AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಜಾರಿಗಾಗಿ ಮತ್ತೊಮ್ಮೆ ಪಾದಯಾತ್ರೆಗೆ ಬಾಗಲಕೋಟೆ ಸಜ್ಜು

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ 20 ಗ್ರಾಮಗಳ ಸ್ಥಳಾಂತರ ಆಗಬೇಕು. 1 ಲಕ್ಷ 30 ಸಾವಿರ ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಬೇಕು. ಜಮೀನು ಕಳೆದುಕೊಳ್ಳುವ ರೈತರಿಗೆ ಏಕರೂಪದ ಬೆಲೆ ನಿರ್ಧಾರ ಆಗಬೇಕು. ಯೋಜನೆ ಪೂರ್ಣವಾಗಲು 65 ಸಾವಿರ ಕೋಟಿ ಅನುದಾನ ಬೇಕಿದೆ.‌

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಜಾರಿಗಾಗಿ ಮತ್ತೊಮ್ಮೆ ಪಾದಯಾತ್ರೆಗೆ ಬಾಗಲಕೋಟೆ ಸಜ್ಜು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 01, 2021 | 10:43 PM

Share

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ನೆನೆಗುದಿಗೆ ಬಿದ್ದು ದಶಕವೇ ಗತಿಸಿದೆ. ಯುಕೆಪಿ ಮೂರನೇ ಹಂತಕ್ಕೆ ಗೆಜೆಟ್ ನೊಟಿಫಿಕೇಶನ್ ಹೊರಡಿಸಬೇಕಾದ ಕೇಂದ್ರ ಸರ್ಕಾರ ಇದುವರೆಗೂ ಹೊರಡಿಸಿಲ್ಲ.‌ ಕಳೆದ ಒಂದು ದಶಕದಿಂದ ಎಲ್ಲ ಸರ್ಕಾರಗಳಿಗೆ ಬರೀ ಭರವಸೆಯಲ್ಲೇ ಕಾಲ‌ ಕಳೆಯುತ್ತ ಬಂದಿವೆ.‌ ಇದಕ್ಕಾಗಿ ಹಲವು ಹೋರಾಟಗಳು ನಡೆದು ಹೋಗಿವೆ.‌ ಇದೀಗ ಮತ್ತೊಂದು ಹೋರಾಟಕ್ಕೆ ಮುಳುಗಡೆ ನಾಡು ಅಂತ ಕರೆಸಿಕೊಳ್ಳುವ ಬಾಗಲಕೋಟೆ ಸಜ್ಜಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತ ನೆನೆಗುದಿಗೆ ಬಿದ್ದು ದಶಕವೇ ಕಳೆದಿದೆ. ಕಳೆದ‌ ಒಂದು ದಶಕದಿಂದ ಎಲ್ಲ ಸರ್ಕಾರಗಳು ಬರೀ ಭರವಸೆಯಲ್ಲಿಯೇ ಕಾಲ‌ಕಳೆಯುತ್ತ ಬಂದಿವೆ. ಅದೆಷ್ಟೋ ಹೋರಾಟಗಳು ನಡೆದ್ರೂ ಏನೂ ಪ್ರಯೋಜನ ಆಗಿಲ್ಲ. ಇದೀಗ ಮತ್ತೊಂದು ಹೋರಾಟಕ್ಕೆ ಮುಳುಗಡೆ ನಾಡು ಅಂತ ಕರೆಸಿಕೊಳ್ಳುವ ಬಾಗಲಕೋಟೆ ಸಿದ್ಧವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3 ಕ್ಕಾಗಿ ಮತ್ತೊಂದೆ ಪಾದಯಾತ್ರೆಗೆ ಕೋಟೆನಾಡು ಸಜ್ಜಾಗಿದೆ. ನಾಳೆ ಗಾಂಧಿ ಜಯಂತಿಯಂದು ಪಾದಯಾತ್ರೆಗೆ ನಿರ್ಧಾರ ಮಾಡಿದ್ದು, ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ನಡಿಗೆ ಎನ್ನುವ ಘೋಷವಾಕ್ಯದೊಂದಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ತೀರ್ಮಾನಿಸಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ, ಮಾಜಿ ಸಚಿವರಾದ ಎಚ್ ವೈ ಮೇಟಿ, ಅಜಯಕುಮಾರ ಸರನಾಯಕ, ಮಾಜಿ ಶಾಸಕರಾದ ಜೆ.ಟಿ.ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ರೈತ ಮುಖಂಡರು ಭಾಗಿಯಾಗಲಿದ್ದಾರೆ. ಪಕ್ಷಾತೀತ ಹೋರಾಟ ನಡೆಸಲು ಮುಖಂಡರು ನಿರ್ಧಾರ ಮಾಡಿದ್ದಾರೆ.

20 ಕ್ಕೂ ಹೆಚ್ಚು ಮಠಾಧೀಶರ ಸಹಭಾಗಿತ್ವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ 20 ಗ್ರಾಮಗಳ ಸ್ಥಳಾಂತರ ಆಗಬೇಕು. 1 ಲಕ್ಷ 30 ಸಾವಿರ ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಬೇಕು. ಜಮೀನು ಕಳೆದುಕೊಳ್ಳುವ ರೈತರಿಗೆ ಏಕರೂಪದ ಬೆಲೆ ನಿರ್ಧಾರ ಆಗಬೇಕು. ಯೋಜನೆ ಪೂರ್ಣವಾಗಲು 65 ಸಾವಿರ ಕೋಟಿ ಅನುದಾನ ಬೇಕಿದೆ.‌ ಭೂಸ್ವಾಧೀನ ಕಾರ್ಯಕ್ಕೆ ಖಾಲಿ ಇರುವ ಅಗತ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜನೆ ಮಾಡಬೇಕಿದೆ. ಕಳೆದ ಒಂದು ದಶಕದಿಂದ ಎಲ್ಲ ಸರ್ಕಾರಗಳು ಬರೀ ಭರವಸೆಯಲ್ಲೆ ಕಾಲ ಕಳೆಯುತ್ತ ಬಂದಿವೆ. ಇದೀಗ ಮತ್ತೊಂದು ಹಂತದ ಹೋರಾಟಕ್ಕೆ ಸಜ್ಜಾಗ್ತಿದಾರೆ. ಅಕ್ಟೋಬರ್ 2 ರಂದು ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಬಾಗಲಕೋಟೆ ತಾಲ್ಲೂಕಿನ ಅನಗವಾಡಿಯ ಘಟಪ್ರಭಾ ನದಿಯಿಂದ ಟಕ್ಕಳಕಿಯ ಕೃಷ್ಣಾ ನದಿ ದಡದವರೆಗೂ ನಡೆಯಲಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಅನಗವಾಡಿಯಿಂದ ಟಕ್ಕಳಕಿವರೆಗೆ 20 ಕಿ.ಮೀ ವರೆಗೆ ಬೃಹತ್ ಪಾದಯಾತ್ರೆ ನಡೆಸಲು ತೀರ್ಮಾನ ಮಾಡಲಾಗಿದೆ. ಪಾದಯಾತ್ರೆ ಮೂಲಕ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಒತ್ತಾಯಿಸಲಿದ್ದು ಇದು ಪಕ್ಷಾತೀತ ಹೋರಾಟ ಗದಗಿನ ತೋಂಟದಾರ್ಯ ಶ್ರೀಗಳು, ನಿಡಸೋಸಿ ಮಠದ ಸ್ವಾಮೀಜಿಗಳು, ಇಳಕಲ್ ಮಹಾತ ಸ್ವಾಮೀಜಿಗಳು ಸೇರಿದಂತೆ 20 ಕ್ಕೂ ಹೆಚ್ಚು ಮಠಾಧೀಶರು ಭಾಗಿಯಾಗಲಿದ್ದಾರೆ.ಹೋರಾಟಕ್ಕೆ ಎಲ್ಲರೂ ಪ್ರೋತ್ಸಾಹಿಸಿ ಭಾಗಿಯಾಗಬೇಕೆಂದು ಪರಿಷತ್ ವಿಪಕ್ಷನಾಯಕ ಕರೆ ನೀಡಿದ್ದಾರೆ.

ಒಟ್ಟಿನಲ್ಲಿ ದಶಕದಿಂದ ನೆನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ  ಹಂತದ ಕಾಮಗಾರಿ ಜಾರಿಗಾಗಿ ಕೃಷ್ಣೆಯ ಮಕ್ಕಳು ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಆದ್ರೆ ದಶಕದಿಂದ ಭರವಸೆಗಳನ್ನೇ ನೀಡುತ್ತ ಕಾಲ ಕಳೆಯುತ್ತಿರುವ ಸರ್ಕಾರಗಳು ಪಾದಯಾತ್ರೆಯಿಂದಾದರೂ ಎಚ್ಚೆತ್ತುಕೊಂಡು ಯೋಜನೆ ಅನುಷ್ಠಾನ ಮಾಡುತ್ತಾ ಕಾದು ನೋಡಬೇಕಿದೆ.

ವರದಿ: ರವಿ ಮೂಕಿ ಟಿವಿ9 ಬಾಗಲಕೋಟೆ

ಇದನ್ನೂ ಓದಿ: 

ಮೇಕ್ ಇನ್ ಬಾಗಲಕೋಟೆ ಇಲೆಕ್ಟ್ರಿಕ್ ದ್ವಿಚಕ್ರ ವಾಹನ ಪುಟ್ಟ ಗ್ಯಾರೇಜಿನಲ್ಲಿ ತಯಾರಾಗಿದೆ ಅಂದರೆ ನಂಬ್ತೀರಾ?

Temple Tour: ಬಾಗಲಕೋಟೆಯಲ್ಲಿ ಶಕ್ತಿ ಸ್ವರೂಪಿಣಿಯಾಗಿ ನೆಲೆ ನಿಂತಿದ್ದಾಳೆ ಬನಶಂಕರಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!