ಬಾಗಲಕೋಟೆಯಲ್ಲಿ ಅಕ್ರಮ ಅಕ್ಕಿ ಸಂಗ್ರಹ! ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಸಾಮಾಜಿಕ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ. ತುಮಕೂರು ಕುಣಿಗಲ್ನ ದೊಡ್ಡಪೇಟೆಯ ಡಿಪೋದಿಂದ ಮದ್ದೂರು ಕಡೆ ಅಕ್ಕಿ ಅಕ್ರಮವಾಗಿ ಸರಬರಾಜು ಆಗುತ್ತಿತ್ತು.

ಬಾಗಲಕೋಟೆಯಲ್ಲಿ ಅಕ್ರಮ ಅಕ್ಕಿ ಸಂಗ್ರಹ! ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ
Follow us
| Updated By: sandhya thejappa

Updated on:Jan 30, 2022 | 11:06 AM

ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಕೆಂಗೆರಿಮಡ್ಡಿಯಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಕ್ಕಿ (Rice) ಸಂಗ್ರಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು (Authorities) ಸುಮಾರು 36 ಚೀಲಗಳಲ್ಲಿ 1,765 ಕೆಜಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅಕ್ಕಿ ಸಂಗ್ರಹವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಮಹಾಲಿಂಗಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ರಬಕವಿ-ಬನಹಟ್ಟಿ, ಮುಧೋಳ ಅಧಿಕಾರಿಗಳು ಭಾಗಿಯಾಗಿದ್ದರು.

ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಸಾಮಾಜಿಕ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ. ತುಮಕೂರು ಕುಣಿಗಲ್ನ ದೊಡ್ಡಪೇಟೆಯ ಡಿಪೋದಿಂದ ಮದ್ದೂರು ಕಡೆ ಅಕ್ಕಿ ಅಕ್ರಮವಾಗಿ ಸರಬರಾಜು ಆಗುತ್ತಿತ್ತು. ರಾತ್ರೋರಾತ್ರಿ ಭರ್ಜರಿ ಬೇಟೆಯಾಡಿದ ಸಾಮಾಜಿಕ ಕಾರ್ಯಕರ್ತರು, ಚಾಲಕನನ್ನ ಹಿಡಿದು ಆಹಾರ ಇಲಾಖೆ ಮತ್ತು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅನ್ನಭಾಗ್ಯ ಯೋಜನೆಯ ಸುಮಾರು 80 ಅಕ್ಕಿ ಚೀಲಗಳು ಸಾಗಾಟವಾಗುತ್ತಿತ್ತು ಎಂದು ತಿಳಿದುಬಂದಿದೆ.

ಅಕ್ರಮ ಮರ ಸಾಗಾಟ:  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಅಕ್ರಮವಾಗಿ ಮರದ ನಾಟಾ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ದಾಳಿ ನಡೆಸಿ, ನಾಟಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಭರಣಿ ಮರದ ನಾಟಾಗಳನ್ನ ಓಮಿನಿಯಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಈ ವೇಳೆ ಮಾರು ಗೌಡ ಮತ್ತು ಶಶಿಧರ್ ನಾಯ್ಕ್ ಎಂಬುವವರು ಬಂಧನಕ್ಕೊಳಗಾಗಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಮಂಜುನಾಥ ನಾಯ್ಕ್, ರಾಮಾ ನಾಯ್ಕ್ ಪರಾರಿಯಾಗಿದ್ದಾರೆ. 15 ಸಾವಿರ ಮೌಲ್ಯದ ಭರಣಿ ಮರದ ನಾಟಾಗಳು ವಶಕ್ಕೆ ಪಡೆಯಲಾಗಿದೆ. ಹೊನ್ನಾವರ ಡಿಎಫ್ಓ ಕೆ ಗಣಪತಿ, ಆರ್​ಎಫ್​ಓ ಪ್ರವೀಣ್ ನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ನಿಬ್ಬರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಕಾರು ಬಾಡಿಗೆಗೆ ಪಡೆದು ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್: ಕಾರು ಬಾಡಿಗೆಗೆ ಪಡೆದು ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಆರೋಪಿಗಳನ್ನ ಬಂಧಿಸಿ ಬಂಧಿತರಿಂದ 90 ಲಕ್ಷ ರೂ. ಮೌಲ್ಯದ 12 ಕಾರುಗಳು ಜಪ್ತಿ ಮಾಡಿದ್ದಾರೆ. ಖದೀಮರು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ

ಬೆಳಗಾವಿಯಲ್ಲಿ ಉದ್ಯಮಿ ಕಿಡ್ನಾಪ್ ಪ್ರಕರಣ ಬೆಳಕಿಗೆ! ಕೈ, ಕಾಲು ಕಟ್ಟಿ 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 8 ಆರೋಪಿಗಳು ಅರೆಸ್ಟ್

ಬಾವಿಗೆ ಬಿದ್ದಿದ್ದ ಮೊಬೈಲ್ ತೆಗೆಯಲು ಹೋಗಿ ಪ್ರಾಣ ಕಳೆದು ಕೊಂಡ ಯುವಕ; 65 ಅಡಿ ಆಳದ ಕಿರು ಬಾವಿಯಲ್ಲಿ ಉಸಿರುಗಟ್ಟಿ ಸಾವು

Published On - 10:41 am, Sun, 30 January 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ