AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿ ಪಕ್ಕದಲ್ಲಿ ಅಪರಿಚಿತ ಯುವತಿ ಶವ ಪತ್ತೆ ಪ್ರಕರಣ; ಇದುವರೆಗೂ ಪೊಲೀಸರಿಗೆ ಸಿಗದ ಸುಳಿವು

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರ ಪಕ್ಕದ ಜಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಅದೊಂದು ಶವ ಬಿದ್ದಿತ್ತು. ಸ್ಥಳೀಯರಲ್ಲಿ ಕೆಲವರು ನೋಡಿದರೂ ಪೊಲೀಸರು ಸುಮ್ಮನೆ ‌ವಿಚಾರಣೆ ಅಂತ ಓಡಾಡಿಸುತ್ತಾರೆ ಎಂದು ಹೇಳಿರಲಿಲ್ಲ. ನಿನ್ನೆ (ಮೇ.27) ದಿನ ಕೊನೆಗೂ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ. ಶವ ಯುವತಿಯದ್ದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ಇದರಿಂದ ಯುವತಿ ಗುರುತು ಪತ್ತೆ ಹಚ್ಚೋದೆ ಪೊಲೀಸರಿಗೆ ಸವಾಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಹೆದ್ದಾರಿ ಪಕ್ಕದಲ್ಲಿ ಅಪರಿಚಿತ ಯುವತಿ ಶವ ಪತ್ತೆ ಪ್ರಕರಣ; ಇದುವರೆಗೂ ಪೊಲೀಸರಿಗೆ ಸಿಗದ ಸುಳಿವು
ಬಾಗಲಕೋಟೆ ಎಸ್ಪಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:May 28, 2024 | 10:27 PM

Share

ಬಾಗಲಕೋಟೆ, ಮೇ.28: ಬೀಳಗಿ(Bilgi) ತಾಲ್ಲೂಕಿನ ಹಳೆ ಟಕ್ಕಳಕಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರ ಪಕ್ಕದ ಜಾಗದಲ್ಲಿಅಂದಾಜು 20 ರಿಂದ 25 ರ ವಯಸ್ಸಿನ ಅಪರಿಚಿತ ಯುವತಿಯ ಶವ(Dead Body) ಪತ್ತೆಯಾಗಿತ್ತು. ಇಡೀ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ಅಕ್ಕ-ಪಕ್ಕದ ಜಮೀನು ಹೊಂದಿದ ರೈತರು ಹಾಗೂ ಸ್ಥಳೀಯರಿಗೆ ಭಯ ಹುಟ್ಟಿಸಿದೆ. ಕಪ್ಪು ಜೀನ್ಸ್ ಪ್ಯಾಂಟ್, ಸ್ಮೈಲ್‌ ಎಂಬ ಬರಹದ ಪಿಂಕ್ ಟಿ ಶರ್ಟ್, ಬಲಗಾಲಲ್ಲಿ ಗೆಜ್ಜೆ , ಕಪ್ಪು ದಾರವಿದೆ. ಇಂತಹ ಸ್ಥಿತಿಯಲ್ಲಿ‌ ಶವ ನೋಡಿದ ಜನರು ಹೊಲಕ್ಕೆ ಬರಲು ಭಯ ಪಡುವಂತಾಗಿದ್ದು, ಆದಷ್ಟು ಬೇಗ ಈ ಪ್ರಕರಣ ಭೇದಿಸಬೇಕು ಎನ್ನುತ್ತಿದ್ದಾರೆ. ಆದರೆ, ಇದುವರೆಗೂ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ.

ಯುವತಿ ಧರಿಸಿರುವ ಉಡುಪು ನೋಡಿದರೆ ಯುವತಿ ಕಾಲೇಜು ವಿದ್ಯಾರ್ಥಿನಿ ಆಗಿರಬಹುದು. ಇಲ್ಲವೇ ಹೈಪ್ರೊಫೈಲ್ ಕುಟುಂಬದವಳು ಎಂದು ಅನಿಸುತ್ತದೆ. ಯಾರೋ ಕೊಲೆ ಮಾಡಿ ಈ‌ ಜಾಗದಲ್ಲಿ ಶವ ಬಿಸಾಕಿರುವ ಶಂಕೆ‌ ಇದೆ. ಆದರೆ, ಸದ್ಯಕ್ಕೆ ಯಾವುದು ಕೂಡ ಸ್ಪಷ್ಟವಾಗಿಲ್ಲ. ಇನ್ನು ಶವ ಪತ್ತೆಯಾದ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಯುವತಿಯ ಶವ, ಬಟ್ಟೆ, ಸ್ಥಳದಲ್ಲಿ ಸಿಕ್ಕ ಕುರುಹುಗಳು ಎಲ್ಲವನ್ನು ಫೋಟೋ ಸಮೇತ ಮಾಹಿತಿಯನ್ನು ಬಾಗಲಕೋಟೆ ಜಿಲ್ಲೆ ಹಾಗೂ ಅಕ್ಕ-ಪಕ್ಕದ ಜಿಲ್ಲೆಯ ವಿವಿಧ ಠಾಣೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲವೆಂದು ಸಂಗಾತಿಯ ಶವವನ್ನು ರಸ್ತೆ ಬದಿ ಎಸೆದು ಬಂದ ವ್ಯಕ್ತಿ

ಆಯಾ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೊತೆಗೆ ಮಾದ್ಯಮ ಹಾಗೂ ಸಾಮಾಜಿಕ‌ ಜಾಲತಾಣದ ಮೂಲಕವೂ ಪೊಲೀಸರು ಗುರುತು ಪತ್ತೆಗೆ ಪ್ರಯತ್ನ ನಡೆಸಿದ್ದಾರೆ. ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಾಗದಲ್ಲಿ ಕಂಡ ಶವ ಗುರುತು ಪತ್ತೆ ಸವಾಲಾಗಿದೆ. ಪೊಲೀಸರು ನಿರಂತರ ಪರಿಶೀಲನೆ ಮುಂದುವರೆಸಿದ್ದು, ತನಿಖೆ ನಂತರವೇ ಸತ್ಯಾಂಶ ಹೊರಬೀಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 pm, Tue, 28 May 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ