AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ

ಹಲ್ಲೆಗೊಳಗಾದವರಲ್ಲಿ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹ್ಮದ್ ಗುಳೇದಗುಡ್ಡ(18) ಸಮೀರ ಬಳಗಾನೂರ.(20) ಸಾಹಿಲ್ ಪಟಂಗಲಿ(19) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ರಮೇಶ್ ಅದಾಪುರ, ಅನಿಲ ಗುಜ್ಜಲಮಟ್ಟಿ, ಮಹೇಶ, ನಾಗೇಶ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ
ಹಲ್ಲೆಗೊಳಗಾದವರಲ್ಲಿ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
TV9 Web
| Edited By: |

Updated on:Oct 12, 2021 | 10:09 AM

Share

ಬಾಗಲಕೋಟೆ: ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದ ಬಾಲಕರಿಗೆ ಇನ್ನೊಂದು ಸಮುದಾಯದ ಬಾಲಕರು ಕೀಟಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಆಲಂಪೇಟೆಯಲ್ಲಿ ನಡೆದಿದೆ. ರಿಯಾನ್ ಎಂಬ 9ನೇ ತರಗತಿ ಬಾಲಕನಿಗೆ ಇನ್ನಿತರ ಯುವರು ಕಿಚಾಯಿಸಿದ್ದಾರೆ. ನೊಂದ ಬಾಲಕನ ಪರ ಹಾಗೂ ಕೀಟಲೆ ಮಾಡಿದ ಬಾಲಕರ ಪರ ಬಂದ ಯುವಕರ ಮಧ್ಯೆ ಪರಸ್ಪರ ಗಲಾಟೆಯಾಗಿದ್ದು, ಐವರ ಮೇಲೆ ಹಲ್ಲೆ ಮಾಡಲಾಗಿದೆ.

ಹಲ್ಲೆಗೊಳಗಾದವರಲ್ಲಿ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹ್ಮದ್ ಗುಳೇದಗುಡ್ಡ(18) ಸಮೀರ ಬಳಗಾನೂರ.(20) ಸಾಹಿಲ್ ಪಟಂಗಲಿ(19) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ರಮೇಶ್ ಅದಾಪುರ, ಅನಿಲ ಗುಜ್ಜಲಮಟ್ಟಿ, ಮಹೇಶ, ನಾಗೇಶ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರು ನೀಡಿದವರ ವಿರುದ್ಧ ಆಕ್ರೋಶ ಗಲಾಟೆಯಲ್ಲಿ ತನ್ನ ವಿರುದ್ಧ ದೂರು ನೀಡಿದ್ದು ಯಾಕೆ ಎಂದು ಮಂಜು ತಂಗಡಗಿ ಎಂಬ ಯುವಕ ಗಾಯಾಳುಗಳಿಗೆ ಆವಾಜ್ ಹಾಕಿದ್ದಾನೆ. ನನ್ನ ಹೆಸರು ಯಾಕೆ ಪೊಲೀಸರಿಗೆ ಹೇಳಿದ್ದೀರಿ, ನಾನೇನು ಮಾಡಿದ್ದೆ ಎಂದು ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಈಗಾಗಲೇ ಎರಡು ಬಾರಿ ಕೇಸ್ ಆಗಿ ಜೈಲಿಗೆ ಹೋಗಿ ಬಂದಿದ್ದೀನಿ. ನನ್ನ ಹೆಸರು ಇದರಲ್ಲಿ ತಂದರೆ ಎಲ್ಲರಿಗೂ ಚುಚ್ಚಿ (ಒಳಗೆ) ಜೈಲಿಗೆ ಹೋಗುತ್ತೀನಿ ಎಂದು ಬೆದರಿಕೆ ಹಾಕಿದ್ದಾನೆ.

ಎರಡು ಬಾರಿ ಜೈಲಿಗೆ ಹೋಗಿ ಬಂದವನಿಗೆ ಅದೇನು ದೊಡ್ಡದಲ್ಲ. ಮೂರು ತಿಂಗಳಲ್ಲಿ ಹೊರಗೆ ಬರುತ್ತೀನಿ. ಬಂದು ಜಾತಿನಿಂದನೆ ಕೇಸ್ ಹಾಕುತ್ತೀನಿ ಎಂದು ಮಂಜು ತಂಗಡಗಿ ಅವಾಜ್ ಹಾಕಿದ್ದಾನೆ. ಇಲ್ಲ ನಿಮ್ಮ ಹೆಸರು ಗೊಂದಲದಲ್ಲಿ ಹೇಳಿದ್ದೇವೆ ಎಂದು ಗಾಯಾಳು ಯುವಕರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ

ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣ; ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ

Published On - 10:02 am, Tue, 12 October 21

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು