ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದರಿಂದ ಮನನೊಂದ ಲೇಬರ್ ಗುತ್ತಿಗೆದಾರ ಆತ್ಮಹತ್ಯೆ ಮಾಡಿದ್ದಾರೆ.ಬಾಗಲಕೋಟೆ ತಾಲ್ಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಾಗಲಕೋಟೆ: ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ
Edited By:

Updated on: Nov 04, 2023 | 9:01 AM

ಬಾಗಲಕೋಟೆ, (ನವೆಂಬರ್ 04): ಟೋಲ್ ನಾಕಾದಿಂದ ಪೇಮೆಂಟ್ ಕೊಡದ ಹಿನ್ನೆಲೆಯಲ್ಲಿ ಲೇಬರ್ ಗುತ್ತಿಗೆದಾರ (Labour Contractor) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ (Bagalkot)ತಾಲ್ಲೂಕಿನ ಹೊಸೂರು ಬಳಿ ಇರುವ ಬೆಂಗಳೂರು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಕಚೇರಿ(bengaluru solapur highway toll plaza) ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರೆಪ್ಪ ಪೂಜಾರ(50) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ. ಕಳೆದ ಆರು ತಿಂಗಳ ವೇತನ ಕೊಡದೇ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನವೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ತಾಲ್ಲೂಕಿನ ‌ನಾಯನೇಗಲಿ ಗ್ರಾಮದ ನಿವಾಸಿಯಾಗಿರುವ ವಾರೆಪ್ಪ ಪೂಜಾರ, ಟೋಲ್ ನಾಕಾ ಅಡಿಯಲ್ಲಿ ಹೆದ್ದಾರಿಯಲ್ಲಿ ಗಾರ್ಡನಿಂಗ್ ನಿರ್ವಹಣೆ, ಗಿಡಗಳಿಗೆ ‌ನೀರು ಹಾಕುವುದು ಹಾಗೂ ಸ್ವಚ್ಚತಾ ಕಾಮಗಾರಿ ಮಾಡಿಸುತ್ತಿದ್ದ. ಬೊಲೆರೊ ವಾಹನಗಳು, ಟ್ಯಾಂಕರ್ ಇಟ್ಟುಕೊಂಡು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದ್ದರು. ನಿಡಗುಂದಿಯಿಂದ ಹುನಗುಂದವರೆಗೆ ರಸ್ತೆಯ ಗಾರ್ಡನ್ ನಿರ್ವಹಣೆ ಕಾರ್ಯ ಮಾಡುತ್ತಿದ್ದರು. ಆದ್ರೆ, ಆರು ತಿಂಗಳ ವೇತನ ಕೊಡದೇ ಹೊರ ಹಾಕಿದ್ದರು. ಇದರಿಂದ ಮನನೊಂದು ಇಂದು (ನವೆಂಬರ್ 04)ಬೆಳಗ್ಗೆ ಟೋಲ್​ ಕಚೇರಿ ಬಳಿಯೇ ಪ್ರಾಣ ಬಿಟ್ಟಿದ್ದಾರೆ.

ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾತಿ ಬಂದ್‌ ಮಾಡಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us