ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ

ಬಾಗಲಕೋಟೆಯಲ್ಲಿ ಯುವಕನೊಬ್ಬ ಹುಚ್ಚು ನಾಯಿ ಕಡಿತಕ್ಕೆ ಸಕಾಲದಲ್ಲಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳದೆ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ನಾಯಿ ಕಡಿತದ ನಂತರ ರೇಬಿಸ್ ಲಸಿಕೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ರೇಬಿಸ್ ಮಾರಕವಾಗಬಹುದು. ಸಾರ್ವಜನಿಕರು ಇಂತಹ ದುರಂತಗಳಿಂದ ಪಾಠ ಕಲಿಯಬೇಕು ಮತ್ತು ಆರೋಗ್ಯ ಇಲಾಖೆಯ ಜಾಗೃತಿ ಕರೆಗೆ ಸ್ಪಂದಿಸಬೇಕು.

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ
ರೇಬಿಸ್ ಯುವಕ ಸಾವು
Edited By:

Updated on: May 26, 2026 | 9:58 AM

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ.

ಮೂಲಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದಲ್ಲಿ ನಡೆದಿದ್ದ ‘ಮನ್ನಿಕೇರಿ ಚಂದ್ರಾದೇವಿ ಜಾತ್ರೆ’ಗೆ ಪ್ರದೀಪ್ ತೆರಳಿದ್ದನು. ಈ ಸಂದರ್ಭದಲ್ಲಿ ಆತನಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಆದರೆ, ಪ್ರದೀಪ್ ಇದನ್ನು ಗಂಭೀರವಾಗಿ ಪರಿಗಣಿಸದೆ, ಆಸ್ಪತ್ರೆಗೆ ತೆರಳಿ ಸೂಕ್ತವಾದ ಲಸಿಕೆಗಳನ್ನು ಹಾಕಿಸಿಕೊಳ್ಳದೆ ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದನು ಎನ್ನಲಾಗಿದೆ.

ನಾಯಿ ಕಚ್ಚಿದ ಎರಡು ತಿಂಗಳ ಬಳಿಕ, ಅಂದರೆ ಒಂದು ವಾರದ ಹಿಂದೆ ಪ್ರದೀಪ್ ದೇಹದಲ್ಲಿ ರೇಬಿಸ್ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣ ಆತನನ್ನು ನಿಡಗುಂದಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಪರಿಸ್ಥಿತಿ ಬಿಗಡಾಯಿಸಿದ ಕಾರಣ ಬಾಗಲಕೋಟೆಯ ಕೆರೂಡಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿಂದ ನಿನ್ನೆ (ಮೇ 25) ಮಧ್ಯಾಹ್ನ 12 ಗಂಟೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ರೇಬಿಸ್ ವೈರಸ್ ಇಡೀ ದೇಹವನ್ನು ಆವರಿಸಿತ್ತು. ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಪ್ರದೀಪ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.

ಇದನ್ನು ಓದಿ: ಪೊಲೀಸರನ್ನ ಕಂಡು ಬಿಲ್ಡಿಂಗ್‌ನಿಂದ ಕೆಳಗೆ ಹಾರಿದ ರೌಡಿ ‘ಸ್ಪಾಟ್ ನಾಗ’; ಸೊಂಟ ಮುರಿದುಕೊಂಡು ಆಸ್ಪತ್ರೆ ಸೇರಿದ ಕಿರಾತಕ!

ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದು, ನಾಯಿ ಕಡಿತಕ್ಕೊಳಗಾದ ತಕ್ಷಣವೇ ಲಸಿಕೆ ಪಡೆಯುವುದು ಎಷ್ಟು ಕಡ್ಡಾಯ ಎಂಬುದಕ್ಕೆ ಈ ದುರಂತ ಸಾಕ್ಷಿಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಕೂಡ ಆಗ್ಗಾಗೆ ಎಚ್ಚರಿಕೆಯನ್ನು ಹಾಗೂ ಜಾಗೃತಿಯನ್ನು ಮೂಡಿಸುತ್ತಿದೆ. ಅದರೂ ಇಂತಹ ನಿರ್ಲಕ್ಷ್ಯ ಸಾವಿಗೆ ಕಾರಣವಾಗಬಹುದು.

ರಾಜ್ಯದ ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us