Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ, ನಾಲ್ವರು ವಿದ್ಯಾರ್ಥಿಗಳ ಸಾವು

ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ನಾಲ್ಕು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ.

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ, ನಾಲ್ವರು ವಿದ್ಯಾರ್ಥಿಗಳ ಸಾವು
ಅಪಘಾತ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Jan 29, 2024 | 10:03 AM

ಬಾಗಲಕೋಟೆ, ಜನವರಿ 29: ಶಾಲಾ ಬಸ್ (School Bus) ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ (Jamakandi) ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಸಂಭವಿಸಿದೆ. ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಮೃತರು ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಾಹವೀರ ಅಲ್ಪಾಂಖ್ಯಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಗಿಸಿಕೊಂಡು ಕವಟಗಿ ಗ್ರಾಮದ‌ ಕಡೆ ಶಾಲಾ ಬಸ್​ನಲ್ಲಿ ಹೊರಡುವಾಗ ದುರಂತ ಸಂಭವಿಸಿದೆ.

ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಜಗದೀಶ್ ಗುಡಗುಂಟಿ ಭೇಟಿ ನೀಡಿದರು. ಈ ವೇಳೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೇ ಮಾಜಿ ಶಾಸಕ ಆನಂದ ನ್ಯಾಮಗೌಡ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು.  ಕುಟುಂಬಸ್ಥರಿಗೆ ಪರಿಹಾರ ಕೊಡಿಸುವುದಾಗಿ ಇಬ್ಬರೂ ನಾಯಕರು​​ ಭರವಸೆ ನೀಡಿದರು.

4 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, 22 ಮಕ್ಕಳಿಗೆ ಗಾಯಗಳಾಗಿವೆ

ಪ್ರಕರಣ ಸಂಬಂಧ  ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಮಾತನಾಡಿ,  ಮಧ್ಯರಾತ್ರಿ 12 ಗಂಟೆಗೆ ಆಲಗೂರು ಬಳಿ ದುರ್ಘಟನೆ ನಡೆದಿದೆ. ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, 22 ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ವಿಜಯಪುರಕ್ಕೆ ರವಾನೆ ಮಾಡಲಾಗಿದೆ. ಅಪಘಾತ ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಗದಗ: ಸರ್ಕಾರಿ ಬಸ್​-ಲಾರಿ ನಡುವೆ ಅಪಘಾತ; ಇಬ್ಬರು ದುರ್ಮರಣ

ಶಾಲಾ ಬಸ್ ಚಾಲಕ ಮತ್ತು ಟ್ರ್ಯಾಕ್ಟರ್ ಚಾಲಕನನ್ನು ವಿಚಾರಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಟ್ರ್ಯಾಕ್ಟರ್ ಚಾಲಕರಿಗೆ ಟ್ರಾಫಿಕ್ಸ್ ರೂಲ್ಸ್ ಬಗ್ಗೆ ಅರಿವು ಮೂಡಿಸ್ತಿದ್ದೇವೆ. ಆದರೂ ಸಹ ಇಂತಹ ದುರ್ಘಟನೆ ಸಂಭವಿಸಿದ್ದು ದುರದೃಷ್ಟಕರ. ಶಾಲಾ ಬಸ್​ಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ತುಂಬಬೇಡಿ. ಬೈಕ್‌ ಸವಾರರು ಪ್ರಯಾಣಿಸುವ ವೇಳೆ, ಹೆಲ್ಮೇಟ್ ಧರಿಸಿ ಎಂದು ಮನವಿ ಮಾಡಿದರು.

ಭೀಕರ ರಸ್ತೆ ಅಪಘಾತ, ನಾಲ್ವರು ದುರ್ಮರಣ

ಕಳೆದ ನಾಲ್ಕು ದಿನಗಳ ಹಿಂದೆ ಇದೇ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬಳಿಯ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಕಾಮಾಕ್ಷಿ ಬಡಿಗೇರ(30), ತುಕಾರಾಮ ತಳೇವಾಡ(30) ಮಲ್ಲು ಪೂಜಾರಿ(25), ಕಲ್ಲು ಕವಟಗಿ(35) ಮೃತ ದುರ್ದೈವಿಗಳು. ಬಾದಾಮಿ ಬನಶಂಕರಿ ಜಾತ್ರೆಗೆ ಹೋಗಿ, ವಾಪಸ್ ತಮ್ಮ ಊರಿಗೆ ಹೋಗುವಾಗ ಅನಗವಾಡಿ ಗ್ರಮದ ಬಳಿ ಚಾಲಕನ ನಿಯಂತ್ರ ತಪ್ಪಿ ಕಾರು ನಿಂತಿದ್ದ ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಓರ್ವ ಮಹಿಳೆ ಸೇರಿಂದತೆ ನಾಲ್ವರು ಸ್ಥಳದಲ್ಲೆ ಸಾವೀಗಿಡಾಗಿದ್ದರು. ಮೃತರು ಬಸವನಬಾಗೇವಾಡಿ ತಾಲೂಕಿನ ಹೊನಗನಳ್ಳಿ ಮೂಲದವರು ಎಂದು ತಿಳಿದುಬಂದಿತ್ತು. ಬೀಳಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:40 am, Mon, 29 January 24

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ