AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಎಕರೆ ಜಮೀನಿಗೆ 30 ಲಕ್ಷ ರೂ ಸಾಲ ಮಾಡಿಕೊಂಡಿದ್ದ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ತಾಲ್ಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಈಶ್ವರಪ್ಪ ಜಕ್ಕನ್ನವರ (55) ಮೃತ ರೈತ.

3 ಎಕರೆ ಜಮೀನಿಗೆ 30 ಲಕ್ಷ ರೂ ಸಾಲ ಮಾಡಿಕೊಂಡಿದ್ದ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Nov 30, 2021 | 10:06 AM

Share

ಬಾಗಲಕೋಟೆ: ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ತಾಲ್ಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಈಶ್ವರಪ್ಪ ಜಕ್ಕನ್ನವರ (55) ಮೃತ ರೈತ. ಈಶ್ವರಪ್ಪ ಜಕ್ಕನ್ನವರ ಬ್ಯಾಂಕ್ ಆಫ್​ ಇಂಡಿಯಾ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸೇರಿದಂತೆ ವಿವಿಧ ಸಹಕಾರಿ ಬ್ಯಾಂಕ್ ಮೂಲಕ ಒಟ್ಟು 30 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ರೈತ ಈಶ್ವರಪ್ಪ ಜಕ್ಕನ್ನವರ 3 ಎಕರೆ 27 ಗುಂಟೆ ಭೂಮಿ ಹೊಂದಿದ್ದ. ಹೊಲದಲ್ಲಿ ಬೆಳೆದಿದ್ದ ದಾಳಿಂಬೆ ಬೆಳೆ ಲಾಭ ತಂದಿರಲಿಲ್ಲ. ಹಾಗಾಗಿ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತ್ನಿ ಮಕ್ಕಳ ಜೊತೆ ಮದುವೆಯಿಂದ ಬರುವಾಗ ಪಲ್ಟಿಯಾಗಿದ್ದ ಆಟೋಗೆ ಬೈಕ್ ಡಿಕ್ಕಿ, ಸವಾರ ಸಾವು: ಮೈಸೂರು -ಪಲ್ಟಿಯಾಗಿದ್ದ ಆಪೇ ಆಟೋಗೆ ಬೈಕ್ ಡಿಕ್ಕಿ ಹೊಡೆದು, ಬೈಕ್ ಸವಾರ ಸಾವಿಗೀಡಾಗದ್ದಾನೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹೊಸ ಅಗ್ರಹಾರದ ಬಳಿ ಅಪಘಾತ ನಡೆದಿದೆ. ಬೆಕ್ಯಾ ಗ್ರಾಮದ ನಿವಾಸಿ ಸತೀಶ್ (35) ಮೃತ ದುರ್ದೈವಿ. ಪತ್ನಿ ಮಕ್ಕಳ ಜೊತೆ ಮದುವೆ ಕಾರ್ಯಕ್ರಮ ಮುಗಿಸಿ ಹೋಗುವಾಗ ಅಪಘಾತ ಸಂಭವಿಸಿದೆ. ಪತ್ನಿ ಪಾರ್ವತಿ ಮತ್ತು ಮಗಳು ಖುಷಿ ಮಗ ಜೀವನ್‌ಗೆ ಗಂಭೀರ ಗಾಯಗಳಾಗಿವೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

missing person

ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಅರಣ್ಯಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮಕ್ಕೆ ಹೋಗಿದ್ದ ಬಾಳೂರು ಗ್ರಾಮದ ನಾಗೇಶ್ ಆಚಾರ್ (46) ಕಣ್ಮರೆಯಾಗಿದ್ದಾರೆ. ನಾಲ್ಕು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ನಾಗೇಶ್ ಅವರು ಕೃಷ್ಣೇಗೌಡ ಎಂಬುವರ ಜೊತೆ ಜೀಪ್ ನಲ್ಲಿ ಹೋಗಿದ್ದರು. ಕಣ್ಮರೆಯಾಗುವ ವ್ಯಕ್ತಿಗಾಗಿ ಚಾರ್ಮಾಡಿ ಘಾಟ್ ನಲ್ಲಿ ಸ್ಥಳೀಯರಿಂದ ಹುಡುಕಾಟ ನಡೆದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:40 am, Tue, 30 November 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು