AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತ ಪ್ರವಾಹ ಪರಿಸ್ಥಿತಿಗೆ ನಲುಗಿದ ಜನ, ಅತ್ತ ಗೋವಾ ರೆಸಾರ್ಟ್​​ನಲ್ಲಿ ಬಿಜೆಪಿ ಮುಖಂಡರ ಮೋಜು ಮಸ್ತಿ

ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಿಂದ ಪ್ರವಾಹ ಭೀತಿ ಎದುರಾಗಿದೆ. ಆದ್ರೆ ಇಂತಹ ಪ್ರವಾಹ ಪರಿಸ್ಥಿತಿ ವೇಳೆ ಮುಖಂಡರು ಮೋಜು ಮಸ್ತಿ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ. ಬಾಗಲಕೋಟೆಯಲ್ಲಿ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಚುನಾವಣೆಗಾಗಿ ರೆಸಾರ್ಟ್ ರಾಜಕಾರಣ ನಡೆಯುತ್ತಿದೆ.

ಇತ್ತ ಪ್ರವಾಹ ಪರಿಸ್ಥಿತಿಗೆ ನಲುಗಿದ ಜನ, ಅತ್ತ ಗೋವಾ ರೆಸಾರ್ಟ್​​ನಲ್ಲಿ ಬಿಜೆಪಿ ಮುಖಂಡರ ಮೋಜು ಮಸ್ತಿ
ಗೋವಾ ರೆಸಾಟ್​ನಲ್ಲಿ ಬಿಜೆಪಿ ಮುಖಂಡರ ಮೋಜು ಮಸ್ತಿ
TV9 Web
| Edited By: |

Updated on:Jul 14, 2022 | 6:31 PM

Share

ಬಾಗಲಕೋಟೆ: ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದೆ(Karnataka Rains). ಮಳೆಯಿಂದಾಗಿ ಅನೇಕ ಕಡೆ ಊರುಗಳಿಗೆ ನೀರು ನುಗ್ಗಿದೆ. ಜನ ಆಚೆ ಬರಲೂ ಆಗದೆ ಪರದಾಡುತ್ತಿದ್ದಾರೆ. ಸೇತುವೆಗಳು ಕಾಣ್ತಿಲ್ಲ. ಹೊಲಗದ್ದೆಗಳಲೆಲ್ಲ ನೀರು ನಿಂತು ಕೆರೆಯಂತಾಗಿವೆ. ದೇಗುಲಗಳು ಮುಳುಗಿವೆ. ಕೆಲವೆಡೆ ಗುಡ್ಡ ಕುಸಿದು ಸಂಚಾರ ನಿರ್ಬಂಧಿಸಲಾಗಿದೆ. ಇಂತಹ ಭೀಕರ ಪರಿಸ್ಥಿತಿಯ ನಡುವೆ ಮುಖಂಡರು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಿಂದ ಪ್ರವಾಹ ಭೀತಿ ಎದುರಾಗಿದೆ. ಆದ್ರೆ ಇಂತಹ ಪ್ರವಾಹ ಪರಿಸ್ಥಿತಿ ವೇಳೆ ಮುಖಂಡರು ಮೋಜು ಮಸ್ತಿ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ. ಬಾಗಲಕೋಟೆಯಲ್ಲಿ ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಚುನಾವಣೆಗಾಗಿ ರೆಸಾರ್ಟ್ ರಾಜಕಾರಣ ನಡೆಯುತ್ತಿದೆ. ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ಇದೆ. ಹೀಗಾಗಿ ಗೋವಾ, ದಾಂಡೇಲಿಯಲ್ಲಿ ಪುರಸಭೆ ಸದಸ್ಯರ ಜೊತೆ ಬಾಗಲಕೋಟೆ ಜಿಲ್ಲೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಪುರಸಭೆಯ ಬಿಜೆಪಿ ಸದಸ್ಯರು ಗೋವಾ ರೆಸಾರ್ಟ್ಗೆ ತೆರಳಿದ್ದು ಇಂದು ಬಿಜೆಪಿ ಶಾಸಕ ಸಿದ್ದು ಸವದಿ ಸದಸ್ಯರ ಜೊತೆಗೂಡಿದ್ದಾರೆ.

bgk resort

ಸಾಮಾಜಿಕ ಜಾಲತಾಣದಲ್ಲಿ ಮುಖಂಡರ ನಡೆಗೆ ವ್ಯಂಗ್ಯ

ಇಲ್ಲಿ ನಿರಂತರ ಮಳೆಯಿಂದ ಕೃಷ್ಣಾ ನದಿ ಪ್ರವಾಹದ ಭೀತಿ ಇದೆ. ಆದ್ರೆ ಗೋವಾಗೆ ಹೋಗಿ ಮುಖಂಡರು ಎಂಜಾಯ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದೆ. ಮೋಜಿನಲ್ಲಿ ತೊಡಗಿರುವ ಸಿದ್ದು ಸವದಿ ಫೋಟೋ ಹಾಕಿ ವ್ಯಂಗ್ಯ ಮಾಡಲಾಗುತ್ತಿದೆ. ಜಿಲ್ಲೆಯ ಪ್ರವಾಹ ಸ್ಥಿತಿಗತಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಚಿವ ಸಿ.ಸಿ.ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಆದ್ರೆ ಸಭೆಗೆ ಗೈರಾಗಿ ಬಿಜೆಪಿ ಶಾಸಕ ಸಿದ್ದು ಸವದಿ ಗೋವಾದಲ್ಲಿದ್ದಾರೆ. ಈ ಹಿಂದೆ ಪುರಸಭೆ ಅಧ್ಯಕ್ಷರ ಚುನಾವಣೆ ವೇಳೆ ಗಲಾಟೆ ಆಗಿತ್ತು. ಆ ವೇಳೆ ಸಿದ್ದು ಸವದಿ ಮಹಿಳಾ ಸದಸ್ಯರನ್ನು ಎಳೆದಾಡಿ ಟೀಕೆಗೆ ಗುರಿಯಾಗಿದ್ದರು. ಈಗ ಮತ್ತೆ ಅಧ್ಯಕ್ಷರ ಆಯ್ಕೆಗಾಗಿ‌ ಗೋವಾದಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ.

Published On - 6:25 pm, Thu, 14 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?