AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಹಿಡಿದ ಟೊಮ್ಯಾಟೊ : 11 ಎಕರೆಯಲ್ಲಿ 10 ಲಕ್ಷ ರೂ. ಸಂಪಾದಿಸಿದ ರೈತ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟೊಮ್ಯಾಟೊ ಅಧಿಕ ಬೆಲೆಗೆ ಮಾರಾಟವಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿಯ ರೈತ ಶಿವಪ್ಪ ಕುರಿ 11 ಎಕರೆಯಲ್ಲಿ ಖರ್ಚುವೆಚ್ಚ ತೆಗೆದು ಎರಡು ತಿಂಗಳಲ್ಲಿ ಬರೊಬ್ಬರಿ 10 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಕೈ ಹಿಡಿದ ಟೊಮ್ಯಾಟೊ : 11 ಎಕರೆಯಲ್ಲಿ 10 ಲಕ್ಷ ರೂ. ಸಂಪಾದಿಸಿದ ರೈತ
ರೈತ ಶಿವಪ್ಪ ಕುರಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Jul 15, 2023 | 6:46 PM

Share

ಬಾಗಲಕೋಟೆ: ಟೊಮ್ಯಾಟೊ (Tomato) ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಗ್ರಾಹಕರು ಟೊಮ್ಯಾಟೊ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ರೈತರು (Farmer) ಮಾತ್ರ ಬಂಪರ್ ಲಾಭ ಪಡೆಯುತ್ತಿದ್ದಾರೆ. ಹೌದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟೊಮ್ಯಾಟೊ ಅಧಿಕ ಬೆಲೆಗೆ ಮಾರಾಟವಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿಯ ರೈತ ಶಿವಪ್ಪ ಕುರಿ 11 ಎಕರೆಯಲ್ಲಿ ಖರ್ಚುವೆಚ್ಚ ತೆಗೆದು ಎರಡು ತಿಂಗಳಲ್ಲಿ ಬರೊಬ್ಬರಿ 10 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಒಂದು ತಿಂಗಳ ಹಿಂದೆ ಕಡಿಮೆ ಬೆಲೆ ಇದ್ದಾಗ ಪಡೆದದ್ದು 11 ಎಕರೆಯಲ್ಲಿ ಬೆಳೆದ ಟೊಮ್ಯಾಟೊ 4 ಲಕ್ಷ ರೂ. ಲಾಭ ಬಂದಿತ್ತು. ಇದೀಗ ಬೆಲೆ ಏರಿಕೆಯಾದ ಹಿನ್ನೆಲೆ ಬಂಪರ್ ಲಾಭ ಬಂದಿದೆ. ಕಳೆದ ವರ್ಷ 18 ಎಕರೆಯಲ್ಲಿ 1 ಕೋಟಿ 10 ಲಕ್ಷ ಲಾಭ ಬಂದಿತ್ತು.

20 ಗುಂಟೆ ಜಮೀನಿನಲ್ಲಿ 11 ಲಕ್ಷ ರೂ. ಸಂಪಾದಿಸಿದ ಯುವ ರೈತ

ಬೆಳಗಾವಿ: ಕೇವಲ 20 ಗುಂಟೆ ಜಮೀನಿನಲ್ಲಿ ಟೊಮೆಟೊ ಬೆಳೆದು ಯುವ ರೈತ ಲಕ್ಷ ಲಕ್ಷ ಹಣ ಸಂಪಾದಿಸಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಿ.ಎ. ಪದವೀಧರ ಆಗಿರುವ ಮಹೇಶ್ ಹಿರೇಮಠ ಎನ್ನುವರು ಕೇವಲ 20 ಗುಂಟೆಯಲ್ಲಿ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮೆಟೊ ಬೆಳೆದು ಲಕ್ಷಾಂತರ ರೂಪಾಯಿ ಲಾಭ ಗಳಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಮಹೇಶ್ ಹಿರೇಮಠ ಬಿ.ಎ. ಪದವೀಧರ. ಇವರು ಕಳೆದ ನಾಲ್ಕು ವರ್ಷಗಳಿಂದ ಪಿತ್ರಾರ್ಜಿತವಾಗಿ ಬಂದಿರುವ ಜಮೀನಿನಲ್ಲಿ ಕೃಷಿ ಕಾಯಕ ಮಾಡುತ್ತಾ ಬಂದಿದ್ದಾರೆ. ನಾಲ್ಕು ಎಕರೆ ಜಮೀನು ಹೊಂದಿರುವ ಇವರು ಎರಡು ಎಕರೆಯಲ್ಲಿ ಕಬ್ಬು‌ ಬೆಳೆದಿದ್ರೆ ಇನ್ನೆರಡು ಎಕರೆಯಲ್ಲಿ ತರಕಾರಿ ಬೆಳೆದಿದ್ದಾರೆ. ಅದರಲ್ಲಿ ಕೇವಲ 20 ಗುಂಟೆಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ಟೊಮೆಟೊ ಬೆಳೆದಿದ್ದಾರೆ.

ವೈಜ್ಞಾನಿಕ ಕೃಷಿ ಹಾಗೂ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು 20 ಗುಂಟೆ ಜಮೀನಿನಲ್ಲಿ 3700 ಟೊಮೆಟೊ ಸಸಿ ನಾಟಿ ಮಾಡಿದ್ದರು. ಕಳೆದ 45 ದಿನಗಳಿಂದ ಟೊಮೆಟೊ ಕೋಯ್ಲು ಆರಂಭಿಸುತ್ತಿದ್ದಂತೆ ಈ ಕೆಂಪು ಸುಂದರಿಗೆ ಬಂಗಾರದ ಬೆಲೆ ಬಂದಿದೆ.

20 ಗುಂಟೆಯಲ್ಲಿ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮೆಟೊ ಇಳುವರಿ ತಗೆದಿದ್ದಾನೆ. ಕೋಯ್ಲು ಮಾಡಿದ ಟೊಮೆಟೊವನ್ನು ಸಂಕೇಶ್ವರ ಪಟ್ಟಣದಲ್ಲಿರುವ ಎಪಿಎಂಸಿ ವರ್ತಕನೋರ್ವನಿಗೆ ರೆಗ್ಯುಲರ್ ಆಗಿ ಸರಬರಾಜು ಮಾಡಲು ಶುರು ಮಾಡಿದ್ದಾರೆ. ದಿನಕ್ಕೆ 20 ಕೆಜಿ ತೂಕದ ನೂರು ನೂರಿಪ್ಪತ್ತು ಕ್ಯಾರಿಬ್ಯಾಗ್ ಸರಬರಾಜು ಮಾಡುತ್ತ ಈವರೆಗೂ 11 ಲಕ್ಷ ರೂಪಾಯಿ ಆದಾಯ ಬಂದಿದೆ. ಟೊಮೆಟೊ ಬೆಳೆದು ಕಟಾವು ಸಾಗಾಟ ವೆಚ್ಚಕ್ಕೆ ಅಂತಾ ಎರಡು ಲಕ್ಷ ರೂಪಾಯಿ ಖರ್ಚಾಗಿದ್ದು ಬರೋಬ್ಬರಿ ಒಂಬತ್ತು ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ