AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾಗೃತಿ: ಕನ್ಯಾಕುಮಾರಿಯಿಂದ ದೆಹಲಿವರೆಗೂ ಪಾದಯಾತ್ರೆ ಹೊರಟ ವ್ಯಕ್ತಿ

ಸಿಎಮ್ ಜಕ್ಕಾಲಿ ಎಂಬ ಈ ವ್ಯಕ್ತಿ ಭ್ರೂಣ ಹತ್ಯೆ ತಡೆಗಾಗಿ ಜಾಗೃತಿ ಮೂಡಿಸುವುದಕ್ಕಾಗಿ ಸಾವಿರಾರು ಕಿಮೀ ಪಾದಯಾತ್ರೆ ಹಮ್ಮಿಕೊಂಡಿದ್ದು, ಕನ್ಯಾಕುಮಾರಿಯಿಂದ ದೆಹಲಿವರೆಗೂ ಪಾದಯಾತ್ರೆ ನಡೆಸುತ್ತಿದ್ದಾರೆ. ಇದೀಗ ಬಾಗಲಕೋಟೆ ತಲುಪಿದ್ದಾರೆ. ಮುಂದೆ ಮಹಾರಾಷ್ಟ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯದ ಮೂಲಕ‌ ಜನವರಿ 5ರಂದು ದೆಹಲಿ ತಲುಪಲಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾಗೃತಿ: ಕನ್ಯಾಕುಮಾರಿಯಿಂದ ದೆಹಲಿವರೆಗೂ ಪಾದಯಾತ್ರೆ ಹೊರಟ ವ್ಯಕ್ತಿ
ಸಿಎಮ್ ಜಕ್ಕಾಲಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 28, 2023 | 5:54 PM

Share

ಬಾಗಲಕೋಟೆ, ಅಕ್ಟೋಬರ್​​​​ 28: ಭ್ರೂಣ ಹತ್ಯೆ ತಡೆಯೋದಕ್ಕೆ ಸರಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಆದರೂ ಇಂದಿಗೂ ಇದು ನಡೆಯುತ್ತಲೇ ಇದೆ. ಇದರಿಂದ ಗಂಡಿಗೆ ಹೋಲಿಸಿದರೆ ಹೆಣ್ಣಿನ ಸಂಖ್ಯಾನುಪಾತ ಕಡಿಮೆ ಇದೆ. ಭ್ರೂಣ ಹತ್ಯೆ ತಡೆಯೋದಕ್ಕೆ ಜಾಗೃತಿ (Awareness) ಗಾಗಿ ವ್ಯಕ್ತಿ ಓರ್ವ ಪಾದಯಾತ್ರೆನೇ ಆರಂಭಿಸಿದ್ದಾರೆ. ಸಿಎಮ್ ಜಕ್ಕಾಲಿ ಎಂಬ ಈ ವ್ಯಕ್ತಿ ಭ್ರೂಣ ಹತ್ಯೆ ತಡೆಗಾಗಿ ಜಾಗೃತಿ ಮೂಡಿಸುವುದಕ್ಕಾಗಿ ಸಾವಿರಾರು ಕಿಮೀ ಪಾದಯಾತ್ರೆ ಹಮ್ಮಿಕೊಂಡಿದ್ದು ಇದೀಗ ಬಾಗಲಕೋಟೆಗೆ ಆಗಮಿಸಿದ್ದಾರೆ. ಕನ್ಯಾಕುಮಾರಿಯಿಂದ ದೆಹಲಿವರೆಗೂ ಪಾದಯಾತ್ರೆ ನಡೆಸುತ್ತಿದ್ದಾರೆ.

ಸೆಪ್ಟೆಂಬರ್ 24 ರಿಂದ ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಬಾಗಲಕೋಟೆ ತಲುಪಿದ್ದಾರೆ. ಮುಂದೆ ಮಹಾರಾಷ್ಟ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯದ ಮೂಲಕ‌ ಜನವರಿ 5ರಂದು ದೆಹಲಿ ತಲುಪಲಿದ್ದಾರೆ. ಭ್ರೂಣ ಹತ್ಯೆ ತಡೆಯೋದಕ್ಕೆ ಡಿಜಿಟಲ್ ಕೋಡ್ ಬಳಸಿ ಎಂಬುದು ಇವರ ಆಗ್ರಹವಾಗಿದೆ. ಹೆಣ್ಣು ಭ್ರೂಣಾವಸ್ಥೆಯಲ್ಲೇ ಡಿಜಿಟಲ್ ಕೋಡ್ ಕೊಟ್ಟು, ಆಪರೇಟ್ ಮಾಡಬೇಕು. ಅಂದಾಗ ಹೆಣ್ಣಿನ‌ ಸಂಖ್ಯೆ ಏರಿಕೆಯಾಗುತ್ತದೆ. ಈ‌ ಹಿನ್ನೆಲೆ‌ ಪಾದಯಾತ್ರೆ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದ್ದೇನೆ ಎಂದು ಹೇಳುತ್ತಾರೆ.

ಇದನ್ನೂ ಓದಿ: Bagalkote: ಶತಮಾನಗಳು ಉರುಳಿದರು ಒಂದು ಸಾರಿಯೂ ಬತ್ತದ ಬಾವಿ: ಏನಿದರ ರಹಸ್ಯ?

ಸಿಎಮ್‌ ಜಕ್ಕಾಲಿ ಅವರು ಮೂಲತಃ ದಾವಣಗೆರೆ ‌ಜಿಲ್ಲೆಯ ಹೊನ್ನಾಳಿ‌ ಮೂಲದವರು. ಹೆಣ್ಣು ಭ್ರೂಣ ತಡೆಗಾಗಿ ಡಿಜಿಟಲ್ ಕೋಡ್ ಎಷ್ಟು ಪ್ರಮುಖವಾಗಿದೆ ಎಂದು 2014 ರಲ್ಲೇ ಇವರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ರಾಜ್ಯ ಸರಕಾರ ಆ ವರದಿಯನ್ನು‌ ಕೇಂದ್ರಕ್ಕೆ ಕಳಿಸಿ ಜಾರಿ ಮಾಡುತ್ತಿಲ್ಲ. ಯಾವುದೇ ಪ್ರಕ್ರಿಯೆ ಕೂಡ ನಡೆದಿಲ್ಲ. ಇದರಿಂದ‌ ಇದೀಗ‌ ನಾನು ಪಾದಯಾತ್ರೆ ನಡೆಸುತ್ತಿದ್ದೇನೆ. ನಾನು ದೆಹಲಿ ತಲುಪಿದಾಗ ಪ್ರಧಾನಿ ಭೇಟಿಗೆ ರಾಜ್ಯ ಸಂಸದರು ಅವಕಾಶ ಕಲ್ಪಿಸಬೇಕು. ನಾನು ಅವರಿಗೆ ಈ ಬಗ್ಗೆ ವಿವರಿಸೋದಾಗಿ ಹೇಳುತ್ತಿದ್ದಾರೆ‌.

ಇದನ್ನೂ ಓದಿ: ಮಂಗಗಳ ದಾಳಿಗೆ ಈರುಳ್ಳಿ ಬೆಳೆ ನಾಶ: ಬರಗಾಲದಲ್ಲಿ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ

ಕನ್ಯಾಕುಮಾರಿಯಿಂದ‌‌ ದೆಹಲಿವರೆಗೆ ಮೂರು ಸಾವಿರಕ್ಕೂ ಅಧಿಕ‌ ಕಿಮೀ‌ ಇದೆ. ದೇಶಾದ್ಯಂತ ಪಾದಯಾತ್ರೆ ಮಾರ್ಗದುದ್ದಕ್ಕೂ ಜಾಗೃತಿ ಮೂಡಿಸುತ್ತಾ ಹೊರಟಿದ್ದಾರೆ. ಹೆಣ್ಣು ಭ್ರೂಣ ಹತ್ಯೆಯಿಂದ ಲಿಂಗ‌ ವ್ಯತ್ಯಾಸ ಆಗುತ್ತಿದೆ. ಇದರಿಂದ ರೈತ ಯುವಕರಿಗೆ ಹೆಣ್ಣು ಸಿಗದಂತಾಗಿದೆ. ಕೂಲಿ ಕಾರ್ಮಿಕರಿಗೆ ಕನ್ಯೆ ಕೊಡುತ್ತಿಲ್ಲ. ಈ ಕಾರಣ ಹಾಗೂ ಭ್ರೂಣ ಹತ್ಯೆ ತಡೆಗಾಗಿ ನನ್ನ ಪಾದಯಾತ್ರೆ ನಡೆದಿದೆ ಎಂದರು. ಇನ್ನು ಇವರ ಪಾದಯಾತ್ರೆಗೆ ಎಲ್ಲ ಕಡೆಯೂ ಜನರು ಸ್ಪಂದಿಸುತ್ತಿದ್ದು, ಸಿಎಮ್‌ ಜಕ್ಕಾಲಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೆಣ್ಣಿನ ಸಂಖ್ಯೆ ಕಡಿಮೆ‌ ಇರುವ ಸಂದರ್ಭದಲ್ಲಿ ಇವರ ಪಾದಯಾತ್ರೆ ಅರ್ಥಗರ್ಭಿತವಾಗಿದೆ. ಒಂದೊಳ್ಳೆ ಉದ್ದೇಶದಿಂದ ‌ಕೈಗೊಂಡ‌ ಇವರ ಪಾದಯಾತ್ರೆಗೆ ಸ್ಪಂದನೆ‌ಸಿಗಲಿ ಎಂಬುದು ಎಲ್ಲರ ಆಶಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್