AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಮಕ್ಕಳು ಸಾರಾಯಿಗೆ ದಾಸರಾಗುತ್ತಿದ್ದಾರೆ ಎಂದು ಪೋಷಕರ ಆಕ್ರೋಶ

ಹೆಸರಿಗೆ ಹಾಗೂ ನೋಡೋಕೆ ಪಾನ್ ಶಾಪ್ ಹಾಗೂ ಕಿರಾಣಿ ಅಂಗಡಿಗಳಂತೆ ಕಾಣುವ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬಂಡಿಗಣಿ ಕ್ರಾಸ್ ಹಾಗೂ ಕುಲಹಳ್ಳಿಯ ಘಟಪ್ರಭಾ ಎಡದಂಡೆ ಕಾಲುವೆ ಬಳಿ ಸುಮಾರು 6 ಅಂಗಡಿಗಳಿದ್ದು, ಅವುಗಳಲ್ಲಿ ಹೀಗೆ ಮದ್ಯ ಮಾರಾಟ ಮಾಡಲಾಗುತ್ತಿದೆಯಂತೆ.

ಪಾನ್ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಮಕ್ಕಳು ಸಾರಾಯಿಗೆ ದಾಸರಾಗುತ್ತಿದ್ದಾರೆ ಎಂದು ಪೋಷಕರ ಆಕ್ರೋಶ
ಪಾನ್ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ
TV9 Web
| Edited By: |

Updated on:Jun 12, 2022 | 7:16 PM

Share

ಬಾಗಲಕೋಟೆ: ಅವು ಹೆಸರಿಗೆ ಪಾನ್, ಬೀಡಾ ಅಂಗಡಿಗಳು. ಆದ್ರೆ ಅಲ್ಲಿ ಮಾರಾಟ ಆಗೋದೇ ಬೇರೆ. ಅಕ್ರಮ ಮದ್ಯ ಮಾರಾಟದಿಂದ ಸುತ್ತಮುತ್ತಲಿನ ಊರಿನ ಯುವಕರು ಹಾದಿ ತಪ್ಪುತ್ತಿದ್ದಾರೆ. ಹೀಗಾಗಿ ಆ ಯುವಕರ ಪೋಷಕರು ಇಂದು ಅಕ್ರಮ ಮದ್ಯ ಮಾರಾಟ ಅಂಗಡಿಗಳಿಗೆ ಮುತ್ತಿಗೆ ಹಾಕಿ ಬಂದ್ ಮಾಡುವಂತೆ ಆಗ್ರಹ ಮಾಡಿದ್ರು.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಕ್ರಾಸ್ ಹಾಗೂ ಕುಲಹಳ್ಳಿಯ ಘಟಪ್ರಭಾ ಎಡದಂಡೆ ಕಾಲುವೆಯ ಬಳಿ ಹೆಸರಿಗೆ ಹಾಗೂ ನೋಡೋಕೆ ಪಾನ್ ಶಾಪ್ ಹಾಗೂ ಕಿರಾಣಿ ಅಂಗಡಿಗಳಂತೆ ಕಾಣುವ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬಂಡಿಗಣಿ ಕ್ರಾಸ್ ಹಾಗೂ ಕುಲಹಳ್ಳಿಯ ಘಟಪ್ರಭಾ ಎಡದಂಡೆ ಕಾಲುವೆ ಬಳಿ ಸುಮಾರು 6 ಅಂಗಡಿಗಳಿದ್ದು, ಅವುಗಳಲ್ಲಿ ಹೀಗೆ ಮದ್ಯ ಮಾರಾಟ ಮಾಡಲಾಗುತ್ತಿದೆಯಂತೆ. ಹೀಗಾಗಿ ಅಕ್ಕಪಕ್ಕದ ಗ್ರಾಮಗಳ ಯುವಕರು ಮದ್ಯದ ದಾಸರಾಗುತ್ತಿದ್ದಾರೆ. ಹೀಗಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ಮುಂದೆ ಬಂದ ಬಂಡಿಗಣಿ ಗ್ರಾಮದ ಮಹಿಳೆಯರು ಗುಂಪು ಹಿಡಿಶಾಪ ಹಾಕಿದ್ರು. ಅಲ್ಲದೇ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳನ್ನು ಬಂದ್ ಮಾಡುವಂತೆ ಮಹಿಳೆಯರು ಆಗ್ರಹ ಮಾಡಿದರು

“ಇಲ್ಲಿ ಪಾನ್ ಅಂಗಡಿಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಹಾಡಹಗಲೇ ಇಂತಹ ದಂಧೆ ನಡೆದರೂ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಊರಲೇ ಆಕ್ರಮವಾಗಿ ಸಿಗುವ ಸಾರಾಯಿ ಹಿನ್ನೆಲೆ ನಮ್ಮ ಮಕ್ಕಳು ಚಿಕ್ಕ ವಯಸ್ಸಲ್ಲೇ ಕುಡಿತದ ದಾಸರಾಗಿ ಆರೋಗ್ಯ ಹಾಳು ಮಾಡಿಕೊಳ್ಳೋದರ ಜೊತೆಗೆ ನಮ್ಮ ಮನೆತನ ಹಾಳಾಗುತ್ತಿವೆ. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕು” ಎಂದು ಗ್ರಾಮದ ಬೋರವ್ವ ಬೆಳಗಲಿ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಎಸ್.​ಸಿ, ಎಸ್​​.ಟಿ ಮನೆಗಳ ನಿರ್ಮಾಣಕ್ಕೆ 2 ಲಕ್ಷ ನೀಡಲು ತೀರ್ಮಾನಿಸಿದ ಸರ್ಕಾರ : ಸಿಎಂ ಬೊಮ್ಮಾಯಿ

ಪಕ್ಕದಲ್ಲಿ ಶಾಲೆ ಇದ್ದರೂ ಎಗ್ಗಿಲ್ಲದೇ ಸಾಗುತ್ತಿದೆ ಸಾರಾಯಿ ದಂಧೆ ಇನ್ನು ಅಕ್ರಮ ಮದ್ಯ ಮಾರಾಟ ಮಾಡುವುದು ಯಾರಿಗೂ ಗೊತ್ತಾಗಬಾರದು ಅನ್ನೋ ಉದ್ದೇಶಕ್ಕೆ ಅಂಗಡಿಕಾರರು ಈ ರೀತಿ ಪಾನ್ ಶಾಪ್ ಹಾಗೂ ಕಿರಾಣಿ ಅಂಗಡಿಗಳನ್ನು ಹಾಕಿಕೊಂಡಿದ್ದಾರೆ ಎನ್ನಲಾಗ್ತಿದೆ. ಇನ್ನು ಈ ಅಕ್ರಮ ಮದ್ಯ ಮಾರಾಟ ಮಾಡುವ ಅಂಗಡಿಗಳ ಪಕ್ಕದಲ್ಲಿಯೇ ಶಾಲೆ ಇದ್ರೂ ಕೂಡಾ ಯಾವುದಕ್ಕೂ ಡೋಂಟ್ ಕೇರ್ ಅನ್ನುವಂತಿದೆ. ಪುರುಷರು ಅಷ್ಟೇ ಅಲ್ಲದೇ ಕಾಲೇಜು ಯುವಕರು ಅಲ್ದೇ ಬಾಲಕರು ಕೂಡಾ ಮದ್ಯದ ದಾಸರಾಗಿದ್ದಾರೆ ಅನ್ನೋದು ಮಹಿಳೆಯರ ಗಂಭೀರ ಆರೋಪವಾಗಿದೆ. ಇನ್ನು ಮದ್ಯ ಸೇವಿಸುವವರು ದಾರಿ ಹೋಕರಿಗೆ ಇನ್ನಿಲ್ಲದ ಕಿರಿಕಿರಿ ಮಾಡ್ತಿದಾರಂತೆ. ಈ ಬಗ್ಗೆ ಎರಡು ಸಾರಿ ಪಕ್ಕದ ಪೊಲೀಸ್ ಠಾಣೆಗೆ ದೂರು ಕೊಡಲಾಗಿತ್ತು. ಆಗ ಒಂದೆರಡು ದಿನ ಅಂಗಡಿಗಳು ಬಂದ್ ಆಗಿದ್ದವು. ಪುನಃ ಮತ್ತೆ ಆರಂಭಗೊಂಡವು. ಮದ್ಯದ ಅಂಗಡಿಗಳಿಂದ ಊರಲ್ಲಿನ ಯುವಕರು ಹಾಳಾಗಿ ಹೋಗ್ತಿದಾರೆ. ಮಧ್ಯರಾತ್ರಿಯವರೆಗೂ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯುವಕರು ಕೆಲಸಕ್ಕೆ ಹೋಗದೆ ಮದ್ಯದ ದಾಸರಾಗುತ್ತಿದ್ದಾರೆ.

ಒಟ್ಟಾರೆ ಕಿರಾಣಿ, ಪಾನ್ ಶಾಪ್ ಅಂಗಡಿಗಳಲ್ಲಿ ಬೇಕಾಬಿಟ್ಟಿ ಮದ್ಯ ಮಾರಾಟ ಎಗ್ಗಿಲ್ಲದೇ ನಡೆದಿದೆ. ಸಂಬಂಧಿಸಿದ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟದ ಅಂಗಡಿಗಳನ್ನು ಬಂದ್ ಮಾಡಿಸುವ ಅಗತ್ಯವಿದೆ.

ವರದಿ: ರವಿ ಮೂಕಿ, ಟಿವಿ9 ಬಾಗಲಕೋಟೆ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:16 pm, Sun, 12 June 22

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ