AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನವಿಲ್ಲದೆ ನರೇಗಾ ನೌಕರರ ಪರದಾಟ: ತಾಳಿ ಅಡವಿಟ್ಟು ಮಕ್ಕಳ ಫೀಜು ಕಟ್ಟಿದ ಮಹಿಳಾ ಸಿಬ್ಬಂದಿ

ನರೇಗಾ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಿಂದ ಅನೇಕ ಗ್ರಾಮೀಣ ಬಡ ಜನರು ಬದುಕು ಕಟ್ಟಿಕೊಂಡಿದ್ದಾರೆ. ನರೇಗಾ ಯೋಜನೆಗೆ ಹೊರಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ನರೇಗಾ ಯಶಸ್ವಿಯಾಗಲು ಹೊರಗುತ್ತಿಗೆ ನೌಕರರ ಶ್ರಮ ಸಾಕಷ್ಟಿದೆ. ಆದರೆ, ಈ ನೌಕರರಿಗೆ ಕಳೆದ ಏಳು ತಿಂಗಳಿಂದ ವೇತನ ನೀಡಿಲ್ಲ. ಹೀಗಾಗಿ, ನೌಕರರು ಹೋರಾಟದ ಹಾದಿ ಹಿಡಿದಿದ್ದಾರೆ.

ವೇತನವಿಲ್ಲದೆ ನರೇಗಾ ನೌಕರರ ಪರದಾಟ: ತಾಳಿ ಅಡವಿಟ್ಟು ಮಕ್ಕಳ ಫೀಜು ಕಟ್ಟಿದ ಮಹಿಳಾ ಸಿಬ್ಬಂದಿ
ನರೇಗಾ ನೌಕರರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 10, 2025 | 9:42 PM

Share

ಬಾಗಲಕೋಟೆ, ಜು.10: ಮಹಾತ್ಮಾಗಾಂಧಿರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (NREGA scheme)ಯಡಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಬಾಗಲಕೋಟೆ (Bagalkot)ಯ ನೌಕರರಿಗೆ ಕಳೆದ ಏಳು ತಿಂಗಳಿಂದ ವೇತನ ಆಗಿಲ್ಲ. ವೇತನಕ್ಕಾಗಿ ಹೊರಗುತ್ತಿಗೆ ನೌಕರರು ಅಲೆದಾಡಿ, ಕೊನೆಗೆ ಅಸಹಕಾರ ಚಳುವಳಿ ನಡೆಸುತ್ತಿದ್ದಾರೆ. ನಮಗೆ ಸಕಾಲಕ್ಕೆ ವೇತನ ನೀಡಿ, ವಿಮಾ ಸೌಲಭ್ಯ ಕಲ್ಪಿಸಿ ಹಾಗೂ ಒಳಗುತ್ತಿಗೆ ಅಂತ ಪರಿಗಣಿಸಿ ಎಂದು ನೌಕರರು ಆಗ್ರಹಿಸಿದ್ದಾರೆ.

“ಮಕ್ಕಳ ಶಾಲಾ ಶುಲ್ಕ ಕಟ್ಟಲು ತಾಳಿ ಅಡವಿಟ್ಟಿದ್ದೇನೆ. ಕಳೆದ ಆರು ತಿಂಗಳಿಂದ ಹಾಲಿನ ಹಣ ಕೊಡುವುದಕ್ಕೆ ದುಡ್ಡಿಲ್ಲದಂತಾಗಿದೆ. ಮನೆ ಬಾಡಿಗೆ ಕಟ್ಟಲು ಹಣವಿಲ್ಲದೆ ಮನೆ ಬದಲಾಯಿಸುತ್ತಿದ್ದೇನೆ. ವೇತನ ಇಲ್ಲದಿದ್ದಕ್ಕೆ ಎಲ್ಲಿಯೂ ಒಂದು ರೂಪಾಯಿ ಸಾಲ ದೊರೆಯುತ್ತಿಲ್ಲ. ಆದಷ್ಟು ಬೇಗ ನಮಗೆ ವೇತನ ನೀಡಿ ನಮ್ಮ ಕುಟುಂಬ ರಕ್ಷಿಸಿ” ಎಂದು ಮಹಿಳಾ ಸಿಬ್ಬಂದಿ ರೇಣುಕಾ ಅಳಲು ತೋಡಿಕೊಂಡಿದ್ದಾರೆ.

ಕೆಲ ನೌಕರರು ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ತಮ್ಮ ಕಷ್ಟ ನೆನೆದು ಕಣ್ಣೀರು ಹಾಕಿದ್ದಾರೆ. ನೌಕರ ಪುಂಡಲೀಕ ಲಮಾಣಿ ಎಂಬುವರ ಪುತ್ರನಿಗೆ ಥಲೆಸೀಮಿಯಾ ಕಾಯಿಲೆ ಇದೆ. , ಚಿಕಿತ್ಸೆ ಕೊಡಿಸಬೇಕು, 15 ದಿನಕ್ಕೊಮ್ಮೆ ರಕ್ತ ಬದಲಾವಣೆ ಮಾಡಬೇಕು. ಆದರೆ, ಸಕಾಲಕ್ಕೆ ವೇತನ ಬಾರದೆ, ಹಣವಿಲ್ಲದೆ ಪರದಾಡುವಂತಾಗಿದೆ ಎಂದು ದುಃಖ ತೋಡಿಕೊಂಡರು.

ಇದನ್ನೂ ಓದಿ
Image
ನರೇಗಾದಲ್ಲಿ ಮೈದಾನ ನಿರ್ಮಾಣ, ಶಾಲೆ ಮಕ್ಕಳೇ ಕಾರ್ಮಿಕರು!
Image
ನರೇಗಾ ಅಡಿಯಲ್ಲಿ ಕೆಲಸ ಮಾಡುವವರ ಸಂಖ್ಯೆ ಶೇ85 ರಷ್ಟು ಕುಸಿತ
Image
ನರೇಗಾ ಅನುಷ್ಠಾನದಲ್ಲಿ ಭಾರಿ ಅವ್ಯವಹಾರ; ಅಧಿಕಾರಿಗಳ ವಿರುದ್ಧ FIR ದಾಖಲು
Image
ಹಿಂದುಳಿದ ರಾಯಚೂರು ಜಿಲ್ಲೆಯಲ್ಲಿ ಕೋಟ್ಯಂತರ ರೂ ನರೇಗಾ ಅಕ್ರಮ

ಇದನ್ನೂ ಓದಿ: ನರೇಗಾ ಯೋಜನೆ ಹಣ ಲೂಟಿ ಮಾಡಲು ಪುರುಷರಿಗೆ ಮಹಿಳೆ ವೇಷ ಹಾಕಿಸಿದ ಅಧಿಕಾರಿಗಳು!

ಒಟ್ಟಿನಲ್ಲಿ ಹೊರಗುತ್ತಿಗೆ ನೌಕರರ ಪರದಾಟ ಯಾರಿಗೂ ಕಾಣುತ್ತಿಲ್ಲ. ಮೇಲಾಧಿಕಾರಿಗಳನ್ನು ಕೇಳಿದರೆ ಸರ್ಕಾರಕ್ಕೆ ತಿಳಿಸಿದ್ದೇವೆ, ನಮ್ಮ ಕೈಯಲ್ಲಿ ಏನು ಇಲ್ಲ ಹೇಳಿದ್ದಾರೆ. ವೇತನವಿಲ್ಲದೆ ನೌಕರರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರ ಆದಷ್ಟು ಬೇಗ ವೇತನ ನೀಡಿ ಆಸರೆಯಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:34 pm, Thu, 10 July 25

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ