AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

ಕಳೆದ ವಾರ ಅಷ್ಟೇ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ತಾಯಿ -ಮಕ್ಕಳ ಸಾಮೂಹಿಕ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು ಮತ್ತೊಂದು ತಾಯಿ ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ
ಪ್ರಾತಿನಿಧಿಕ ಚಿತ್ರImage Credit source: tribuneindia.com
TV9 Web
| Edited By: |

Updated on: Jan 17, 2023 | 9:02 PM

Share

ಬಾಗಲಕೋಟೆ: ಇತ್ತೀಚೆಗೆ ಆತ್ಮಹತ್ಯೆ(suicide) ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ತಾಯಿಯೊಬ್ಬಳು ತನ್ನ ಇಬ್ಬರು ಪುತ್ರಿಯರ ಜತೆ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಹನುಮಾಪುರದಲ್ಲಿ ನಡೆದಿತ್ತು. ಅಲ್ಲದೇ ಹಾಸನದಲ್ಲೂ ಸಹ ತಾಯಿ ತನ್ನ ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಳು. ಅಲ್ಲದೇ ಬಾಲಕೋಟೆ ಜಿಲ್ಲೆ ತಿಮ್ಮಪೂರ ಗ್ರಾಮದಲ್ಲಿ ಕಳೆದ ವಾರ ಅಷ್ಟೇ ತಾಯೊಯೊಬ್ಬರು ತನ್ನ ಮೂವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣಗಳು ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು(ಜನವರಿ 17) ಮತ್ತೊಂದು ಸಾಮೂಹಿಕ ಆತ್ಮಹತ್ಯೆ  ಪ್ರಕರಣ ವರದಿಯಾಗಿದೆ. ಹೌದು.. ತಾಯಿಯೊಬ್ಬಳು ತನ್ನ ಇಬ್ಬರು ಪುತ್ರಿಯರ ಜತೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬಾಗಲಕೋಟೆ (Bagalkot) ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮ ಬಳಿಯ ಘಟಪ್ರಭಾ ನದಿಗೆ ಹಾರಿ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: Bagalkot: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಉಮಾ ಮಾಸರೆಡ್ಡಿ(45), ಐಶ್ವರ್ಯ(20), ಸೌಂದರ್ಯ(18) ಮೃತ ದುರ್ವೈವಿಗಳು.  ಸೂಳಿಬಾವಿ ನಿವಾಸಿಗಳಾದ ಉಮಾ ಮಾಸರೆಡ್ಡಿ ಹಾಗೂ ಪುತ್ರಿಯರಾದ ಐಶ್ವರ್ಯ(20), ಸೌಂದರ್ಯ(18) ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಕಮತಗಿ ಬಳಿ ಸೇತುವೆಯಿಂದ ನದಿಗೆ ಹಾರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಲಪ್ರಭಾ ನದಿಯಿಂದ ಶವಗಳನ್ನು ಹೊರತೆಗೆದರು. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿಗಳ ಮೈ ತೊಳೆಯಲು ಹೋಗಿದ್ದ ದಂಪತಿ ಸಾವು

ತುಮಕೂರು: ಕುರಿಗಳ ಮೈ ತೊಳೆಯಲು ಕಟ್ಟೆಗಿಳಿದ ದಂಪತಿ ದುರಂತ ಅಂತ್ಯಕಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮುಗಳೂರು ಗೊಲ್ಲರಹಟ್ಟಿ ಬಳಿಯ ಕಟ್ಟೆಯಲ್ಲಿ ನಡೆದಿದೆ. ಕಟ್ಟೆಯಲ್ಲಿ ಕುರಿಗಳ ಮೈತೊಳೆಯುತ್ತಿದ್ದ ವೇಳೆ ದಂಪತಿ ಮುಳುಗಿ ಸಾವನ್ನಪ್ಪಿದ್ದಾರೆ. ಜುಂಜೇಗೌಡ(30), ಶಿವಲಿಂಗಮ್ಮ(27) ಮೃತ ದಂಪತಿ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​