AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಹಿಡಿದ ಟೊಮ್ಯಾಟೊ : 11 ಎಕರೆಯಲ್ಲಿ 10 ಲಕ್ಷ ರೂ. ಸಂಪಾದಿಸಿದ ರೈತ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟೊಮ್ಯಾಟೊ ಅಧಿಕ ಬೆಲೆಗೆ ಮಾರಾಟವಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿಯ ರೈತ ಶಿವಪ್ಪ ಕುರಿ 11 ಎಕರೆಯಲ್ಲಿ ಖರ್ಚುವೆಚ್ಚ ತೆಗೆದು ಎರಡು ತಿಂಗಳಲ್ಲಿ ಬರೊಬ್ಬರಿ 10 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಕೈ ಹಿಡಿದ ಟೊಮ್ಯಾಟೊ : 11 ಎಕರೆಯಲ್ಲಿ 10 ಲಕ್ಷ ರೂ. ಸಂಪಾದಿಸಿದ ರೈತ
ರೈತ ಶಿವಪ್ಪ ಕುರಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 15, 2023 | 6:46 PM

Share

ಬಾಗಲಕೋಟೆ: ಟೊಮ್ಯಾಟೊ (Tomato) ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಗ್ರಾಹಕರು ಟೊಮ್ಯಾಟೊ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ರೈತರು (Farmer) ಮಾತ್ರ ಬಂಪರ್ ಲಾಭ ಪಡೆಯುತ್ತಿದ್ದಾರೆ. ಹೌದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟೊಮ್ಯಾಟೊ ಅಧಿಕ ಬೆಲೆಗೆ ಮಾರಾಟವಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿಯ ರೈತ ಶಿವಪ್ಪ ಕುರಿ 11 ಎಕರೆಯಲ್ಲಿ ಖರ್ಚುವೆಚ್ಚ ತೆಗೆದು ಎರಡು ತಿಂಗಳಲ್ಲಿ ಬರೊಬ್ಬರಿ 10 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಒಂದು ತಿಂಗಳ ಹಿಂದೆ ಕಡಿಮೆ ಬೆಲೆ ಇದ್ದಾಗ ಪಡೆದದ್ದು 11 ಎಕರೆಯಲ್ಲಿ ಬೆಳೆದ ಟೊಮ್ಯಾಟೊ 4 ಲಕ್ಷ ರೂ. ಲಾಭ ಬಂದಿತ್ತು. ಇದೀಗ ಬೆಲೆ ಏರಿಕೆಯಾದ ಹಿನ್ನೆಲೆ ಬಂಪರ್ ಲಾಭ ಬಂದಿದೆ. ಕಳೆದ ವರ್ಷ 18 ಎಕರೆಯಲ್ಲಿ 1 ಕೋಟಿ 10 ಲಕ್ಷ ಲಾಭ ಬಂದಿತ್ತು.

20 ಗುಂಟೆ ಜಮೀನಿನಲ್ಲಿ 11 ಲಕ್ಷ ರೂ. ಸಂಪಾದಿಸಿದ ಯುವ ರೈತ

ಬೆಳಗಾವಿ: ಕೇವಲ 20 ಗುಂಟೆ ಜಮೀನಿನಲ್ಲಿ ಟೊಮೆಟೊ ಬೆಳೆದು ಯುವ ರೈತ ಲಕ್ಷ ಲಕ್ಷ ಹಣ ಸಂಪಾದಿಸಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಿ.ಎ. ಪದವೀಧರ ಆಗಿರುವ ಮಹೇಶ್ ಹಿರೇಮಠ ಎನ್ನುವರು ಕೇವಲ 20 ಗುಂಟೆಯಲ್ಲಿ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮೆಟೊ ಬೆಳೆದು ಲಕ್ಷಾಂತರ ರೂಪಾಯಿ ಲಾಭ ಗಳಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಮಹೇಶ್ ಹಿರೇಮಠ ಬಿ.ಎ. ಪದವೀಧರ. ಇವರು ಕಳೆದ ನಾಲ್ಕು ವರ್ಷಗಳಿಂದ ಪಿತ್ರಾರ್ಜಿತವಾಗಿ ಬಂದಿರುವ ಜಮೀನಿನಲ್ಲಿ ಕೃಷಿ ಕಾಯಕ ಮಾಡುತ್ತಾ ಬಂದಿದ್ದಾರೆ. ನಾಲ್ಕು ಎಕರೆ ಜಮೀನು ಹೊಂದಿರುವ ಇವರು ಎರಡು ಎಕರೆಯಲ್ಲಿ ಕಬ್ಬು‌ ಬೆಳೆದಿದ್ರೆ ಇನ್ನೆರಡು ಎಕರೆಯಲ್ಲಿ ತರಕಾರಿ ಬೆಳೆದಿದ್ದಾರೆ. ಅದರಲ್ಲಿ ಕೇವಲ 20 ಗುಂಟೆಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ಟೊಮೆಟೊ ಬೆಳೆದಿದ್ದಾರೆ.

ವೈಜ್ಞಾನಿಕ ಕೃಷಿ ಹಾಗೂ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು 20 ಗುಂಟೆ ಜಮೀನಿನಲ್ಲಿ 3700 ಟೊಮೆಟೊ ಸಸಿ ನಾಟಿ ಮಾಡಿದ್ದರು. ಕಳೆದ 45 ದಿನಗಳಿಂದ ಟೊಮೆಟೊ ಕೋಯ್ಲು ಆರಂಭಿಸುತ್ತಿದ್ದಂತೆ ಈ ಕೆಂಪು ಸುಂದರಿಗೆ ಬಂಗಾರದ ಬೆಲೆ ಬಂದಿದೆ.

20 ಗುಂಟೆಯಲ್ಲಿ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮೆಟೊ ಇಳುವರಿ ತಗೆದಿದ್ದಾನೆ. ಕೋಯ್ಲು ಮಾಡಿದ ಟೊಮೆಟೊವನ್ನು ಸಂಕೇಶ್ವರ ಪಟ್ಟಣದಲ್ಲಿರುವ ಎಪಿಎಂಸಿ ವರ್ತಕನೋರ್ವನಿಗೆ ರೆಗ್ಯುಲರ್ ಆಗಿ ಸರಬರಾಜು ಮಾಡಲು ಶುರು ಮಾಡಿದ್ದಾರೆ. ದಿನಕ್ಕೆ 20 ಕೆಜಿ ತೂಕದ ನೂರು ನೂರಿಪ್ಪತ್ತು ಕ್ಯಾರಿಬ್ಯಾಗ್ ಸರಬರಾಜು ಮಾಡುತ್ತ ಈವರೆಗೂ 11 ಲಕ್ಷ ರೂಪಾಯಿ ಆದಾಯ ಬಂದಿದೆ. ಟೊಮೆಟೊ ಬೆಳೆದು ಕಟಾವು ಸಾಗಾಟ ವೆಚ್ಚಕ್ಕೆ ಅಂತಾ ಎರಡು ಲಕ್ಷ ರೂಪಾಯಿ ಖರ್ಚಾಗಿದ್ದು ಬರೋಬ್ಬರಿ ಒಂಬತ್ತು ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?