AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: NHM ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ

ಬಾಗಲಕೋಟೆ ಜಿಲ್ಲಾ ಆರೋಗ್ಯ ಇಲಾಖೆ ಮೇಲಿಂದ ಮೇಲೆ ಅನಾರೋಗ್ಯಕ್ಕೆ ಈಡಾಗುತ್ತಿದೆ. ಡಿಹೆಚ್​ಒ ಹುದ್ದೆಗಾಗಿ ತಿಕ್ಕಾಟ, ಖುರ್ಚಿ ಕಚ್ಚಾಟ ನಡೆಯುತ್ತಲೇ ‌ಇದೆ. ಈಗ ಹಿಂದಿನ ಡಿಹೆಚ್​ಒ ಮಾಡಿದ 92 ಹುದ್ದೆ ನೇಮಕಾತಿ ರದ್ದು ಮಾಡಲಾಗಿದೆ. ಈ ಮೂಲಕ ಮತ್ತೆ ಆರೋಗ್ಯ ಇಲಾಖೆ ಚರ್ಚೆಗೆ ಬಂದಿದೆ.

ಬಾಗಲಕೋಟೆ: NHM ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ
ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 07, 2024 | 9:03 PM

Share

ಬಾಗಲಕೋಟೆ, ಆ.07: ಜಿಲ್ಲಾ ಆರೋಗ್ಯ ಇಲಾಖೆ ಒಂದಿಲ್ಲೊಂದು ವಿವಾದದಿಂದ ಸುದ್ದಿಯಲ್ಲಿರುತ್ತದೆ. ಕಳೆದ ವರ್ಷ ಡಿಹೆಚ್​ಒ(DHO) ಹುದ್ದೆಗಾಗಿ ಬಾಗಲಕೋಟೆ(Bagalakote) ಶಾಸಕ ಹೆಚ್​​ವೈ ಮೇಟಿ ಅಳಿಯ ರಾಜಕುಮಾರ ಯರಗಲ್ ಹಾಗೂ ಜಯಶ್ರಿ ಎಮ್ಮಿ ಮಧ್ಯೆ ತಿಕ್ಕಾಟ ನಡೆದಿತ್ತು. ಸರಕಾರದ ಆದೇಶದ ಪ್ರಕಾರ ರಾಜಕುಮಾರ ಯರಗಲ್, ‘ನಾನು ಡಿಹೆಚ್​ಒ ಎಂದು ಬಂದರೆ, ಜಯಶ್ರಿ ಅವರು ನನ್ನನ್ನು ವರ್ಗಾವಣೆ ಮಾಡಲು ಬರೋದಿಲ್ಲ ಎಂದು ಕೆಎಟಿ ಮೊರೆ ಹೋಗಿದ್ದರು. ಈ ಮಧ್ಯೆ ರಾಜಕುಮಾರ ಯರಗಲ್ 92 ಎನ್​ಹೆಚ್​ಎಮ್ ಹುದ್ದೆ ನೇಮಕ ಮಾಡಿದ್ದರು. ಆದರೆ, ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ನಿಯಮ ಪಾಲಿಸಿಲ್ಲ ಎಂದು ನಿಕಟಪೂರ್ವ ಡಿಹೆಚ್​ಒ ಜಯಶ್ರಿ ಎಮ್ಮಿ ಸಿಇಒ ಅವರಿಗೆ ವರದಿ ಮಾಡಿದ್ದಾರೆ. ಅದನ್ನು ಆಧರಿಸಿ ಸಿಇಒ ಅವರು ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯ ಸಂಘಕ್ಕೆ ಸಿಇಒ ಅಧ್ಯಕ್ಷರಿದ್ದು, ಸಿಇಒ ಗಮನಕ್ಕೆ ತರದೆ ನೇಮಕಾತಿ ಆದ ಹಿನ್ನೆಲೆ 92 ಹುದ್ದೆ ರದ್ದು ಮಾಡಿದ್ದಾರೆ.

ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ; 92 ಜನರ ಸ್ಥಿತಿ ಆತಂತ್ರ

92 ಹುದ್ದೆಗಳಲ್ಲಿ ಆಯುಷ್ ವೈದ್ಯರು, ಸ್ಟಾಪ್ ನರ್ಸ್, ಡಿ ದರ್ಜೆ ನೌಕರರಿದ್ದಾರೆ‌. ಎಲ್ಲರೂ ಈಗಾಗಲೇ ಯರಗಲ್ ಆದೇಶದ ಮೇರೆಗೆ ಕರ್ತವ್ಯದ ಮೇಲಿದ್ದರು. ಆದರೆ, ಈಗ ಸಿಇಒ ಅವರು ಎಲ್ಲರನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದ್ದಾರೆ. ಇದರಿಂದ 92 ಜನರ ಸ್ಥಿತಿ ಆತಂತ್ರವಾಗಿದೆ. ನೇಮಕಾತಿ ವೇಳೆ ಲಕ್ಷಾಂತರ ರೂ. ಪಡೆದು ನೇಮಕ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೂಡ ಇದೆ.

ಇದನ್ನೂ ಓದಿ:ಹಾಲಿ, ಮಾಜಿ ಶಾಸಕರು ಮತ್ತು ರಾಜಕಾರಣಿಗಳ ವಿರುದ್ಧ 132 ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲು

ಆದರೆ, ಈಗ ಎಲ್ಲ ಹುದ್ದೆ ರದ್ದು ಮಾಡಿದ ಸಿಇಒ, ಆರೋಗ್ಯ ಇಲಾಖೆಗೆ ಯರಗಲ್‌ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಬರೆದಿದ್ದಾರೆ. ಇಲ್ಲಿ ಕೇವಲ 92 ಹುದ್ದೆ ರದ್ದು ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ. ಒಟ್ಟಿನಲ್ಲಿ ಆರೋಗ್ಯ ಇಲಾಖೆ ಮೇಲಿಂದ ಮೇಲೆ ಸುದ್ದಿಯಾಗುತ್ತಿದ್ದು, ನೌಕರಿ ಕಳೆದುಕೊಂಡವರು ಮುಂದಿನ ನಡೆ ಏನು ಎಂಬುದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್