AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಆಯ್ತು ಈಗ ಬಾಗಲಕೋಟೆಯಲ್ಲೂ ‘ಕೈ’ ಕೊಟ್ಟ ನಾಯಕರಿಗೆ ಅಮಾನತು ಶಿಕ್ಷೆ!

ದಾವಣಗೆರೆಯಲ್ಲಿ ಪಕ್ಷವಿರೋಧಿ ಚಟುವಟಿಕೆಗಾಗಿ ಕಾಂಗ್ರೆಸ್ ಮುಖಂಡರ ಅಮಾನತಿನ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿದ ಆರೋಪದ ಮೇಲೆ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸೇರಿ ಮೂವರು ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಲಾಗಿದೆ. ಪಕ್ಷವಿರೋಧಿ ಚಟುವಟಿಕೆಗಳಿಗೆ ಹೈಕಮಾಂಡ್ ಸರಣಿ ತಲೆದಂಡದ ಮೂಲಕ ಶಿಸ್ತಿನ ಎಚ್ಚರಿಕೆ ನೀಡಿದೆ.

ದಾವಣಗೆರೆ ಆಯ್ತು ಈಗ ಬಾಗಲಕೋಟೆಯಲ್ಲೂ 'ಕೈ' ಕೊಟ್ಟ ನಾಯಕರಿಗೆ ಅಮಾನತು ಶಿಕ್ಷೆ!
ಅಮಾನತುಗೊಂಡ ಕಾಂಗ್ರೆಸ್ ಮುಖಂಡರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 28, 2026 | 12:09 PM

Share

ಬಾಗಲಕೋಟೆ, ಏಪ್ರಿಲ್ 28: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿನ ಪಕ್ಷವಿರೋಧಿ ಚಟುವಟಿಕೆಗಾಗಿ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಅಮಾನತು (Suspend) ಮಾಡಿದ್ದ ಕಾಂಗ್ರೆಸ್‌ ಹೈಕಮಾಂಡ್, ಈಗ ಬಾಗಲಕೋಟೆಯಲ್ಲೂ ಅಂತಹದ್ದೇ ಕಠಿಣ ಕ್ರಮದ ಮೂಲಕ ಶಿಸ್ತಿನ ಬಿಸಿ ಮುಟ್ಟಿಸಿದೆ. ಬಾಗಲಕೋಟೆ ಉಪಚುನಾವಣೆಯಲ್ಲೂ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕೈ ಮುಖಂಡರಿಂದ ದೋಖಾ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಮತಗಿ ಪಟ್ಟಣದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಕೆಲಸ ಮಾಡುವ ಬದಲು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್ ಜಮಖಂಡಿ ಮತ್ತು ಗುರುಲಿಂಗ ‌ಪಾಟೀಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ನೋಟಿಸ್‌ಗೆ ಬೆಲೆ ಕೊಡದ ನಾಯಕರು

ಸ್ಥಳೀಯ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಅವರು ಈ ಮುಖಂಡರ ವಿರುದ್ಧ ದೂರು ನೀಡಿ, ಉಚ್ಚಾಟನೆಗೆ ಪತ್ರ ಬರೆದಿದ್ದರು. ಈ ದೂರಿನ ಆಧಾರದ ಮೇಲೆ ಜಿಲ್ಲಾಧ್ಯಕ್ಷರು ಕಾರಣ ಕೇಳಿ ನೋಟಿಸ್ ನೀಡಿದ್ದರೂ, ಮುಖಂಡರಿಂದ ಯಾವುದೇ ಸಮರ್ಪಕ ಉತ್ತರ ಬಾರದ ಕಾರಣ ಅಂತಿಮವಾಗಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು

ಬಾಗಲಕೋಟೆ ಚುನಾವಣೆಯಲ್ಲಿ ಕಮತಗಿ ಅತ್ಯಂತ ಪ್ರಮುಖ ಪಟ್ಟಣವಾಗಿದ್ದು, ಇಲ್ಲಿನ ಮತಗಳು ಅಭ್ಯರ್ಥಿಗಳ ಜಯಾಪಜಯ ನಿರ್ಧರಿಸುತ್ತವೆ. ಇಂತಹ ನಿರ್ಣಾಯಕ ಸಂದರ್ಭದಲ್ಲೇ ಪ್ರಭಾವಿ ನಾಯಕರು ಪಕ್ಷಕ್ಕೆ ದೋಖಾ ಮಾಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದೆ. ಒಟ್ಟಾರೆ, ದಾವಣಗೆರೆಯಿಂದ ಬಾಗಲಕೋಟೆಯವರೆಗೆ ‘ಒಳಪೆಟ್ಟು’ ನೀಡುವ ನಾಯಕರಿಗೆ ಹೈಕಮಾಂಡ್ ಸರಣಿ ತಲೆದಂಡದ ರುಚಿ ತೋರಿಸುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More