AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲರ್ಟ್​ ಆದ ಬಾಗಲಕೋಟೆ ಆರೋಗ್ಯ ಇಲಾಖೆ: ನಿಫಾ ವೈರಸ್​​ ಬಗ್ಗೆ ಜನರಲ್ಲಿ ಜಾಗೃತಿ

ಮೂರು ವರ್ಷಗಳ ಕಾಲ ಕೋವಿಡ್​​ ಮಹಾಮಾರಿ ಜನರ ಜೀವ ಹಿಂಡಿದೆ. ಈ ವರ್ಷ ಮದ್ರಾಸ್ ಐ ಕೂಡ ಜನರಿಗೆ ಇನ್ನಿಲ್ಲದ ಕಿರಿಕಿ ಉಂಟು ‌ಮಾಡಿದೆ. ಆದರೆ ಇದೀಗ ನಿಫಾ ಪರ ರಾಜ್ಯದಲ್ಲಿ ಜೀವ ಬಲಿ ಪಡೆದಿದ್ದು, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಅದೇ ರೀತಿಯಾಗಿ ಬಾಗಲಕೋಟೆ ಜಿಲ್ಲೆಯಲ್ಲೂ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಮುಂಜಾಗ್ರತ ಕ್ರಮ ಕೈಗೊಂಡಿದೆ.

ಅಲರ್ಟ್​ ಆದ ಬಾಗಲಕೋಟೆ ಆರೋಗ್ಯ ಇಲಾಖೆ: ನಿಫಾ ವೈರಸ್​​ ಬಗ್ಗೆ ಜನರಲ್ಲಿ ಜಾಗೃತಿ
ಪ್ರಾತಿನಿಧಿಕ ಚಿತ್ರ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 15, 2023 | 10:59 PM

ಬಾಗಲಕೋಟೆ, ಸೆಪ್ಟೆಂಬರ್​ 15: ಇಷ್ಟು ದಿನ ಜನರ ಜೀವ ಜೊತೆ ಚೆಲ್ಲಾಟವಾಡಿದ ಕೋವಿಡ್​​ನಿಂದ ಇದೀಗ ಜನರು ಸುಧಾರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ನಿಫಾ (Nipah virus) ಜನರ ಜೀವ ಭೇಟೆಯಾಡಲು ಬರುತ್ತಿದೆ. ಕೇರಳದಲ್ಲಿ ತನ್ನ ಪ್ರಭಾವ ಬೀರಿರುವ ನಿಫಾ ಇದೀಗ ರಾಜ್ಯಕ್ಕೆ ವಕ್ಕರಿಸುತ್ತಿದೆ. ಹಾಗಾಗಿ ಬಾಗಲಕೋಟೆ ಜಿಲ್ಲೆಯಲ್ಲೂ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆಯ ಒಂದು ವಾರ್ಡ್, ಐಸೊಲೇಶನ್ ವಾರ್ಡ್, ನಾಲ್ಕು ಐಸಿಯು ಬೆಡ್, ವಿತ್ ವೆಂಟಿಲೇಟರ್ ಎಲ್ಲವನ್ನೂ ಸಿದ್ದಪಡಿಸಲಾಗಿದೆ. ಜೊತೆಗೆ ಇದರ ಲಕ್ಷಣಗಳು ಉಸಿರಾಟ ತೊಂದರೆ, ಕೆಮ್ಮು, ಜ್ವತ, ಅರೆಪ್ರಜ್ಞಾವಸ್ಥೆ, ವಾಂತಿ, ಮೈಕೈ-ನೋವು ಕಾಣಿಸಿಕೊಳ್ಳಲಿದ್ದು, ಇಂತಹ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕೆಂದು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ನಿಫಾ ಬಗ್ಗೆ ಅಷ್ಟು ಸರಳವಾಗಿ ತೆಗೆದುಕೊಳ್ಳುವಂತಿಲ್ಲ. ಯಾಕೆಂದರೆ ಬಾಗಲಕೋಟೆ ಜಿಲ್ಲೆಯಿಂದ ಉಡುಪಿ, ಮಂಗಳೂರಿಗೆ ದುಡಿಯೋದಕ್ಕೆ ಹೋಗುವ ಜನರು ಸಾಕಷ್ಟಿದ್ದಾರೆ. ದುಡಿಯೋದಕ್ಕೆ ಕಾರ್ಮಿಕರು ಹೋಗೋದು ಬರೋದು ಹೆಚ್ಚಿರುವುದರಿಂದ ಸ್ಥಳೀಯ ಮಟ್ಟದಲ್ಲೂ ಸ್ಕ್ರೀನಿಂಗ್ ಮಾಡೋದಕ್ಕೆ‌ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Drought: ಬೆಳಗಾವಿ -ಬಾಗಲಕೋಟೆ ಜಿಲ್ಲೆಗಳಲ್ಲಿ ಬರದ ನರಕ ದರ್ಶ‌ನ, ಕೃಷಿ ಭೂಮಿಗಳು ಒಣಒಣ ಭಣಭಣ, ಇಲ್ಲಿದೆ ಸಂಪೂರ್ಣ ವರದಿ

ಕೇರಳ,ಮಂಗಳೂರು,ಉಡುಪಿಯಿಂದ ಬರುವವರಿಗೆ ತಪಾಸಣೆ. ಲಕ್ಷಣ ಕಂಡುಬಂದಲ್ಲಿ ಹೋಮ್‌ ಐಸೊಲೇಶನ್ ಮಾಡೋದಕ್ಕೆ ಮುಂದಾಗಿದ್ದಾರೆ. ಪ್ರವಾಸಿ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು ಪ್ರವಾಸಿ ತಾಣದಲ್ಲಿ ಬಾವಲಿಗಳಿದ್ದು, ಅಲ್ಲೂ ವಿಶೇಷ ನಿಗಾ ವಹಿಸಲಾಗಿದೆ. ಹಂದಿ ಸಾಕಾಣಿಕೆಯನ್ನು ಮೂರು ಕಿಮೀ ಊರಿಂದ ಹೊರಗೆ ಮಾಡಲು ಸೂಚನೆ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಪ್ರತಿ ತಾಲ್ಲೂಕಾಸ್ಪತ್ರೆಯಲ್ಲಿ ಐದು ಬೆಡ್, ವೆಂಟಿಲೇಟರ್, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎರಡು ಬೆಡ್ ಮೀಸಲಿಡಲಾಗಿದೆ. ಐಸಿಯು,ಇಸಿಜಿ ಆ್ಯಂಟಿ ಬಯೊಟಿಕ್ ಮೆಡಿಸಿನ್ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜೊತೆಗೆ ಡೆಂಗ್ಯೂ ರಥದ ಮೂಲಕ ನಿಫಾ ಬಗ್ಗೆಯೂ ಜಾಗೃತಿ ಮೂಡಿಸುತ್ತೇವೆ. ಆರೋಗ್ಯ ಇಲಾಖೆ ಎಲ್ಲ ಅಧಿಕಾರಿಗಳಿಗೂ ಸಿಬ್ಬಂದಿಗೂ ಈ ಆಪರೇಷನ್ ಬಗ್ಗೆ ತರಬೇತಿ ನೀಡುತ್ತಿದ್ದೇವೆ ಅಂತಿದ್ದಾರೆ ಆರೋಗ್ಯಾಧಿಕಾರಿಗಳು.

ಇದನ್ನೂ ಓದಿ: ಹಕ್ಕು ಪತ್ರ ನೀಡಲು ವಿಳಂಬ ಧೋರಣೆ, ಮೂಲ‌ ಮನೆ‌ ಬಿಟ್ಟು ಬಾರದ ಸಂತ್ರಸ್ತರು: ಸರ್ಕಾರಿ ಹಣ ನೀರಲ್ಲಿ ಹೋಮ

ನಿಫಾ ಜಿಲ್ಲೆಗೆ ವಕ್ಕರಿಸುವ ಮೊದಲೇ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು, ಮುಂಜಾಗ್ರತಾ ಕ್ರಮ ಭರದಿಂದ ಸಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ