ಮೀಸಲಾತಿ ಪರ, ಸಾಮಾಜಿಕ ನ್ಯಾಯದ ಪರ ಧ್ವನಿ ಎತ್ತಲು ಶಾಸಕರಿಗೆ ಮನವಿ ಮಾಡುತ್ತೇವೆ. ಹೀಗಾಗಿ ನಾಳೆಯಿಂದ ಪಂಚಮಸಾಲಿ ಸಮುದಾಯಕ್ಕೆ 2Aಮೀಸಲಾತಿಗಾಗಿ ಆಗ್ರಹಿಸಿ ಪತ್ರ ಚಳುವಳಿ ಮಾಡಲಿದ್ದೇವೆ ಎಂದು ಜಯಮೃತ್ಯುಂಜಯಶ್ರೀ ಹೇಳಿದರು.

ಇದನ್ನೂ ಓದಿ:ದಾನ ಕೊಟ್ಟ ವಸ್ತು ಬಗ್ಗೆ ಎಂದಿಗೂ ನೆನಪಿಡುವುದಿಲ್ಲ, ಎಲ್ಲಿಯೂ ಮಾತಾಡಲ್ಲ: ಪಂಚಮಸಾಲಿ ಸ್ವಾಮೀಜಿ ಹೇಳಿಕೆಗೆ ಮುರುಗೇಶ್ ನಿರಾಣಿ ಪ್ರತಿಕ್ರಿಯೆ

ಕಳೆದ ಕಳೆದ ಮೂರು ವರ್ಷದಿಂದ ಹೋರಾಟ

ಇನ್ನು ಪಂಚಮಸಾಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಶ್ರೀಗಳು ಕಳೆದ ಮೂರು ವರ್ಷದಿಂದ ಹೋರಾಟ ನಡೆಸಿದ್ದಾರೆ. ಈ ಕುರಿತು ಕಳೆದ ಮೇ. 22 ರಂದು ಧಾರವಾಡದಲ್ಲಿ ಮಾತನಾಡಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು, ‘ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೂ ಹೋರಾಟ ಮುಂದುವರೆಸಲಾಗುವುದು ಎಂದಿದ್ದರು. ಅದರಂತೆ ಇದೀಗ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ನಾಳೆಯಿಂದಲೇ ಪತ್ರ ಚಳುವಳಿ ಆರಂಭಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us