AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​​ನಿಂದ ಮೃತಪಟ್ಟ ಪತಿ: ಶವ ಮನೆಯೊಳಗೆ ತರಲು ಬಿಡದ ಪತ್ನಿ, ವಿದ್ಯುತ್ ಕಂಬಕ್ಕೆ ಆಧಾರವಾಗಿಸಿ ಮೃತದೇಹ ಕೂರಿಸಿದ ಸ್ಥಳೀಯರು

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಕ್ಯಾನ್ಸರ್​ನಿಂದ ಮೃತಪಟ್ಟ ಪತಿಯ ಶವವನ್ನು ಪತ್ನಿ ಮನೆಯೊಳಗೆ ತರಲು ಬಿಡಲಿಲ್ಲ. ಆಗ, ಸ್ಥಳಿಯರು ಶವವನ್ನು ಮನೆಯ ಎದುರಿನ ವಿದ್ಯುತ್​ ಕಂಬಕ್ಕೆ ಆಧಾರವಾಗಿಸಿ ಕೂರಿಸಿದರು.

ಕ್ಯಾನ್ಸರ್​​ನಿಂದ ಮೃತಪಟ್ಟ ಪತಿ: ಶವ ಮನೆಯೊಳಗೆ ತರಲು ಬಿಡದ ಪತ್ನಿ, ವಿದ್ಯುತ್ ಕಂಬಕ್ಕೆ ಆಧಾರವಾಗಿಸಿ ಮೃತದೇಹ ಕೂರಿಸಿದ ಸ್ಥಳೀಯರು
ಮೃತ ಗುರು ಕಿತ್ತೂರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jun 12, 2024 | 2:04 PM

Share

ಬಾಗಲಕೋಟೆ, ಜೂನ್​ 12: ಬನಹಟ್ಟಿ (Rabkavi Banhatti) ನಗರದ ಸೋಮವಾರಪೇಟೆಯ ಗುರು ಕಿತ್ತೂರ (51) ಎಂಬುವರು ಕ್ಯಾನ್ಸರ್​ನಿಂದ (Cancer) ಮೃತಪಟ್ಟಿದ್ದಾರೆ. ಕ್ಯಾನ್ಸರ್​ಗೆ ಹೆದರಿ ಪತಿಯ ಶವವನ್ನು ಪತ್ನಿ ಹಾಗೂ ಪತ್ನಿಯ ಕುಟುಂಬಸ್ಥರು ಮನೆಯೊಳಗೆ ತರಲು ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಬಳಿಕ ಸ್ಥಳೀಯರು ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂರಿಸಿದ್ದಾರೆ.

ಗುರು ಕಿತ್ತೂರು ಕಳೆದೆರಡು ತಿಂಗಳಿಂದ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಕ್ಯಾನ್ಸರ್​ನಿಂದ ಜಿಗುಪ್ಸೆಗೊಂಡು ಗುರು ಕಿತ್ತೂರು ಇತ್ತೀಚಿಗೆ ಮನೆ ತೊರೆದಿದ್ದರು. ಮಂಗಳವಾರ (ಜೂನ್​ 11) ರಂದು ಬನಹಟ್ಟಿ ನಗರದ ವೈಭವ ಚಿತ್ರಮಂದಿರ ಬಳಿಯ ರಸ್ತೆ ಪಕ್ಕ ಮೃತಪಟ್ಟರು. ನಂತರ ಸ್ಥಳೀಯರು ಶವವನ್ನು ಮನೆಗೆ ತಂದಾಗ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಮನೆಯೊಳಗೆ ಶವ ಕೂಡಿಸಬೇಡಿ ಅಂತ ಅಮಾನವೀಯವಾಗಿ ವರ್ತಸಿದರು.‌

ಇದನ್ನೂ ಓದಿ: ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು, ಇಳಕಲ್​​ನಲ್ಲೊಂದು ಅಚ್ಚರಿ! ಆದರೆ ವೈದ್ಯರು ಹೇಳೋದೇ ಬೇರೆ

ಆಗ ಅಕ್ಕ-ಪಕ್ಕದ ಜನ ಅನಿವಾರ್ಯವಾಗಿ ಮನೆ ಮುಂದಿರುವ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂಡಿಸಿದರು. ಇದನ್ನು ಗಮನಿಸಿದ ಸೋಮವಾರ ಪೇಟೆ ಸಮಸ್ತ ದೈವ ಮಂಡಳಿ, ಗುರು ಕಿತ್ತೂರು ಅವರ ಪತ್ನಿ ಹಾಗೂ ಆಕೆಯ ಮನೆಯವರಿಗೆ ತಿಳುವಳಿಕೆ ಹೇಳಿದರು. ನಂತರ ಶವವನ್ನು ಮನೆಯಲ್ಲಿ ಕೂಡಿಸಲು ಅನುಮತಿ ನೀಡಿದರು. ಬಳಿಕ ಅಂತ್ಯಸಂಸ್ಕಾರ ನೆರವೇರಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?