AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಯವ ಕೃಷಿಯಲ್ಲಿ ರೈತನ ಅಮೋಘ ಸಾಧನೆ, ಕೃಷಿ & ಉಪಕಸುಬಿನ ಮೂಲಕ ಲಕ್ಷ ಲಕ್ಷ ಗಳಿಕೆ

ಆತ ಓರ್ವ ಬಿಎ ಪದವೀಧರ. ಕೆಲ ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ಗುತ್ತಿಗೆಯಾಧಾರದಲ್ಲಿ ಕೆಲಸ ಮಾಡಿದ್ದ. ಅಲ್ಲಿ ಆದ ಅನುಭವ ಕೃಷಿ ಕಡೆ ಮುಖ ಮಾಡಲು ಕಾರಣವಾಗಿತ್ತು. ಆತನ ಕೃಷಿ ಹಾಗೂ ಉಪಕಸುಬು ರೈತರ ಬದುಕಿಗೆ ಒಂದು ಪಾಠವಾಗಿದೆ.

ಸಾವಯವ ಕೃಷಿಯಲ್ಲಿ ರೈತನ ಅಮೋಘ ಸಾಧನೆ, ಕೃಷಿ & ಉಪಕಸುಬಿನ ಮೂಲಕ ಲಕ್ಷ ಲಕ್ಷ ಗಳಿಕೆ
ಸಾವಯವ ಕೃಷಿಯಲ್ಲಿ ರೈತನ ಅಮೋಘ ಸಾಧನೆ, ಕೃಷಿ & ಉಪಕಸುಬಿನ ಮೂಲಕ ಲಕ್ಷ ಲಕ್ಷ ಗಳಿಕೆ
Follow us
TV9 Web
| Updated By: ಆಯೇಷಾ ಬಾನು

Updated on: Oct 22, 2021 | 9:23 AM

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೈನಕಟ್ಟಿ ಗ್ರಾಮದ ಅರ್ಜುನ ಗಲಗಲಿ ಎಂಬ ರೈತ ತನ್ನ ಹೊಲದಲ್ಲಿ ಸಾವಯವ ಕೃಷಿ ಹಾಗೂ ಉಪಕಸುಬುಗಳ‌ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ತಮ್ಮ 11 ಎಕರೆ ಹೊಲದಲ್ಲಿ ಕಬ್ಬು ಈರುಳ್ಳಿ, ಕೋತಂಬರಿ, ಮೆಂತೆ ಸೊಪ್ಪು ಬೆಳೆದಿದ್ದಾರೆ. ಇದೀಗ ಗೋಧಿ ಕೂಡ ಬಿತ್ತನೆ ಮಾಡಿದ್ದಾರೆ. ಆದರೆ ಇದರ ಜೊತೆಗೆ ಹೊಲದಲ್ಲಿ ಇವರು ಮಾಡಿದ ಉಪಕಸುಬು ಎಲ್ಲರ ಕಣ್ಣರಳಿಸುವಂತೆ ಮಾಡಿದೆ. ಇವರು ತಮ್ಮ ಹೊಲದಲ್ಲಿ ಜೇನನ್ನ ಕೂಡ ಸಾಕಿದ್ದಾರೆ. ಜೊತೆಗೆ ತೋಟದ ಮನೆಯ ಪಕ್ಕದಲ್ಲಿ ನೂರಕ್ಕೂ ಅಧಿಕ ಜವಾರಿ ಕೋಳಿ, 80 ಕ್ಕೂ ಹೆಚ್ಚು ಕುರಿಗಳನ್ನ ಸಾಕಿದ್ದಾರೆ. ಪ್ರತಿ ವರ್ಷ ಕೃಷಿ ಉಪಕಸುಬುಗಳ‌ ಮೂಲಕ ಎಲ್ಲ ಖರ್ಚು ತೆಗೆದು ಸುಮಾರು 10 ಲಕ್ಷದವರೆಗೂ ಆದಾಯ ಗಳಿಸುತ್ತಿದ್ದಾರೆ.

ಅರ್ಜುನ್ ಗಲಗಲಿ ಓದಿದ್ದು ಬಿಎ, ಎಂಟು ವರ್ಷಗಳ ಕಾಲ ಕೃಷಿ ಇಲಾಖೆಯಲ್ಲಿ ತಾಂತ್ರಿಕ ವಿಭಾಗದಲ್ಲಿ ಗುತ್ತಿಗೆಯಾಧಾರದ ಮೇಲೆ ಕೆಲಸ ಮಾಡಿದ್ದರು. ಆಗ ಅಲ್ಲಿ ಕೃಷಿಯಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪ್ರಭಾವಿತರಾಗಿ ತಮ್ಮ 11 ಎಕರೆ ಹೊಲದಲ್ಲಿ ಕೃಷಿ ನಡೆಸಿದ್ದಾರೆ. ಮೂರು ಎಕರೆಯಲ್ಲಿ ಕಬ್ಬು ,ಏಳು ಎಕರೆಯಲ್ಲಿ ಈರುಳ್ಳಿ ಬೆಳೆದು ಫಸಲು ತೆಗೆದಿದ್ದಾರೆ. ಇದರ ಜೊತೆ ಕೋತಂಬರಿ, ಮೆಣಸಿನಗಿಡ, ಮೆಂತೆ ಸೊಪ್ಪನ್ನು ಬೆಳೆದಿದ್ದಾರೆ. ರಾಸಾಯನಿಕ ಗೊಬ್ಬರ ,ಹಾಗೂ ಕ್ರಿಮಿನಾಶಕ ಬಳಸದೆ ಸಾವಯುವ ಕೃಷಿ ಮಾಡುತ್ತಿದ್ದಾರೆ. ಸುತ್ತಮುತ್ತಲಿನ ರೈತರು ಇವರ ಹೊಲಗಳಿಗೆ ಭೇಟಿ ಕೊಟ್ಟು ಇವರಿಂದ ಸಲಹೆ ಪಡೆಯುತ್ತಿದ್ದಾರೆ.

ಒಟ್ನಲ್ಲಿ ಕೃಷಿಯಲ್ಲಿ ಲಾಭ ಇಲ್ಲ ಅನ್ನೋರಿಗೆ ಅರ್ಜುನ ಗಲಗಲಿ ಮಾದರಿಯಾಗಿದ್ದಾರೆ. ನಾವು ಕಷ್ಟು ಪಟ್ಟು ದುಡಿದ್ರೆ ಭೂಮಿ ತಾಯಿ ಯಾವತ್ತು ಕೈ ಬಿಡಲ್ಲ ಅನ್ನೋದಕ್ಕೆ ಇವರೇ ಸಾಕ್ಷಿ.

-ರವಿ ಮೂಕಿ

ba graduate inspirational story of farming

ಹೊಲದಲ್ಲಿ ಜೇನನ್ನ ಕೂಡ ಸಾಕುತ್ತಿರುವ ರೈತ ಅರ್ಜುನ ಗಲಗಲಿ

ba graduate inspirational story of farming

ರೈತ ಅರ್ಜುನ ಗಲಗಲಿ 80 ಕ್ಕೂ ಹೆಚ್ಚು ಕುರಿಗಳನ್ನ ಸಾಕಿದ್ದಾರೆ

ಇದನ್ನೂ ಓದಿ: Crime News: ಮೈಸೂರು ಹೊರವಲಯದಲ್ಲಿ ಡಬಲ್ ಮರ್ಡರ್; ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿ ಕೊಲೆ

ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್