AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿ ಪಕ್ಕದಲ್ಲಿ ಅಪರಿಚಿತ ಯುವತಿ ಶವ ಪತ್ತೆ ಪ್ರಕರಣ; ಇದುವರೆಗೂ ಪೊಲೀಸರಿಗೆ ಸಿಗದ ಸುಳಿವು

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರ ಪಕ್ಕದ ಜಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಅದೊಂದು ಶವ ಬಿದ್ದಿತ್ತು. ಸ್ಥಳೀಯರಲ್ಲಿ ಕೆಲವರು ನೋಡಿದರೂ ಪೊಲೀಸರು ಸುಮ್ಮನೆ ‌ವಿಚಾರಣೆ ಅಂತ ಓಡಾಡಿಸುತ್ತಾರೆ ಎಂದು ಹೇಳಿರಲಿಲ್ಲ. ನಿನ್ನೆ (ಮೇ.27) ದಿನ ಕೊನೆಗೂ ಪೊಲೀಸರಿಗೆ ಮಾಹಿತಿ ರವಾನೆಯಾಗಿದೆ. ಶವ ಯುವತಿಯದ್ದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ಇದರಿಂದ ಯುವತಿ ಗುರುತು ಪತ್ತೆ ಹಚ್ಚೋದೆ ಪೊಲೀಸರಿಗೆ ಸವಾಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಹೆದ್ದಾರಿ ಪಕ್ಕದಲ್ಲಿ ಅಪರಿಚಿತ ಯುವತಿ ಶವ ಪತ್ತೆ ಪ್ರಕರಣ; ಇದುವರೆಗೂ ಪೊಲೀಸರಿಗೆ ಸಿಗದ ಸುಳಿವು
ಬಾಗಲಕೋಟೆ ಎಸ್ಪಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:May 28, 2024 | 10:27 PM

Share

ಬಾಗಲಕೋಟೆ, ಮೇ.28: ಬೀಳಗಿ(Bilgi) ತಾಲ್ಲೂಕಿನ ಹಳೆ ಟಕ್ಕಳಕಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರ ಪಕ್ಕದ ಜಾಗದಲ್ಲಿಅಂದಾಜು 20 ರಿಂದ 25 ರ ವಯಸ್ಸಿನ ಅಪರಿಚಿತ ಯುವತಿಯ ಶವ(Dead Body) ಪತ್ತೆಯಾಗಿತ್ತು. ಇಡೀ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ಅಕ್ಕ-ಪಕ್ಕದ ಜಮೀನು ಹೊಂದಿದ ರೈತರು ಹಾಗೂ ಸ್ಥಳೀಯರಿಗೆ ಭಯ ಹುಟ್ಟಿಸಿದೆ. ಕಪ್ಪು ಜೀನ್ಸ್ ಪ್ಯಾಂಟ್, ಸ್ಮೈಲ್‌ ಎಂಬ ಬರಹದ ಪಿಂಕ್ ಟಿ ಶರ್ಟ್, ಬಲಗಾಲಲ್ಲಿ ಗೆಜ್ಜೆ , ಕಪ್ಪು ದಾರವಿದೆ. ಇಂತಹ ಸ್ಥಿತಿಯಲ್ಲಿ‌ ಶವ ನೋಡಿದ ಜನರು ಹೊಲಕ್ಕೆ ಬರಲು ಭಯ ಪಡುವಂತಾಗಿದ್ದು, ಆದಷ್ಟು ಬೇಗ ಈ ಪ್ರಕರಣ ಭೇದಿಸಬೇಕು ಎನ್ನುತ್ತಿದ್ದಾರೆ. ಆದರೆ, ಇದುವರೆಗೂ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ.

ಯುವತಿ ಧರಿಸಿರುವ ಉಡುಪು ನೋಡಿದರೆ ಯುವತಿ ಕಾಲೇಜು ವಿದ್ಯಾರ್ಥಿನಿ ಆಗಿರಬಹುದು. ಇಲ್ಲವೇ ಹೈಪ್ರೊಫೈಲ್ ಕುಟುಂಬದವಳು ಎಂದು ಅನಿಸುತ್ತದೆ. ಯಾರೋ ಕೊಲೆ ಮಾಡಿ ಈ‌ ಜಾಗದಲ್ಲಿ ಶವ ಬಿಸಾಕಿರುವ ಶಂಕೆ‌ ಇದೆ. ಆದರೆ, ಸದ್ಯಕ್ಕೆ ಯಾವುದು ಕೂಡ ಸ್ಪಷ್ಟವಾಗಿಲ್ಲ. ಇನ್ನು ಶವ ಪತ್ತೆಯಾದ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಯುವತಿಯ ಶವ, ಬಟ್ಟೆ, ಸ್ಥಳದಲ್ಲಿ ಸಿಕ್ಕ ಕುರುಹುಗಳು ಎಲ್ಲವನ್ನು ಫೋಟೋ ಸಮೇತ ಮಾಹಿತಿಯನ್ನು ಬಾಗಲಕೋಟೆ ಜಿಲ್ಲೆ ಹಾಗೂ ಅಕ್ಕ-ಪಕ್ಕದ ಜಿಲ್ಲೆಯ ವಿವಿಧ ಠಾಣೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲವೆಂದು ಸಂಗಾತಿಯ ಶವವನ್ನು ರಸ್ತೆ ಬದಿ ಎಸೆದು ಬಂದ ವ್ಯಕ್ತಿ

ಆಯಾ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜೊತೆಗೆ ಮಾದ್ಯಮ ಹಾಗೂ ಸಾಮಾಜಿಕ‌ ಜಾಲತಾಣದ ಮೂಲಕವೂ ಪೊಲೀಸರು ಗುರುತು ಪತ್ತೆಗೆ ಪ್ರಯತ್ನ ನಡೆಸಿದ್ದಾರೆ. ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಾಗದಲ್ಲಿ ಕಂಡ ಶವ ಗುರುತು ಪತ್ತೆ ಸವಾಲಾಗಿದೆ. ಪೊಲೀಸರು ನಿರಂತರ ಪರಿಶೀಲನೆ ಮುಂದುವರೆಸಿದ್ದು, ತನಿಖೆ ನಂತರವೇ ಸತ್ಯಾಂಶ ಹೊರಬೀಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 pm, Tue, 28 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್