ಕ್ಯಾನ್ಸರ್​​ನಿಂದ ಮೃತಪಟ್ಟ ಪತಿ: ಶವ ಮನೆಯೊಳಗೆ ತರಲು ಬಿಡದ ಪತ್ನಿ, ವಿದ್ಯುತ್ ಕಂಬಕ್ಕೆ ಆಧಾರವಾಗಿಸಿ ಮೃತದೇಹ ಕೂರಿಸಿದ ಸ್ಥಳೀಯರು

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಕ್ಯಾನ್ಸರ್​ನಿಂದ ಮೃತಪಟ್ಟ ಪತಿಯ ಶವವನ್ನು ಪತ್ನಿ ಮನೆಯೊಳಗೆ ತರಲು ಬಿಡಲಿಲ್ಲ. ಆಗ, ಸ್ಥಳಿಯರು ಶವವನ್ನು ಮನೆಯ ಎದುರಿನ ವಿದ್ಯುತ್​ ಕಂಬಕ್ಕೆ ಆಧಾರವಾಗಿಸಿ ಕೂರಿಸಿದರು.

ಕ್ಯಾನ್ಸರ್​​ನಿಂದ ಮೃತಪಟ್ಟ ಪತಿ: ಶವ ಮನೆಯೊಳಗೆ ತರಲು ಬಿಡದ ಪತ್ನಿ, ವಿದ್ಯುತ್ ಕಂಬಕ್ಕೆ ಆಧಾರವಾಗಿಸಿ ಮೃತದೇಹ ಕೂರಿಸಿದ ಸ್ಥಳೀಯರು
ಮೃತ ಗುರು ಕಿತ್ತೂರು
Follow us
| Updated By: ವಿವೇಕ ಬಿರಾದಾರ

Updated on: Jun 12, 2024 | 2:04 PM

ಬಾಗಲಕೋಟೆ, ಜೂನ್​ 12: ಬನಹಟ್ಟಿ (Rabkavi Banhatti) ನಗರದ ಸೋಮವಾರಪೇಟೆಯ ಗುರು ಕಿತ್ತೂರ (51) ಎಂಬುವರು ಕ್ಯಾನ್ಸರ್​ನಿಂದ (Cancer) ಮೃತಪಟ್ಟಿದ್ದಾರೆ. ಕ್ಯಾನ್ಸರ್​ಗೆ ಹೆದರಿ ಪತಿಯ ಶವವನ್ನು ಪತ್ನಿ ಹಾಗೂ ಪತ್ನಿಯ ಕುಟುಂಬಸ್ಥರು ಮನೆಯೊಳಗೆ ತರಲು ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಬಳಿಕ ಸ್ಥಳೀಯರು ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂರಿಸಿದ್ದಾರೆ.

ಗುರು ಕಿತ್ತೂರು ಕಳೆದೆರಡು ತಿಂಗಳಿಂದ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಕ್ಯಾನ್ಸರ್​ನಿಂದ ಜಿಗುಪ್ಸೆಗೊಂಡು ಗುರು ಕಿತ್ತೂರು ಇತ್ತೀಚಿಗೆ ಮನೆ ತೊರೆದಿದ್ದರು. ಮಂಗಳವಾರ (ಜೂನ್​ 11) ರಂದು ಬನಹಟ್ಟಿ ನಗರದ ವೈಭವ ಚಿತ್ರಮಂದಿರ ಬಳಿಯ ರಸ್ತೆ ಪಕ್ಕ ಮೃತಪಟ್ಟರು. ನಂತರ ಸ್ಥಳೀಯರು ಶವವನ್ನು ಮನೆಗೆ ತಂದಾಗ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಮನೆಯೊಳಗೆ ಶವ ಕೂಡಿಸಬೇಡಿ ಅಂತ ಅಮಾನವೀಯವಾಗಿ ವರ್ತಸಿದರು.‌

ಇದನ್ನೂ ಓದಿ: ಅಂತ್ಯಸಂಸ್ಕಾರ ಸಿದ್ಧತೆ ವೇಳೆ ಕೆಮ್ಮಿದ ಮಗು, ಇಳಕಲ್​​ನಲ್ಲೊಂದು ಅಚ್ಚರಿ! ಆದರೆ ವೈದ್ಯರು ಹೇಳೋದೇ ಬೇರೆ

ಆಗ ಅಕ್ಕ-ಪಕ್ಕದ ಜನ ಅನಿವಾರ್ಯವಾಗಿ ಮನೆ ಮುಂದಿರುವ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂಡಿಸಿದರು. ಇದನ್ನು ಗಮನಿಸಿದ ಸೋಮವಾರ ಪೇಟೆ ಸಮಸ್ತ ದೈವ ಮಂಡಳಿ, ಗುರು ಕಿತ್ತೂರು ಅವರ ಪತ್ನಿ ಹಾಗೂ ಆಕೆಯ ಮನೆಯವರಿಗೆ ತಿಳುವಳಿಕೆ ಹೇಳಿದರು. ನಂತರ ಶವವನ್ನು ಮನೆಯಲ್ಲಿ ಕೂಡಿಸಲು ಅನುಮತಿ ನೀಡಿದರು. ಬಳಿಕ ಅಂತ್ಯಸಂಸ್ಕಾರ ನೆರವೇರಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್