AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದಲ್ಲಿ ‌ಚಿನ್ನದಂತಹ ಸಾಧನೆ ಮಾಡಿದ ಬಾಗಲಕೋಟೆ ಸೋದರರು, ಶಹಭಾಸ್​ ಎಂದ ಬಾದಾಮಿ ಶಾಸಕ ಸಿದ್ದರಾಮಯ್ಯ

ನಾಗರಾಜ ಪಿಯುಸಿ‌‌ ಮುಗಿಸಿದ್ದು, 23 ವರ್ಷದೊಳಗಿನ ವಿಭಾಗದಲ್ಲಿ ಚಿನ್ನ.. ಯುವರಾಜ 17 ವರ್ಷದೊಳಗಿನ ವಿಭಾಗದಲ್ಲಿ ಚಿನ್ನದ ಬೇಟೆಯಾಡಿದ್ದಾರೆ. ಇಬ್ಬರೂ ಸಹೋದರರ ಸಾಧನೆಗೆ ಬಾದಾಮಿ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೇಸ್ ಬುಕ್‌ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ನೇಪಾಳದಲ್ಲಿ ‌ಚಿನ್ನದಂತಹ ಸಾಧನೆ ಮಾಡಿದ ಬಾಗಲಕೋಟೆ ಸೋದರರು, ಶಹಭಾಸ್​ ಎಂದ ಬಾದಾಮಿ ಶಾಸಕ ಸಿದ್ದರಾಮಯ್ಯ
ನೇಪಾಳದಲ್ಲಿ ‌ಚಿನ್ನದ ಬೇಟೆಯಾಡಿದ ಬಾಗಲಕೋಟೆ ಬ್ರದರ್ಸ್
TV9 Web
| Edited By: |

Updated on: Jul 30, 2022 | 2:55 PM

Share

ಬಾಗಲಕೋಟೆ: ನೇಪಾಳದಲ್ಲಿ ನಡೆದ 7ನೇ ಇಂಡೊ-ನೇಪಾಳ ಅಂತರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಬಾಗಲಕೋಟೆ ಸಹೋದರರು ಚಿನ್ನದ ಬೇಟೆಯಾಡಿದ್ದಾರೆ. 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಸಹೋದರರು ಚಿನ್ನದಂತಹ ಸಾಧನೆ ಮಾಡಿದ್ದಾರೆ. ಚಿನ್ನ ಗೆದ್ದು ಭಾರತದ ಬಾವುಟ ಹಾರಿಸಿದವರು ನಾಗರಾಜ್ ಗಾಣೀಗೇರ್ ಮತ್ತು ಯುವರಾಜ್ ಗಾಣೀಗೇರ್. ಇವರು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲ್ಲೂಕಿನ ತೋಗುಣಿಸಿ ಗ್ರಾಮದವರು.

ನೇಪಾಳದ ಪೊಖ್ರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ ನಡೆದ ಇಂಡೊ-ನೇಪಾಳ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ನಾಗರಾಜ ಗಾಣಿಗೇರ 4 ನಿಮಿಷ 34 ಸೆಕೆಂಡ್ ನಲ್ಲಿ ಓಡಿದರೆ.. ಯುವರಾಜ ಗಾಣಿಗೇರ 4 ನಿಮಿಷ 32 ಸೆಕೆಂಡ್ ನಲ್ಲಿ ಗುರಿ ತಲುಪಿದ್ದಾರೆ.

ನಾಗರಾಜ ಪಿಯುಸಿ‌‌ ಮುಗಿಸಿದ್ದು, 23 ವರ್ಷದೊಳಗಿನ ವಿಭಾಗದಲ್ಲಿ ಚಿನ್ನ.. ಯುವರಾಜ 17 ವರ್ಷದೊಳಗಿನ ವಿಭಾಗದಲ್ಲಿ ಚಿನ್ನದ ಬೇಟೆಯಾಡಿದ್ದಾರೆ. ಇಬ್ಬರೂ ಸಹೋದರರ ಸಾಧನೆಗೆ ಬಾದಾಮಿ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್‌ನಲ್ಲಿ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿದ್ದು, ಶುಭ ಹಾರೈಸಿದ್ದಾರೆ.

ನೇಪಾಳದಲ್ಲಿ ನಡೆದ ಇಂಡೊ-ನೇಪಾಳ ಇಂಟರ್ ನ್ಯಾಷನಲ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಬಾದಾಮಿ ತಾಲ್ಲೂಕಿನ ತೋಗುಣಸಿ ಗ್ರಾಮದ ಯುವರಾಜ ಗಾಣಿಗೇರ ಹಾಗೂ ನಾಗರಾಜ ಗಾಣಿಗೇರ ಅವರಿಗೆ ಅಭಿನಂದನೆಗಳು. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ದೊಡ್ಡ ಸಾಧನೆಗಳು ನಿಮ್ಮ‌ ಕೈಗೂಡಲಿ. ನಿಮ್ಮ ಸಾಧನೆ ನಾಡಿನ ಗ್ರಾಮೀಣ ಪ್ರತಿಭೆಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಅಂತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ, ಸಿದ್ದರಾಮಯ್ಯ ಶುಭ ಕೋರಿದ್ದಾರೆ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ