ಬಾಗಲಕೋಟೆ: NHM ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ

ಬಾಗಲಕೋಟೆ ಜಿಲ್ಲಾ ಆರೋಗ್ಯ ಇಲಾಖೆ ಮೇಲಿಂದ ಮೇಲೆ ಅನಾರೋಗ್ಯಕ್ಕೆ ಈಡಾಗುತ್ತಿದೆ. ಡಿಹೆಚ್​ಒ ಹುದ್ದೆಗಾಗಿ ತಿಕ್ಕಾಟ, ಖುರ್ಚಿ ಕಚ್ಚಾಟ ನಡೆಯುತ್ತಲೇ ‌ಇದೆ. ಈಗ ಹಿಂದಿನ ಡಿಹೆಚ್​ಒ ಮಾಡಿದ 92 ಹುದ್ದೆ ನೇಮಕಾತಿ ರದ್ದು ಮಾಡಲಾಗಿದೆ. ಈ ಮೂಲಕ ಮತ್ತೆ ಆರೋಗ್ಯ ಇಲಾಖೆ ಚರ್ಚೆಗೆ ಬಂದಿದೆ.

ಬಾಗಲಕೋಟೆ: NHM ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ
ನೇಮಕಾತಿಯಲ್ಲಿ ಅಕ್ರಮ ಆರೋಪ; 92 ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 07, 2024 | 9:03 PM

ಬಾಗಲಕೋಟೆ, ಆ.07: ಜಿಲ್ಲಾ ಆರೋಗ್ಯ ಇಲಾಖೆ ಒಂದಿಲ್ಲೊಂದು ವಿವಾದದಿಂದ ಸುದ್ದಿಯಲ್ಲಿರುತ್ತದೆ. ಕಳೆದ ವರ್ಷ ಡಿಹೆಚ್​ಒ(DHO) ಹುದ್ದೆಗಾಗಿ ಬಾಗಲಕೋಟೆ(Bagalakote) ಶಾಸಕ ಹೆಚ್​​ವೈ ಮೇಟಿ ಅಳಿಯ ರಾಜಕುಮಾರ ಯರಗಲ್ ಹಾಗೂ ಜಯಶ್ರಿ ಎಮ್ಮಿ ಮಧ್ಯೆ ತಿಕ್ಕಾಟ ನಡೆದಿತ್ತು. ಸರಕಾರದ ಆದೇಶದ ಪ್ರಕಾರ ರಾಜಕುಮಾರ ಯರಗಲ್, ‘ನಾನು ಡಿಹೆಚ್​ಒ ಎಂದು ಬಂದರೆ, ಜಯಶ್ರಿ ಅವರು ನನ್ನನ್ನು ವರ್ಗಾವಣೆ ಮಾಡಲು ಬರೋದಿಲ್ಲ ಎಂದು ಕೆಎಟಿ ಮೊರೆ ಹೋಗಿದ್ದರು. ಈ ಮಧ್ಯೆ ರಾಜಕುಮಾರ ಯರಗಲ್ 92 ಎನ್​ಹೆಚ್​ಎಮ್ ಹುದ್ದೆ ನೇಮಕ ಮಾಡಿದ್ದರು. ಆದರೆ, ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ನಿಯಮ ಪಾಲಿಸಿಲ್ಲ ಎಂದು ನಿಕಟಪೂರ್ವ ಡಿಹೆಚ್​ಒ ಜಯಶ್ರಿ ಎಮ್ಮಿ ಸಿಇಒ ಅವರಿಗೆ ವರದಿ ಮಾಡಿದ್ದಾರೆ. ಅದನ್ನು ಆಧರಿಸಿ ಸಿಇಒ ಅವರು ಆರೋಗ್ಯ ಇಲಾಖೆ ಜಿಲ್ಲಾ ಆರೋಗ್ಯ ಸಂಘಕ್ಕೆ ಸಿಇಒ ಅಧ್ಯಕ್ಷರಿದ್ದು, ಸಿಇಒ ಗಮನಕ್ಕೆ ತರದೆ ನೇಮಕಾತಿ ಆದ ಹಿನ್ನೆಲೆ 92 ಹುದ್ದೆ ರದ್ದು ಮಾಡಿದ್ದಾರೆ.

ಹುದ್ದೆ ನೇಮಕಾತಿ ರದ್ದುಗೊಳಿಸಿದ ಸಿಇಒ; 92 ಜನರ ಸ್ಥಿತಿ ಆತಂತ್ರ

92 ಹುದ್ದೆಗಳಲ್ಲಿ ಆಯುಷ್ ವೈದ್ಯರು, ಸ್ಟಾಪ್ ನರ್ಸ್, ಡಿ ದರ್ಜೆ ನೌಕರರಿದ್ದಾರೆ‌. ಎಲ್ಲರೂ ಈಗಾಗಲೇ ಯರಗಲ್ ಆದೇಶದ ಮೇರೆಗೆ ಕರ್ತವ್ಯದ ಮೇಲಿದ್ದರು. ಆದರೆ, ಈಗ ಸಿಇಒ ಅವರು ಎಲ್ಲರನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದ್ದಾರೆ. ಇದರಿಂದ 92 ಜನರ ಸ್ಥಿತಿ ಆತಂತ್ರವಾಗಿದೆ. ನೇಮಕಾತಿ ವೇಳೆ ಲಕ್ಷಾಂತರ ರೂ. ಪಡೆದು ನೇಮಕ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೂಡ ಇದೆ.

ಇದನ್ನೂ ಓದಿ:ಹಾಲಿ, ಮಾಜಿ ಶಾಸಕರು ಮತ್ತು ರಾಜಕಾರಣಿಗಳ ವಿರುದ್ಧ 132 ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲು

ಆದರೆ, ಈಗ ಎಲ್ಲ ಹುದ್ದೆ ರದ್ದು ಮಾಡಿದ ಸಿಇಒ, ಆರೋಗ್ಯ ಇಲಾಖೆಗೆ ಯರಗಲ್‌ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಬರೆದಿದ್ದಾರೆ. ಇಲ್ಲಿ ಕೇವಲ 92 ಹುದ್ದೆ ರದ್ದು ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ. ಒಟ್ಟಿನಲ್ಲಿ ಆರೋಗ್ಯ ಇಲಾಖೆ ಮೇಲಿಂದ ಮೇಲೆ ಸುದ್ದಿಯಾಗುತ್ತಿದ್ದು, ನೌಕರಿ ಕಳೆದುಕೊಂಡವರು ಮುಂದಿನ ನಡೆ ಏನು ಎಂಬುದು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us