ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ. ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) […]

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆ?
ಸಾಧು ಶ್ರೀನಾಥ್​

Updated on: Jan 01, 2020 | 10:32 AM

ಬಾಗಲಕೋಟೆ: ಪ್ರೀತಿಸುತ್ತಿದ್ದ ಯುವಕನಿಂದಲೇ ಅಪ್ರಾಪ್ತೆ ಕೊಲೆಯಾಗಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್‌.ಪಿ. ಗ್ರಾಮದ ಬಳಿ ನಡೆದಿದೆ. 10ನೇ ತರಗತಿ ಓದುತ್ತಿದ್ದ ದ್ಯಾಮವ್ವ ಬೂದಿಹಾಳ(16) ಮೃತ ದುರ್ದೈವಿ.

ಕೆಲ ತಿಂಗಳಿನಿಂದ ದ್ಯಾಮವ್ವ, ಕುಮಾರ್ ಪರಸ್ಪರ ಪ್ರೀತಿಸ್ತಿದ್ದರು. ನಿನ್ನೆ ಶಾಲೆಯಿಂದ ದ್ಯಾಮವ್ವಳನ್ನ ಕುಮಾರ್ ಕರೆದೊಯ್ದಿದ್ದಾನೆ. ಅಪ್ರಾಪ್ತೆ ದ್ಯಾಮವ್ವಗೆ ಅರಿಶಿಣದ ತಾಳಿ ಕಟ್ಟಿ ವಿಷಕುಡಿಸಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಅಪ್ರಾಪ್ತೆಗೆ ವಿಷ ಕುಡಿಸಿ ಕೊಲೆ ಮಾಡಿದ್ದಾನೆಂದು ಯುವಕ ಕುಮಾರ್(20) ವಿರುದ್ಧ ಮೃತ ದ್ಯಾಮವ್ವ ಪೋಷಕರು ಆರೋಪಿಸಿದ್ದಾರೆ. ಅಸ್ವಸ್ಥ ಕುಮಾರ್‌ಗೆ ಗುಳೇದಗುಡ್ಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:31 am, Wed, 1 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us