AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಕಾಂಗ್ರೆಸ್​ನಲ್ಲಿ ಬಂಡಾಯದ ಗಾಳಿ, ಆಪರೇಷನ್​ಗೆ ಇಳಿದ ಬಿಜೆಪಿ; ವೀಣಾ ಕಾಶಪ್ಪನವರ್​ಗೆ ಗಾಳ

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್​ ಅವರಿಗೆ ಘೋಷಣೆಯಾಗಿದೆ. ಇದರಿಂದಾಗಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ಅವರು ತೀವ್ರ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಗಾಳಿ ಬೀಸುತ್ತಿದೆ. ಈ ನಡುವೆ ಸುದ್ದಿಲ್ಲದೆ ಬಿಜೆಪಿ ಆಪರೇಷನ್ ಕಮಲಕ್ಕೆ ಇಳಿದಿದ್ದು, ವೀಣಾ ಕಾಶಪ್ಪನವರ್ ಅವರನ್ನು ಸಂಪರ್ಕಿಸಿದೆ.

ಬಾಗಲಕೋಟೆ ಕಾಂಗ್ರೆಸ್​ನಲ್ಲಿ ಬಂಡಾಯದ ಗಾಳಿ, ಆಪರೇಷನ್​ಗೆ ಇಳಿದ ಬಿಜೆಪಿ; ವೀಣಾ ಕಾಶಪ್ಪನವರ್​ಗೆ ಗಾಳ
ಬಾಗಲಕೋಟೆ ಕಾಂಗ್ರೆಸ್​ನಲ್ಲಿ ಬಂಡಾಯ, ಆಪರೇಷನ್​ಗೆ ಇಳಿದ ಬಿಜೆಪಿ; ವೀಣಾ ಕಾಶಪ್ಪನವರ್​ಗೆ ಗಾಳ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 28, 2024 | 11:09 AM

Share

ಬಾಗಲಕೋಟೆ, ಮಾ.28: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ (Samyukta Patil)​ ಅವರಿಗೆ ಘೋಷಣೆಯಾಗಿರುವುದರಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ಬಂಡಾಯ ಏಳುವ ಸಾಧ್ಯತೆ ದಟ್ಟವಾಗಿದೆ. ಅಸಮಾಧಾನ ಶಮನಕ್ಕೆ ನಾಯಕರು ಯತ್ನಿಸುತ್ತಿದ್ದಾರೆ. ಈ ನಡುವೆ, ಬಿಜೆಪಿ ಸುದ್ದಿಲ್ಲದೆ ಆಪರೇಷನ್ ಕಮಲಕ್ಕೆ ಇಳಿದಿದ್ದು, ಪಕ್ಷ ಸೇರುವಂತೆ ವೀಣಾ ಕಾಶಪ್ಪನವರ್ (Veena Kashappanavr)​ ಅವರಿಗೆ ಬಿಜೆಪಿ ಆಹ್ವಾನ ನೀಡಿದೆ ಎಂಬ ಮಾಹಿತಿ ಖಚಿತ ಮೂಲಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್​ನಲ್ಲಿ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಪಂಚಮಸಾಲಿ ಮುಖಂಡರ ಸಭೆಯಲ್ಲಿ ಕುತಂತ್ರ, ಹುನ್ನಾರ ನಡೆದಿದೆ ಎಂದು ಸ್ವ ಸಮುದಾಯದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸಮಾಜಕ್ಕೆ ದುಡಿದವರು ನಾವು, ಅದರ ಫಲ ಪಡೆದವರು ಇನ್ನೊಬ್ಬರು ಎಂದು ವೀಣಾ ಕಾಶಪ್ಪನವರ್ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಪತಿಯನ್ನು ಎಳೆತರದೆ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಶಕ್ತಿ ನನಗಿದೆ: ವೀಣಾ ಕಾಶಪ್ಪನವರ್, ಕಾಂಗ್ರೆಸ್ ನಾಯಕಿ

ಇದರ ಬೆನ್ನಲ್ಲೇ, ನಮ್ಮ ಪಕ್ಷ ಬರುವಂತೆ ವೀಣಾ ಅವರಿಗೆ ಬಿಜೆಪಿ ನಾಯಕರು ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಗೆ ಬನ್ನಿ, ನಿಮಗೆ ನಮ್ಮ ಪಕ್ಷದಲ್ಲಿ ಭವಿಷ್ಯ ಇದೆ ಎಂದು ಕಳೆದ ಮೂರು ದಿನಗಳಿಂದ ಬಿಜೆಪಿ ನಾಯಕರು ವೀಣಾ ಕಾಶಪ್ಪನವರ್ ಅವರಿಗೆ ಆಫರ್ ನೀಡುತ್ತಿದ್ದಾರೆ. ಈ ಬಗ್ಗೆ ವೀಣಾ ಅವರು ತಮ್ಮ ಆಪ್ತರ ಬಳಿ ಸಮಾಲೋಚನೆ ಮಾಡಿದ್ದಾರೆ. ಅಲ್ಲದೆ, ಯಾವುದೇ ನಿರ್ಧಾರ ತಿಳಿಸದೆ ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.

ಪತಿ ಕಾಂಗ್ರೆಸ್​ನಲ್ಲಿ ಇದ್ದಾರೆ, ಕಾಂಗ್ರೆಸ್ ಶಾಸಕರು, ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ವೀಣಾ ಕಾಶವಪ್ಪನವರ್ ಪಕ್ಷ ಬಿಟ್ಟು ಹೋಗಲ್ಲ ಎನ್ನುವ ಮಾತು ಕೇಳಿಬರುತ್ತಿವೆ. ಅದಾಗ್ಯೂ, ಕಾದು ನೋಡುವ ತಂತ್ರ ಅನುಸರಿಸುತ್ತಿರುವ ವೀಣಾ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More