ಪ್ಯಾಲಿಸ್ತೇನ್ ಅಧ್ಯಕ್ಷ‌ರ‌ ಜೊತೆ ಮೋದಿ; ಫೋಟೋ ಸ್ಟೇಟಸ್​ಗೆ ಇಟ್ಟ SDPI ಕಾರ್ಯಕರ್ತನನ್ನು ಮನಬಂದಂತೆ ಹಲ್ಲೆ ನಡೆಸಿದ ಖಾಕಿ?

ಪ್ಯಾಲಿಸ್ತೇನ್ ಅಧ್ಯಕ್ಷ‌ರ‌ ಜೊತೆ ಭಾರತದ ಪ್ರಧಾನಿ ಮಾತುಕತೆ ನಡೆಸಿದ್ದ ಫೋಟೋವನ್ನು ಪ್ಯಾಲಿಸ್ತೇನ್ ಪರವಾಗಿ ಸ್ಟೇಟಸ್ ಇಟ್ಟಿದ್ದ ಹಿನ್ನೆಲೆ ಬಾದಾಮಿ ಪೊಲೀಸರು ಎಸ್​ಡಿಪಿಐ ಕಾರ್ಯಕರ್ತ ಸೈಯದ್ ಬಾಷಾನನ್ನು ವಿಚಾರಣೆಗೆ ಕರೆಸಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪ್ಯಾಲಿಸ್ತೇನ್ ಅಧ್ಯಕ್ಷ‌ರ‌ ಜೊತೆ ಮೋದಿ; ಫೋಟೋ ಸ್ಟೇಟಸ್​ಗೆ ಇಟ್ಟ SDPI ಕಾರ್ಯಕರ್ತನನ್ನು ಮನಬಂದಂತೆ ಹಲ್ಲೆ ನಡೆಸಿದ ಖಾಕಿ?
ಪ್ಯಾಲಿಸ್ತೇನ್ ಪರವಾಗಿ ಸ್ಟೇಟಸ್ ಇಟ್ಟ SDPI ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ
Edited By: ಆಯೇಷಾ ಬಾನು

Updated on: Oct 01, 2024 | 11:12 AM

ಬಾಗಲಕೋಟೆ, ಅ.01: ಪ್ಯಾಲಿಸ್ತೇನ್ ಅಧ್ಯಕ್ಷ‌ರ‌ ಜೊತೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತುಕತೆ ನಡೆಸುತ್ತಿರುವ ಭಾವಚಿತ್ರವನ್ನು ವಾಟ್ಸಾಪ್ ಸ್ಟೇಟಸ್​ಗೆ ಹಾಕಿದ ಹಿನ್ನೆಲೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಎಸ್​ಡಿಪಿಐ ಕಾರ್ಯಕರ್ತನ ವಿರುದ್ಧ ದೂರು‌‌ ದಾಖಲಾಗಿತ್ತು. ಪ್ಯಾಲಿಸ್ತೇನ್ ಪರವಾಗಿ ಸ್ಟೇಟಸ್​ ಇಡಲಾಗಿದೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಬಾದಾಮಿ ಪಿಎಸ್​ಐ ವಿಠ್ಠಲ‌ನಾಯಕ ಹಾಗೂ ಇತರೆ‌ ಕಾನ್ಸ್ಟೇಬಲ್​ಗಳು ವಿಚಾರಣೆ ಹೆಸರಲ್ಲಿ ಎಸ್​ಡಿಪಿಐ ಕಾರ್ಯಕರ್ತ ಸೈಯದ್ ಬಾಷಾನನ್ನು ಠಾಣೆಗೆ ಕರೆಸಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೈಯದ್ ಬಾಷಾ ಮೇಲೆ ದೂರು ದಾಖಲಾದ ಹಿನ್ನೆಲೆ ಸೈಯದ್​ನನ್ನು ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದರು. ಈ ವೇಳೆ ವಿಚಾರಣೆ ಹೆಸರಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 24ರಂದು ಹಲ್ಲೆ ನಡೆದಿದ್ದು, ಜಾಮೀನಿನ ಮೇಲೆ‌ ಸೈಯದ್ ಹೊರಬಂದಾಗ ಪ್ರಕರಣ ಬಯಲಿಗೆ ಬಂದಿದೆ. ಪೊಲೀಸರಿಂದ‌ ಹಲ್ಲೆ ಹಿನ್ನೆಲೆ ಸಾಮಾಜಿಕ‌ ಜಾಲತಾಣದಲ್ಲಿ ಪೊಲೀಸರ ವಿರುದ್ಧ ಎಸ್​ಡಿಪಿಐ ನಾಯಕರಿಂದ ವ್ಯಾಪಕ‌ ಆಕ್ರೋಶ ವ್ಯಕ್ತವಾಗಿದೆ. ಹಲ್ಲೆಗೈದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ದೂರುಗಳ ಪ್ರಾಧಿಕಾರ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು, ನಾಯಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಗಳನ್ನು ಕಚ್ಚಿದ್ದಕ್ಕೆ ನಾಯಿಯನ್ನು ಧರಧರನೆ ಎಳೆದೊಯ್ದು, ಥಳಿಸಿ, ಬೆಂಕಿ ಹಚ್ಚಿ ಕೊಂದ ವ್ಯಕ್ತಿ

55 ಆರೋಪಿಗಳು ಜೈಲಿನಿಂದ ಬಿಡುಗಡೆ

ನಾಗಮಂಗಲ ಗಲಭೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಮಂಡ್ಯ ಸೆಂಟ್ರಲ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಶುಕ್ರವಾರ ಕೋರ್ಟ್‌ನಲ್ಲಿ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಶನಿವಾರ, ಭಾನುವಾರ ರಜೆ ಹಿನ್ನೆಲೆ ನಿನ್ನೆ ತಲಾ 1 ಲಕ್ಷ ಮೌಲ್ಯದ ಬಾಂಡ್ ಮತ್ತು ದಾಖಲೆ ಸಲ್ಲಿಸಿ ಆರೋಪಿಗಳು ಬಿಡುಗಡೆಯಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Tue, 1 October 24

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us