Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲೂ ಹುಲಿ ಉಗುರು ಕಲರವ: ಗಣ್ಯ ವ್ಯಕ್ತಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಪತ್ತೆ!

tiger claw pattern pendant: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಜಂಬಗಿ ಕೆಡಿ ಗ್ರಾಮದ ‌ನಿವಾಸಿ ಸಂಜಯ್ ತಳೇವಾಡ ಬಂಗಾರದ ಚೈನ್ ಗೆ ಹುಲಿ ಉಗುರು ಮಾದರಿ ಪೆಂಡೆಂಟ್ ಹಾಕಿಸಿಕೊಂಡಿದ್ದಾರೆ. ಸಂಜಯ್ ತಳೇವಾಡ ಫೇಸ್ ಬುಕ್ ಖಾತೆಯಲ್ಲಿ ಲಾಕೆಟ್ ಧರಿಸಿದ ಫೋಟೊ ಕಂಡುಬಂದಿದೆ.

ಬಾಗಲಕೋಟೆಯಲ್ಲೂ ಹುಲಿ ಉಗುರು ಕಲರವ: ಗಣ್ಯ ವ್ಯಕ್ತಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಪತ್ತೆ!
ಬಾಗಲಕೋಟೆ: sಗಣ್ಯ ವ್ಯಕ್ತಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್ ಪತ್ತೆ!
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಸಾಧು ಶ್ರೀನಾಥ್​

Updated on:Oct 26, 2023 | 12:34 PM

ಬಾಗಲಕೋಟೆ, ಅಕ್ಟೋಬರ್​ 26: ಬಿಗ್ ಬಾಸ್ ಸ್ಪರ್ಧಿ ಸಂತೋಷ ಕೊರಳಲ್ಲಿ ‌ಹುಲಿ ಉಗುರು ಪತ್ತೆ ಬೆನ್ನಲ್ಲೇ ಎಲ್ಲ ಕಡೆಗಳಲ್ಲೂ ಒಬ್ಬರಿಗೊಬ್ಬರು ಬೆನ್ನು ಪರಚಿಕೊಳ್ಳಲಾರಂಭಿಸಿದ್ದಾರೆ. ಹುಲಿ ಉಗುರು ಕಲರವ ಜೋರಾಗಿ ಕೇಳಿಬರುತ್ತಿದೆ. ಇದೀಗ ಬಾಗಲಕೋಟೆ (Bagalkot) ಜಿಲ್ಲೆಯಲ್ಲೂ ಗಣ್ಯ ವ್ಯಕ್ತಿಯ ಕೊರಳಲ್ಲಿ (neck) ಹುಲಿ ಉಗುರು ಮಾದರಿ ಪೆಂಡೆಂಟ್ (tiger claw pattern pendant) ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿಜಯಪುರ-ಬಾಗಲಕೋಟೆ ಕೆಎಂಎಫ್ ನಿರ್ದೇಶಕ ಕೊರಳಲ್ಲಿ ಹುಲಿ ಉಗುರು ಪೆಂಡೆಂಟ್ ಪತ್ತೆಯಾಗಿದ್ದು ಸದ್ಯಕ್ಕೆ ಜಿಲ್ಲೆಯಲ್ಲಿ ಸಮಚಲನ ಮೂಡಿಸಿದೆ. ಸಂಜಯ್ ತಳೇವಾಡ ವಿಜಯಪುರ ಬಾಗಲಕೋಟೆ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಸಂಜಯ್ ತಳೇವಾಡ ಕೊರಳಲ್ಲಿ‌ ಹುಲಿ ಉಗುರು ಮಾದರಿಯ ಲಾಕೆಟ್ ರಾರಾಜಿಸುತ್ತಿರುವುದು ಕಂಡುಬಂದಿದೆ.

Also Read: ಹುಲಿ ಉಗುರು ಪೆಂಡೆಂಟ್ ಪ್ರಕರಣ: ಮತ್ತೊಂದು ರೀತಿಯ ದಾಳಿಗೆ ಪ್ಲಾನ್ ಮಾಡಿದ ಅರಣ್ಯಾಧಿಕಾರಿಗಳು! ಆಭರಣ ಅಂಗಡಿ ಮಾಲೀಕರಿಗೂ ಸಂಕಷ್ಟ

ಅವರು ಬಂಗಾರದ ಚೈನ್ ಗೆ ಹುಲಿ ಉಗುರು ಮಾದರಿ ಪೆಂಡೆಂಟ್ ಹಾಕಿಸಿಸಿಕೊಂಡಿದ್ದಾರೆ. ಸಂಜಯ್ ತಳೇವಾಡ ಫೇಸ್ ಬುಕ್ ಖಾತೆಯಲ್ಲಿ ಲಾಕೆಟ್ ಧರಿಸಿದ ಫೋಟೊ ಕಂಡುಬಂದಿದೆ. ಸಂಜಯ್ ತಳೇವಾಡ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಜಂಬಗಿ ಕೆಡಿ ಗ್ರಾಮದ ‌ನಿವಾಸಿ.

ಕೊರಳಲ್ಲಿ ಇರೋದು ನಿಜವಾದ ಹುಲಿ ಉಗುರಾ ಅಥವಾ ಬೇರೆ ವಸ್ತುವಿನಿಂದ ಮಾಡಿರೋದು ಸದ್ಯಕ್ಕೆ ಖಚಿತವಾಗಿ ತಿಳಿದುಬಂದಿಲ್ಲ. ಆದರೆ ಹುಲಿ ಉಗುರು ಮಾದರಿ ಹಿನ್ನೆಲೆ ಸದ್ಯಕ್ಕೆ ಆ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸಂಜಯ್ ತಳೇವಾಡ ಮುಧೋಳ‌ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ರಾಮಣ್ಣ ತಳೇವಾಡ ಅವರ ಸಹೋದರನ ಮಗ.

ಪರಿಶೀಲಿಸುತ್ತೇವೆ ಎಂದ ಮುಧೋಳ ವಲಯ ಅರಣ್ಯ ಅಧಿಕಾರಿ

ಈ ಬಗ್ಗೆ ಮುಧೋಳ ವಲಯ ಅರಣ್ಯ ಅಧಿಕಾರಿ ತಳವಾರ್ ಅವರು ಟಿವಿ 9 ಜೊತೆ ಮಾತಾಡಿದ್ದಾರೆ. ಈ ವಿಚಾರ ನಮ್ಮ ‌ಗಮನಕ್ಕೆ ಬಂದಿಲ್ಲ. ಟಿವಿ 9 ಮೂಲಕ ಇದೀಗ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕೂಡಲೇ ಪರಿಶೀಲನೆ ನಡೆಸುತ್ತೇವೆ. ಸಂಜಯ್ ತಳೇವಾಡ ಧರಿಸಿದ ಉಗುರು ಹುಲಿ ಉಗುರಾ ಅಥವಾ ಬೇರೆ ನಾ ಎಂಬ ಬಗ್ಗೆ ಪರಿಶೀಲನೆ ನಡೆಸೋದಾಗಿ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:23 pm, Thu, 26 October 23

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು