AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿ: ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸ್ಪರ್ಧೆ ಹೇಗಿದೆ? ಈ ಬಾರಿಯಾದರೂ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ ಕೈಹಿಡಿಯುತ್ತಾರಾ ಜನ?

ಬಾದಾಮಿ 2007, 2009, 2019 ರಲ್ಲಿ ಪ್ರವಾಹಕ್ಕೆ ಸಿಲುಕಿದ ಕ್ಷೇತ್ರ. ಸಂತ್ರಸ್ತರು ಇಂದಿಗೂ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಇದೇ ಹಿನ್ನೆಲೆ JDS ನ ಹನುಮಂತ ‌ಮಾವಿನಮರದ ಪ್ರವಾಹ ಸಂತ್ರಸ್ತರ ಮತಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಅವರ ಕಷ್ಟಕ್ಕೆ ಧ್ವನಿಯಾಗುವ ಭರವಸೆ ನೀಡುತ್ತಾ ಮತ ಯಾಚನೆ ಮಾಡುತ್ತಿದ್ದಾರೆ.

ಬಾದಾಮಿ: ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಸ್ಪರ್ಧೆ ಹೇಗಿದೆ? ಈ ಬಾರಿಯಾದರೂ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ ಕೈಹಿಡಿಯುತ್ತಾರಾ ಜನ?
ಹನುಮಂತ ಮಾವಿನಮರದ, ಹೆಚ್ ಡಿ ಕುಮಾರಸ್ವಾಮಿ
Follow us
ಸಾಧು ಶ್ರೀನಾಥ್​
|

Updated on: Mar 07, 2023 | 10:24 AM

ಆ ಕ್ಷೇತ್ರದಲ್ಲಿ ಸದ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶಾಸಕ. ಕಳೆದ ಬಾರಿ ಬಿ. ಶ್ರೀರಾಮುಲು ಹಾಗೂ ಸಿದ್ದರಾಮಯ್ಯ ಮಧ್ಯೆ ನಡೆದಿದ್ದ ತುರುಸಿನ ಸ್ಪರ್ಧೆಯ ಮಧ್ಯೆ ಜೆಡಿಎಸ್ ಅಭ್ಯರ್ಥಿ ಕೂಡ ಎಲ್ಲರ ಗಮನ ಸೆಳೆದಿದ್ದರು. ಈ ಬಾರಿಯ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ (Karnataka Assembly Elections 2023) ಅದೇ ಅಭ್ಯರ್ಥಿ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ‌. ಅದಕ್ಕಾಗಿ ಕ್ಷೇತ್ರದಲ್ಲಿ ಮೊದಲ ಹಂತದ ಪಾದಯಾತ್ರೆ ಮುಗಿಸಿದ್ದಾರೆ. ಸಮಾವೇಶಕ್ಕೆ ದಳಪತಿ ಹೆಚ್​ಡಿ ಕುಮಾರಸ್ವಾಮಿ ಅವರನ್ನೂ ಕರೆಸಿ ಮತಯಾಚನೆ ಮಾಡಿದ್ದಾರೆ. ಹಳ್ಳಿಯಲ್ಲಿ ಪಾದಯಾತ್ರೆ, ಜನರಿಂದ ಅದ್ದೂರಿ ಸ್ವಾಗತ, ಜೆಡಿಎಸ್ (JDS) ಗೆ ಬೆಂಬಲಿಸುವಂತೆ ಮನವಿ, ಕುಂಭ ಹೊತ್ತು ಹೊರಟಿರುವ ನೂರಾರು ಮಹಿಳೆಯರು. ಡೊಳ್ಳು ಕುಣಿತ, ಜೆಸಿಬಿ ಮೂಲಕ ಪುಷ್ಪವೃಷ್ಟಿ. ನಂತರ ಭವ್ಯ ವೇದಿಕೆಯಲ್ಲಿ ಸಮಾವೇಶ. ಈ ದೃಶ್ಯ ಕಂಡುಬಂದಿದ್ದು ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದಲ್ಲಿ (Badami). ಹೌದು ಬಾದಾಮಿ ಕ್ಷೇತ್ರ ಅಂದರೆ ಎಲ್ಲರೂ ಒಂದು ಕ್ಷಣ ತಿರುಗಿ ನೋಡುವಂತಹ ಕ್ಷೇತ್ರ‌. ಯಾಕೆಂದರೆ ಇಲ್ಲಿನ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ. ಕಳೆದ ಬಾರಿ ಬಿಜೆಪಿಯಿಂದ ಬಿ ಶ್ರೀರಾಮುಲು – ಸಿದ್ದರಾಮಯ್ಯ ವಿರುದ್ದ ತೊಡೆ ತಟ್ಟಿದ್ದರು. ಇಬ್ಬರ ಮಧ್ಯೆ ಜೆಡಿಎಸ್ ನಿಂದ ಹನುಮಂತ ಮಾವಿನಮರದ ಸಹ ಅಖಾಡದಲ್ಲಿದ್ದು ಗಮನ ಸೆಳೆದಿದ್ದರು.

ಇದೀಗ ಹನುಮಂತ ಮಾವಿನಮರದ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭ ಮಾಡಿದ್ದಾರೆ. ಈಗಾಗಲೇ ಹನುಮಂತ ‌ಮಾವಿನಮರ ಅಭ್ಯರ್ಥಿ ಎಂದು ಹೆಚ್ ಡಿಕೆ ಘೋಷಣೆ ಮಾಡಿದ್ದು, ಮಾವಿನಮರದ ಕ್ಷೇತ್ರದಾದ್ಯಂತ ಓಡಾಡಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕಳೆದ 15 ದಿನದಿಂದ ಕ್ಷೇತ್ರದ ಹಳ್ಳಿ ಹಳ್ಳಿಯಲ್ಲಿ ಪಾದಯಾತ್ರೆ ಜೊತೆಗೆ ಗ್ರಾಮ ವಾಸ್ತವ್ಯ ನಡೆಸಿದ್ದ ಹನುಮಂತ ಮಾವಿನಮರದ ಜೆಡಿಎಸ್ ಅನ್ನು ಬೆಂಬಲಿಸುವಂತೆ ಮನವಿ ಮಾಡುತ್ತಾ ಬಂದಿದ್ದಾರೆ.

ಎಲ್ಲ ಕಡೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಸಿಎಂ ಆದಾಗ ಮಾಡಿದ ಕಾರ್ಯಗಳು‌, ಪಂಚರತ್ನ ಯೋಜನೆಗಳನ್ನು ಜನರು ಒಪ್ಪಿಕೊಳ್ಳುತ್ತಿದ್ದಾರೆ‌. ಕ್ಷೇತ್ರದಲ್ಲಿ ಪ್ರವಾಹಪೀಡಿತ ಎಲ್ಲ ಹಳ್ಳಿಗಳಲ್ಲಿ ಪಾದಯಾತ್ರೆ ಮಾಡಿದ್ದೇನೆ. ಇನ್ನೂ ಏಳೆಂಟು ಗ್ರಾಮಗಳ ಸ್ಥಳಾಂತರವಾಗಬೇಕು, ಮೂಲಭೂತ ಸೌಲಭ್ಯ ಕಲ್ಪಿಸುವ ಕಾರ್ಯ ಮಾಡಿಲ್ಲ. ಈ ಬಾರಿ ಸಿದ್ದರಾಮಯ್ಯ ಆಗಲಿ ಯಾರೇ ಸ್ಪರ್ಧೆ ಮಾಡಿದರೂ ಜೆಡಿಎಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೌದು ಬಾದಾಮಿ ಮಲಪ್ರಭಾ ನದಿ ಪ್ರವಾಹಕ್ಕೆ ನಲುಗಿದ ಗ್ರಾಮ. 2007, 2009, 2019 ರಲ್ಲಿ ಪ್ರವಾಹಕ್ಕೆ ಸಿಲುಕಿದ ಕ್ಷೇತ್ರ. ಆದರೆ ಸಂತ್ರಸ್ತರು ಇಂದಿಗೂ ಕೂಡ ಹೊಸ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಇದೇ ಹಿನ್ನೆಲೆ ಹನುಮಂತ ‌ಮಾವಿನಮರದ ಪ್ರವಾಹ ಸಂತ್ರಸ್ತರ ಮತಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಅವರ ಕಷ್ಟಕ್ಕೆ ಧ್ವನಿಯಾಗುವ ಭರವಸೆ ನೀಡುತ್ತಾ ಮತ ಯಾಚನೆ ಮಾಡುತ್ತಿದ್ದಾರೆ. 40 ಪ್ರವಾಹ ಪೀಡಿತ ಹಳ್ಳಿಗಳಲ್ಲಿ ಸಂಚಾರ ಮಾಡಿ ಸಮಸ್ಯೆ ಆಲಿಸಿದ್ದಾರೆ. ನಿರಂತರ 10 ದಿನಗಳ ಕಾಲ ಪಾದಯಾತ್ರೆ, ಗ್ರಾಮ ವಾಸ್ತವ್ಯ ಮಾಡಿದ ಹನುಮಂತ ಮಾವಿನಮರದ ಸೋಮವಾರ ಪಾದಯಾತ್ರೆ ಗ್ರಾಮ ವಾಸ್ತವ್ಯ ಕೊನೆ ದಿನ ಸಮಾವೇಶ ನಡೆಸಿದರು.

ಕುಳಗೇರಿ ಕ್ರಾಸ್ ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭಾಗಿಯಾಗಿದ್ರು. ಇದೆ ವೇಳೆ ಮಾತಾಡಿದ ಹೆಚ್ ಡಿಕೆ ಹಾಗೂ ಸಿಎಂ ಇಬ್ರಾಹಿಂ, ಸಿದ್ದರಾಮಯ್ಯ ಹಾಗೂ ರಾಜ್ಯ ಸರಕಾರ ಮಾಡಾಳು ವಿರೂಪಾಕ್ಷಪ್ಪ ಮಗನ ಮೇಲೆ ಲೋಕಾಯುಕ್ತ ಉದಾಹರಣೆ ನೀಡಿ ತರಾಟೆಗೆ ತೆಗೆದುಕೊಂಡರು.

ಬಾದಾಮಿಯಲ್ಲಿ ಸಮಸ್ಯೆ ಬಹಳ ಇವೆ. ಅದಕ್ಕೇ ಸಿದ್ದರಾಮಣ್ಣ ಯಾಕೆ ಕ್ಷೇತ್ರದಲ್ಲೇ ಇರಲಿಕ್ಕೆ ಒಲ್ಲೆ ಅಂತಾನಾ ಅಂತ ಗೊತ್ತಾಗಿದೆ. ಸಿದ್ದರಾಮಯ್ಯ ಹೆಲಿಕಾಪ್ಟರನ್ಯಾಗ ಬರೋದು, ಶೆಟ್ಟಿ ಮನ್ಯಾಗ ಇರೋದು, ವಾಪಾಸು ಹೋಗೂದು… ಸಿದ್ದರಾಮಯ್ಯ ಮಾಡಿದ್ದೇ ಇಷ್ಟೇ. ಕಾಂಗ್ರೆಸ್ ನವರು ಮನ್ಯಾಗ ಜಗಳ ಹಚ್ಚುವ ಗೃಹಲಕ್ಷ್ಮೀ ಕಾರ್ಯಕ್ರಮ ಮಾಡಿದ್ದಾರೆ. ಮಾಡಾಳ್ ಮಗನ ಹತ್ತಿರ 8 ಕೋಟಿ ಇದೆ.

ಇನ್ನು ಶಾಸಕನ ಮನ್ಯಾಗೇ ಎಷ್ಟಿರಬೇಕು? ಮುಂಡೇವ್ ಎಲ್ಲ ರೊಕ್ಕಾ ಹಾಕೋಂತ ಕುಂತಾವ್. ದೇವೇಗೌಡರಿಗೆ ನಾಲ್ಕು ಪಂಚೆ, ಧೋತರ್ ಬಿಟ್ಟರೆ ಏನೂ ಇಲ್ಲ. ಸಿದ್ದುಗೆ ನಿದ್ದೆ ಚಿಂತೆಯಾದ್ರೆ, ಕುಮಾರಣ್ಣನಿಗೆ ರೈತರ ಚಿಂತೆ ಇದೆ ಎಂದಿದ್ದಾರೆ ಸಿಎಂ ಇಬ್ರಾಹಿಂ. ಮಾಡಾಳು ಮನೆಯಲ್ಲಿ ಕೋಟಿ ಕೋಟಿ ಹಣ ಯಾರದ್ದು? ಅದು ನಿಮ್ಮ ಹಣ, ಯಾವುದೇ ಆಮಿಷಕ್ಕೆ ಬಲಿಯಾಗಬೇಡಿ. ಜೆಡಿಎಸ್ ಗೆ ಆಶೀರ್ವದಿಸಿ ಎಂದು ಕೈ ಮುಗಿದು ಹೆಚ್ ಡಿ ಕೆ ಮನವಿ ಮಾಡಿದರು.

ಒಟ್ಟಿನಲ್ಲಿ ಒಂದು ಕಡೆ ಸಿದ್ದರಾಮಯ್ಯ ಪುನಃ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿ ಎಂದು ಅವರ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ಟಿಕೆಟ್ ಫೈನಲ್ ಆಗಿಲ್ಲ. ಈ ಮಧ್ಯೆ ಜೆಡಿಎಸ್ ಅಭ್ಯರ್ಥಿ ಮಾತ್ರ ಭರ್ಜರಿ ಪ್ರಚಾರ ಆರಂಭಿಸಿದ್ದು, ಮತದಾರ ಯಾರ ಕೈ ಹಿಡಿಯುತ್ತಾರೊ ಕಾದು ನೋಡಬೇಕಿದೆ.

ವರದಿ: ರವಿ ಮೂಕಿ, ಟಿವಿ9, ಬಾಗಲಕೋಟೆ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ