AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ

ಹಲ್ಲೆಗೊಳಗಾದವರಲ್ಲಿ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹ್ಮದ್ ಗುಳೇದಗುಡ್ಡ(18) ಸಮೀರ ಬಳಗಾನೂರ.(20) ಸಾಹಿಲ್ ಪಟಂಗಲಿ(19) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ರಮೇಶ್ ಅದಾಪುರ, ಅನಿಲ ಗುಜ್ಜಲಮಟ್ಟಿ, ಮಹೇಶ, ನಾಗೇಶ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ
ಹಲ್ಲೆಗೊಳಗಾದವರಲ್ಲಿ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
TV9 Web
| Updated By: preethi shettigar|

Updated on:Oct 12, 2021 | 10:09 AM

Share

ಬಾಗಲಕೋಟೆ: ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದ ಬಾಲಕರಿಗೆ ಇನ್ನೊಂದು ಸಮುದಾಯದ ಬಾಲಕರು ಕೀಟಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಆಲಂಪೇಟೆಯಲ್ಲಿ ನಡೆದಿದೆ. ರಿಯಾನ್ ಎಂಬ 9ನೇ ತರಗತಿ ಬಾಲಕನಿಗೆ ಇನ್ನಿತರ ಯುವರು ಕಿಚಾಯಿಸಿದ್ದಾರೆ. ನೊಂದ ಬಾಲಕನ ಪರ ಹಾಗೂ ಕೀಟಲೆ ಮಾಡಿದ ಬಾಲಕರ ಪರ ಬಂದ ಯುವಕರ ಮಧ್ಯೆ ಪರಸ್ಪರ ಗಲಾಟೆಯಾಗಿದ್ದು, ಐವರ ಮೇಲೆ ಹಲ್ಲೆ ಮಾಡಲಾಗಿದೆ.

ಹಲ್ಲೆಗೊಳಗಾದವರಲ್ಲಿ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹ್ಮದ್ ಗುಳೇದಗುಡ್ಡ(18) ಸಮೀರ ಬಳಗಾನೂರ.(20) ಸಾಹಿಲ್ ಪಟಂಗಲಿ(19) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ರಮೇಶ್ ಅದಾಪುರ, ಅನಿಲ ಗುಜ್ಜಲಮಟ್ಟಿ, ಮಹೇಶ, ನಾಗೇಶ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರು ನೀಡಿದವರ ವಿರುದ್ಧ ಆಕ್ರೋಶ ಗಲಾಟೆಯಲ್ಲಿ ತನ್ನ ವಿರುದ್ಧ ದೂರು ನೀಡಿದ್ದು ಯಾಕೆ ಎಂದು ಮಂಜು ತಂಗಡಗಿ ಎಂಬ ಯುವಕ ಗಾಯಾಳುಗಳಿಗೆ ಆವಾಜ್ ಹಾಕಿದ್ದಾನೆ. ನನ್ನ ಹೆಸರು ಯಾಕೆ ಪೊಲೀಸರಿಗೆ ಹೇಳಿದ್ದೀರಿ, ನಾನೇನು ಮಾಡಿದ್ದೆ ಎಂದು ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಈಗಾಗಲೇ ಎರಡು ಬಾರಿ ಕೇಸ್ ಆಗಿ ಜೈಲಿಗೆ ಹೋಗಿ ಬಂದಿದ್ದೀನಿ. ನನ್ನ ಹೆಸರು ಇದರಲ್ಲಿ ತಂದರೆ ಎಲ್ಲರಿಗೂ ಚುಚ್ಚಿ (ಒಳಗೆ) ಜೈಲಿಗೆ ಹೋಗುತ್ತೀನಿ ಎಂದು ಬೆದರಿಕೆ ಹಾಕಿದ್ದಾನೆ.

ಎರಡು ಬಾರಿ ಜೈಲಿಗೆ ಹೋಗಿ ಬಂದವನಿಗೆ ಅದೇನು ದೊಡ್ಡದಲ್ಲ. ಮೂರು ತಿಂಗಳಲ್ಲಿ ಹೊರಗೆ ಬರುತ್ತೀನಿ. ಬಂದು ಜಾತಿನಿಂದನೆ ಕೇಸ್ ಹಾಕುತ್ತೀನಿ ಎಂದು ಮಂಜು ತಂಗಡಗಿ ಅವಾಜ್ ಹಾಕಿದ್ದಾನೆ. ಇಲ್ಲ ನಿಮ್ಮ ಹೆಸರು ಗೊಂದಲದಲ್ಲಿ ಹೇಳಿದ್ದೇವೆ ಎಂದು ಗಾಯಾಳು ಯುವಕರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ

ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣ; ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ

Published On - 10:02 am, Tue, 12 October 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?