AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು KSRTC ಬಸ್​ ಚಾಲಕ ಕಮ್​ ನಿರ್ವಾಹಕ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಾಗಲಕೋಟೆ ಜಿಲ್ಲೆಯ ಬೀಳಗಿಯ ಕೆಎಸ್​ಆರ್​ಟಿಸಿ ಬಸ್​ ಚಾಲಕ ಕಮ್​ ನಿರ್ವಾಹಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ವಿಭಾಗದ ವ್ಯಸ್ಥಾಪಕ ನಿರ್ದೇಶಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ|

Updated on:Sep 08, 2024 | 1:18 PM

Share

ಬಾಗಲಕೋಟೆ, ಸೆಪ್ಟೆಂಬರ್​​ 08: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ದ ಬಸ್​​ ಚಾಲಕ ಕಮ್​ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಕಮ್​ ನಿರ್ವಾಹಕ ಶ್ರೀಶೈಲ್​​ ವಿಭೂತಿ (45) ಬೀಳಗಿಯಲ್ಲಿನ (Bilagi) ತಮ್ಮ ಮನೆಯಲ್ಲಿ ಶನಿವಾರ ತಡರಾತ್ರಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಬೀಳಗಿ ಕೆಎಸ್​ಆರ್​ಟಿಸಿ ಬಸ್ ಡಿಪೋ ಮ್ಯಾನೇಜರ್​​​​​​​ ಮತ್ತು ಜಿಲ್ಲಾ ಕಂಟ್ರೋಲರ್​ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀಶೈಲ್​ ವಿಭೂತಿ 2022ರಲ್ಲಿ ಮೇಲಧಿಕಾರಿಗಳ ಕಿರುಕುಳದ ಬಗ್ಗೆ ಮಾತಾಡಿ​ ಕಣ್ಣೀರಿಟ್ಟಿದ್ದ ಹಳೇ ವಿಡಿಯೋ ವೈರಲ್​​​ ಆಗಿತ್ತು.

ನೌಕರರಿಗೆ ಕಿರುಕುಳ ವಿಡಿಯೋ ವೈರಲ್​​

ಚಾಮರಾಜನಗರ: ಚಾಮರಾಜನಗರ ವಿಭಾಗದ ನೌಕರರಿಗೆ ಮೇಲಾಧಿಕಾರಿಗಳು ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಘಟಕ ವ್ಯವಸ್ಥಾಪಕ ಕುಮಾರನಾಯ್ಕ ನಿರ್ವಾಹಕನ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಚಂದ್ರಶೇಖರ್ ಎಂಬುವರ ಚಾಲಕ ತಂದೆ ಮರಣ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ನಿರ್ವಾಹಕ ಚಂದ್ರಶೇಖರ್ ಕರ್ತವ್ಯಕ್ಕೆ ಗೈರಾಗಿದ್ದರು. ಗೈರಾದ ಹಿನ್ನಲೆ ನಿರ್ವಾಹಕನಿಗೆ ವಿಭಾಗ ವ್ಯವಸ್ಥಾಪಕ ನಿರ್ದೇಶಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರತಿ ದಿನ 400 ಕಿಮೀ ಸಂಚಾರ ಮಾಡಲೇಬೇಕು ಎಂದು ತಾಕೀತು ಮಾಡಿದ್ದಾನೆ. ನಿಗದಿತ ಕಿಮೀ ಸಂಚರಿಸದಿದ್ದರೆ, ವೇತನ ಖಡಿತ ಮಾಡುವುದಾಗಿ ಧಮ್ಕಿ ಹಾಕಿದ್ದಾನೆ. ಚಾಮರಾಜನಗರ ಘಟಕ ವ್ಯವಸ್ಥಾಪಕನ ಕಿರುಕುಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Sun, 8 September 24

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?