AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಮುಧೋಳ ಬಂದ್​ ಮುಂದುವರಿಕೆ, ನ.19ರ ವರೆಗೆ 144 ನಿಷೇಧಾಜ್ಞೆ ಜಾರಿ

ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದು, ರೈತರು ನಾಳೆಯೂ (ನ.16) ಮುಧೋಳ ಬಂದ್​ಗೆ ಕರೆ ನೀಡಿದ್ದಾರೆ.

ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಮುಧೋಳ ಬಂದ್​ ಮುಂದುವರಿಕೆ, ನ.19ರ ವರೆಗೆ 144 ನಿಷೇಧಾಜ್ಞೆ ಜಾರಿ
ರೈತ ಸಂಘಟನೆಯಿಂದ ಪ್ರತಿಭಟನೆ
TV9 Web
| Updated By: ವಿವೇಕ ಬಿರಾದಾರ|

Updated on:Nov 16, 2022 | 9:15 PM

Share

ಬಾಗಲಕೋಟೆ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ರೈತರು ಪ್ರತಿಭಟನೆ (Farmers Protest) ಮಾಡುತ್ತಿದ್ದು, ಇಂದು (ನ.15) ಮುಧೋಳ (Mudol) ಬಂದ್​ಗೆ ಕರೆ ಕೊಟ್ಟಿದ್ದರು. ರೈತರ ಪ್ರತಿಭಟನೆಗೆ ಸರ್ಕಾರ ಮಣಿಯದಿದ್ದಕ್ಕೆ ರೈತರು ನಾಳೆಯೂ (ನ.16) ಮುಧೋಳ ಬಂದ್​ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ನ.19ರ ಮಧ್ಯರಾತ್ರಿವರೆಗೂ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಕಬ್ಬು ಬೆಳೆಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ನವೆಂಬರ್​ 14ರಂದು ಸರ್ಕಾರ ಪ್ರತಿಭಟನಾಕರರ ಹೋರಾಟಕ್ಕೆ ಮಣಿದು ಮೂವರು ಸಚಿವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿತ್ತು. ಹೀಗಾಗಿ ರಾಜ್ಯ ರೈತ ಸಂಘ ಮುಧೋಳ ಬಂದ್​​ಗೆ ಕರೆ ಕೊಟ್ಟಿತ್ತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್​ ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಸಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದರು. ಆದರೆ ಸಚಿವರಿಂದ ಪ್ರತಿಕ್ರಿಯೆ ಬರದ ಹಿನ್ನೆಲೆ ರೈತರು ಇಂದು ಬೀದಿಗೆ ಇಳಿದಿದ್ದರು.

ಇಂದು ಮುಧೋಳ ನಗರ ಸಂಪೂರ್ಣ ಸ್ಥಬ್ದವಾಗಿದ್ದು, ರೈತರು ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಮಾತನಾಡಿ ಸಂಜೆಯೊಳಗೆ 2900 ಬೆಲೆ ಘೋಷಣೆ ಮಾಡಬೇಕು, ಇಲ್ಲದಿದ್ದರೆ ಪ್ರತಿಭಟನೆ ಉಗ್ರಸ್ವರೂಪಕ್ಕೆ ತಿರುಗುತ್ತದೆ. ನಾವು ಯಾವುದೇ 144 ಸೆಕ್ಷನ್​ಗೂ ಅಂಜೋದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ನಾಳೆಯೂ ಮುಧೋಳ ಬಂದ್​​

ರೈತರು ನಾಳೆಯೂ (ನ.16) ಮುಧೋಳ ಬಂದ್​ಗೆ ಕರೆ ನೀಡಿದ್ದಾರೆ. ಈ ವೇಳೆ ತುರ್ತು ವಾಹನಗಳು, ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಶಾಲಾ ಬಸ್, ಹಾಲು ಸರಬರಾಜು ವಾಹನ, ಪತ್ರಿಕೆ ವಾಹನ, ಆಂಬುಲೆನ್ಸ್ ಓಡಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ನಾಳೆ ಎಂದಿನಂತೆ ಸರ್ಕಾರಿ, ಖಾಸಗಿ ಬಸ್ ಸಂಚರಿಸುವಂತಿಲ್ಲ.

ಬಾಗಲಕೋಟೆ, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಜಿಲ್ಲೆಗಳಿಂದ ಲೋಕಾಪುರ ಮಾರ್ಗವಾಗಿ ಮುಧೋಳ, ಜಮಖಂಡಿ ಕಡೆಗೆ ಹೋಗಿ ಬರುವ ಪ್ರಯಾಣಿಕರಿಗೆ ನಾಳೆಯೂ ಬಂದ್ ಬಿಸಿ ತಟ್ಟಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Wed, 16 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?