AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮೋದಿ ಆಯ್ಕೆ ಮಾಡಿದ್ರೆ ಉಳಿತೀರಿ ಎಂದಿದ್ದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಯೂಟರ್ನ್

ನಾನು ಪಕ್ಷದ ಬಗ್ಗೆ ಮಾತನಾಡಿಲ್ಲ. ನಾನು ಏನೂ ಹೇಳಿಲ್ಲ, ನನಗೆ ಏನೂ ಗೊತ್ತಿಲ್ಲ. ಯಾರೋ ಕಿಡಿಗೇಡಿಗಳು ಮೊಬೈಲ್​​​ನಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಮಹಾಲಿಂಗಪುರ ನಗರದ ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ಬಾಗಲಕೋಟೆ: ಮೋದಿ ಆಯ್ಕೆ ಮಾಡಿದ್ರೆ ಉಳಿತೀರಿ ಎಂದಿದ್ದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಯೂಟರ್ನ್
ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 17, 2023 | 4:08 PM

Share

ಬಾಗಲಕೋಟೆ, ಅಕ್ಟೋಬರ್​​​ 17: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಮತ್ತೆ ಆರಿಸಿ ತಂದರೆ ಉಳಿಯುತ್ತೀರಿ. ಒಂದು ವೇಳೆ ಆರಿಸಿ ತರಲಿಲ್ಲವೆಂದರೆ ಉಳಿಯುವುದಿಲ್ಲ’ ಎಂದು ಜಟ ಭವಿಷ್ಯ ಹೇಳಿದ್ದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಗರದ ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivayogi Rajendra Swamiji) ಈಗ ಯೂಟರ್ನ್​ ಮಾಡಿದ್ದಾರೆ. ಆ ರೀತಿಯ ಹೇಳಿಕೆ ಅಥವಾ ಭವಿಷ್ಯ ನುಡಿದೇ ಇಲ್ಲ ಎಂದು ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಹೇಳಿಕೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅವರು ಸ್ಪಷ್ಟನೆ ನೀಡಿದ್ದಾರೆ.

ಆ ರೀತಿಯ ಮಾತುಗಳನ್ನು ನಾನು ಹೇಳಿಯೇ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಹರಿಬಿಟ್ಟ ವಿಡಿಯೋ ಯಾರೋ ಕಿಡಿಗೇಡಿಗಳ ಕೃತ್ಯವಾಗಿದೆ. ನಾನು ವಿಡಿಯೋದಲ್ಲಿ ಯಾವುದೇ ಪಕ್ಷದ ಪರ ಮಾತನಾಡಿಲ್ಲ. ನಾನು ಪಕ್ಷದ ಬಗ್ಗೆ ಮಾತನಾಡಿಲ್ಲ. ನಾನು ಏನೂ ಹೇಳಿಲ್ಲ, ನನಗೆ ಏನೂ ಗೊತ್ತಿಲ್ಲ. ಯಾರೋ ಕಿಡಿಗೇಡಿಗಳು ಮೊಬೈಲ್​​​ನಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನವರಾತ್ರಿ ದೀಪೋತ್ಸವ ವೇಳೆ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಕೈಯಲ್ಲಿ ಜಟ ಹಿಡಿದು ಜಟವಾಣಿ ನುಡಿದಿದ್ದಾರೆ ಎಂದು ಹೇಳಲಾದ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮೂಲ ಮಹಾಲಿಂಗೇಶ್ವರ ಸ್ವಾಮೀಜಿ ಅವರ ಜಟ (ಕೂದಲು) ಪ್ರತಿ ವರ್ಷ ಬೆಳೆಯುತ್ತದೆ ಎಂಬ ನಂಬಿಕೆ ಇದೆ. ಜಟ ಹಿಡಿದು ಹೇಳುವ ಸ್ವಾಮೀಜಿ ಹೇಳುವ ಭವಿಷ್ಯ ನಿಜವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಇದನ್ನೂ ಓದಿ: Video: ಮೋದಿ ಅವರನ್ನು ಆಯ್ಕೆ ಮಾಡಿದ್ರೆ ಉಳಿತೀರಿ, ಇಲ್ಲಾಂದ್ರೆ ಉಳಿಯಲ್ಲ: ಮಹಾಲಿಂಗೇಶ್ವರ ಸ್ವಾಮೀಜಿ ಜಟ ಭವಿಷ್ಯ ವೈರಲ್

ವಿಡಿಯೋದಲ್ಲೇನಿತ್ತು?

ಮೋದಿ ಅವರನ್ನು ಆರಿಸಿ ತಂದರೆ ಉಳಿತೀರಿ, ಒಂದು ವೇಳೆ ಆರಿಸಿ ತರಲಿಲ್ಲವೆಂದರೆ ಉಳಿಯುವುದಿಲ್ಲ. ಇದರ‌ ಮೇಲೆ ಏನಾದರೂ ವ್ಯತ್ಯಾಸ ಮಾಡಿದರೆ ಹಾಳಾಗುವ ಕಾಲ ಬರುತ್ತದೆ ಎಂದು ಸ್ವಾಮೀಜಿ ಕೈಯಲ್ಲಿ ಜಟ ಹಿಡಿದು ಜಟವಾಣಿ ನುಡಿದಿದ್ದರು. ಇದುವೇ ವೈರಲ್ ಆಗಿರುವ ವಿಡಿಯೋದಲ್ಲಿಯೂ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ