AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಅಕ್ರಮ ಅಕ್ಕಿ ಸಂಗ್ರಹ! ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಸಾಮಾಜಿಕ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ. ತುಮಕೂರು ಕುಣಿಗಲ್ನ ದೊಡ್ಡಪೇಟೆಯ ಡಿಪೋದಿಂದ ಮದ್ದೂರು ಕಡೆ ಅಕ್ಕಿ ಅಕ್ರಮವಾಗಿ ಸರಬರಾಜು ಆಗುತ್ತಿತ್ತು.

ಬಾಗಲಕೋಟೆಯಲ್ಲಿ ಅಕ್ರಮ ಅಕ್ಕಿ ಸಂಗ್ರಹ! ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ
TV9 Web
| Edited By: |

Updated on:Jan 30, 2022 | 11:06 AM

Share

ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಕೆಂಗೆರಿಮಡ್ಡಿಯಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಕ್ಕಿ (Rice) ಸಂಗ್ರಹಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು (Authorities) ಸುಮಾರು 36 ಚೀಲಗಳಲ್ಲಿ 1,765 ಕೆಜಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅಕ್ಕಿ ಸಂಗ್ರಹವಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಮಹಾಲಿಂಗಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ರಬಕವಿ-ಬನಹಟ್ಟಿ, ಮುಧೋಳ ಅಧಿಕಾರಿಗಳು ಭಾಗಿಯಾಗಿದ್ದರು.

ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಸಾಮಾಜಿಕ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ. ತುಮಕೂರು ಕುಣಿಗಲ್ನ ದೊಡ್ಡಪೇಟೆಯ ಡಿಪೋದಿಂದ ಮದ್ದೂರು ಕಡೆ ಅಕ್ಕಿ ಅಕ್ರಮವಾಗಿ ಸರಬರಾಜು ಆಗುತ್ತಿತ್ತು. ರಾತ್ರೋರಾತ್ರಿ ಭರ್ಜರಿ ಬೇಟೆಯಾಡಿದ ಸಾಮಾಜಿಕ ಕಾರ್ಯಕರ್ತರು, ಚಾಲಕನನ್ನ ಹಿಡಿದು ಆಹಾರ ಇಲಾಖೆ ಮತ್ತು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅನ್ನಭಾಗ್ಯ ಯೋಜನೆಯ ಸುಮಾರು 80 ಅಕ್ಕಿ ಚೀಲಗಳು ಸಾಗಾಟವಾಗುತ್ತಿತ್ತು ಎಂದು ತಿಳಿದುಬಂದಿದೆ.

ಅಕ್ರಮ ಮರ ಸಾಗಾಟ:  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಅಕ್ರಮವಾಗಿ ಮರದ ನಾಟಾ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ದಾಳಿ ನಡೆಸಿ, ನಾಟಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಭರಣಿ ಮರದ ನಾಟಾಗಳನ್ನ ಓಮಿನಿಯಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಈ ವೇಳೆ ಮಾರು ಗೌಡ ಮತ್ತು ಶಶಿಧರ್ ನಾಯ್ಕ್ ಎಂಬುವವರು ಬಂಧನಕ್ಕೊಳಗಾಗಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಮಂಜುನಾಥ ನಾಯ್ಕ್, ರಾಮಾ ನಾಯ್ಕ್ ಪರಾರಿಯಾಗಿದ್ದಾರೆ. 15 ಸಾವಿರ ಮೌಲ್ಯದ ಭರಣಿ ಮರದ ನಾಟಾಗಳು ವಶಕ್ಕೆ ಪಡೆಯಲಾಗಿದೆ. ಹೊನ್ನಾವರ ಡಿಎಫ್ಓ ಕೆ ಗಣಪತಿ, ಆರ್​ಎಫ್​ಓ ಪ್ರವೀಣ್ ನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ನಿಬ್ಬರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

ಕಾರು ಬಾಡಿಗೆಗೆ ಪಡೆದು ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್: ಕಾರು ಬಾಡಿಗೆಗೆ ಪಡೆದು ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಆರೋಪಿಗಳನ್ನ ಬಂಧಿಸಿ ಬಂಧಿತರಿಂದ 90 ಲಕ್ಷ ರೂ. ಮೌಲ್ಯದ 12 ಕಾರುಗಳು ಜಪ್ತಿ ಮಾಡಿದ್ದಾರೆ. ಖದೀಮರು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.

ಇದನ್ನೂ ಓದಿ

ಬೆಳಗಾವಿಯಲ್ಲಿ ಉದ್ಯಮಿ ಕಿಡ್ನಾಪ್ ಪ್ರಕರಣ ಬೆಳಕಿಗೆ! ಕೈ, ಕಾಲು ಕಟ್ಟಿ 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ 8 ಆರೋಪಿಗಳು ಅರೆಸ್ಟ್

ಬಾವಿಗೆ ಬಿದ್ದಿದ್ದ ಮೊಬೈಲ್ ತೆಗೆಯಲು ಹೋಗಿ ಪ್ರಾಣ ಕಳೆದು ಕೊಂಡ ಯುವಕ; 65 ಅಡಿ ಆಳದ ಕಿರು ಬಾವಿಯಲ್ಲಿ ಉಸಿರುಗಟ್ಟಿ ಸಾವು

Published On - 10:41 am, Sun, 30 January 22

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು