Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಹಿಡಿದ ಟೊಮ್ಯಾಟೊ : 11 ಎಕರೆಯಲ್ಲಿ 10 ಲಕ್ಷ ರೂ. ಸಂಪಾದಿಸಿದ ರೈತ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟೊಮ್ಯಾಟೊ ಅಧಿಕ ಬೆಲೆಗೆ ಮಾರಾಟವಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿಯ ರೈತ ಶಿವಪ್ಪ ಕುರಿ 11 ಎಕರೆಯಲ್ಲಿ ಖರ್ಚುವೆಚ್ಚ ತೆಗೆದು ಎರಡು ತಿಂಗಳಲ್ಲಿ ಬರೊಬ್ಬರಿ 10 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಕೈ ಹಿಡಿದ ಟೊಮ್ಯಾಟೊ : 11 ಎಕರೆಯಲ್ಲಿ 10 ಲಕ್ಷ ರೂ. ಸಂಪಾದಿಸಿದ ರೈತ
ರೈತ ಶಿವಪ್ಪ ಕುರಿ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Jul 15, 2023 | 6:46 PM

ಬಾಗಲಕೋಟೆ: ಟೊಮ್ಯಾಟೊ (Tomato) ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದ ಗ್ರಾಹಕರು ಟೊಮ್ಯಾಟೊ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ರೈತರು (Farmer) ಮಾತ್ರ ಬಂಪರ್ ಲಾಭ ಪಡೆಯುತ್ತಿದ್ದಾರೆ. ಹೌದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟೊಮ್ಯಾಟೊ ಅಧಿಕ ಬೆಲೆಗೆ ಮಾರಾಟವಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿಯ ರೈತ ಶಿವಪ್ಪ ಕುರಿ 11 ಎಕರೆಯಲ್ಲಿ ಖರ್ಚುವೆಚ್ಚ ತೆಗೆದು ಎರಡು ತಿಂಗಳಲ್ಲಿ ಬರೊಬ್ಬರಿ 10 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಒಂದು ತಿಂಗಳ ಹಿಂದೆ ಕಡಿಮೆ ಬೆಲೆ ಇದ್ದಾಗ ಪಡೆದದ್ದು 11 ಎಕರೆಯಲ್ಲಿ ಬೆಳೆದ ಟೊಮ್ಯಾಟೊ 4 ಲಕ್ಷ ರೂ. ಲಾಭ ಬಂದಿತ್ತು. ಇದೀಗ ಬೆಲೆ ಏರಿಕೆಯಾದ ಹಿನ್ನೆಲೆ ಬಂಪರ್ ಲಾಭ ಬಂದಿದೆ. ಕಳೆದ ವರ್ಷ 18 ಎಕರೆಯಲ್ಲಿ 1 ಕೋಟಿ 10 ಲಕ್ಷ ಲಾಭ ಬಂದಿತ್ತು.

20 ಗುಂಟೆ ಜಮೀನಿನಲ್ಲಿ 11 ಲಕ್ಷ ರೂ. ಸಂಪಾದಿಸಿದ ಯುವ ರೈತ

ಬೆಳಗಾವಿ: ಕೇವಲ 20 ಗುಂಟೆ ಜಮೀನಿನಲ್ಲಿ ಟೊಮೆಟೊ ಬೆಳೆದು ಯುವ ರೈತ ಲಕ್ಷ ಲಕ್ಷ ಹಣ ಸಂಪಾದಿಸಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಿ.ಎ. ಪದವೀಧರ ಆಗಿರುವ ಮಹೇಶ್ ಹಿರೇಮಠ ಎನ್ನುವರು ಕೇವಲ 20 ಗುಂಟೆಯಲ್ಲಿ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮೆಟೊ ಬೆಳೆದು ಲಕ್ಷಾಂತರ ರೂಪಾಯಿ ಲಾಭ ಗಳಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಮಹೇಶ್ ಹಿರೇಮಠ ಬಿ.ಎ. ಪದವೀಧರ. ಇವರು ಕಳೆದ ನಾಲ್ಕು ವರ್ಷಗಳಿಂದ ಪಿತ್ರಾರ್ಜಿತವಾಗಿ ಬಂದಿರುವ ಜಮೀನಿನಲ್ಲಿ ಕೃಷಿ ಕಾಯಕ ಮಾಡುತ್ತಾ ಬಂದಿದ್ದಾರೆ. ನಾಲ್ಕು ಎಕರೆ ಜಮೀನು ಹೊಂದಿರುವ ಇವರು ಎರಡು ಎಕರೆಯಲ್ಲಿ ಕಬ್ಬು‌ ಬೆಳೆದಿದ್ರೆ ಇನ್ನೆರಡು ಎಕರೆಯಲ್ಲಿ ತರಕಾರಿ ಬೆಳೆದಿದ್ದಾರೆ. ಅದರಲ್ಲಿ ಕೇವಲ 20 ಗುಂಟೆಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ಟೊಮೆಟೊ ಬೆಳೆದಿದ್ದಾರೆ.

ವೈಜ್ಞಾನಿಕ ಕೃಷಿ ಹಾಗೂ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು 20 ಗುಂಟೆ ಜಮೀನಿನಲ್ಲಿ 3700 ಟೊಮೆಟೊ ಸಸಿ ನಾಟಿ ಮಾಡಿದ್ದರು. ಕಳೆದ 45 ದಿನಗಳಿಂದ ಟೊಮೆಟೊ ಕೋಯ್ಲು ಆರಂಭಿಸುತ್ತಿದ್ದಂತೆ ಈ ಕೆಂಪು ಸುಂದರಿಗೆ ಬಂಗಾರದ ಬೆಲೆ ಬಂದಿದೆ.

20 ಗುಂಟೆಯಲ್ಲಿ 45 ದಿನಗಳಲ್ಲಿ 20 ಟನ್ 400 ಕೆಜಿಯಷ್ಟು ಟೊಮೆಟೊ ಇಳುವರಿ ತಗೆದಿದ್ದಾನೆ. ಕೋಯ್ಲು ಮಾಡಿದ ಟೊಮೆಟೊವನ್ನು ಸಂಕೇಶ್ವರ ಪಟ್ಟಣದಲ್ಲಿರುವ ಎಪಿಎಂಸಿ ವರ್ತಕನೋರ್ವನಿಗೆ ರೆಗ್ಯುಲರ್ ಆಗಿ ಸರಬರಾಜು ಮಾಡಲು ಶುರು ಮಾಡಿದ್ದಾರೆ. ದಿನಕ್ಕೆ 20 ಕೆಜಿ ತೂಕದ ನೂರು ನೂರಿಪ್ಪತ್ತು ಕ್ಯಾರಿಬ್ಯಾಗ್ ಸರಬರಾಜು ಮಾಡುತ್ತ ಈವರೆಗೂ 11 ಲಕ್ಷ ರೂಪಾಯಿ ಆದಾಯ ಬಂದಿದೆ. ಟೊಮೆಟೊ ಬೆಳೆದು ಕಟಾವು ಸಾಗಾಟ ವೆಚ್ಚಕ್ಕೆ ಅಂತಾ ಎರಡು ಲಕ್ಷ ರೂಪಾಯಿ ಖರ್ಚಾಗಿದ್ದು ಬರೋಬ್ಬರಿ ಒಂಬತ್ತು ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ‌.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ