AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಲವ್​ ತಾಲಿಬಾನಿ ಎಂದ ಬಾಗಲಕೋಟೆ ಯುವಕನ ಮೇಲೆ ದೇಶದ್ರೋಹದ ಕೇಸ್​ ಹಾಕಲು ಸ್ವಧರ್ಮೀಯರಿಂದಲೇ ಆಗ್ರಹ

‘ಐ ಲವ್ ತಾಲಿಬಾನಿ’ ಎಂದು ಪೋಸ್ಟ್​ ಹಾಕಿರುವುದು ಖಂಡನೀಯ. ತಾಲಿಬಾನಿಗೂ ನಮಗೂ ಏನು ಸಂಬಂಧ? ಇಂತಹವರಿಂದಲೇ ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬಿರುಕು ಮೂಡುತ್ತಿರುವುದು. ಅವನಿಗೆ ಅಫ್ಘಾನಿಸ್ತಾನ, ತಾಲಿಬಾನ್​ ಇಷ್ಟ ಇದ್ದರೆ ಅಲ್ಲೇ ಹೋಗಿ ಬದುಕಲಿ. ಇವರಿಂದಾಗಿ ಇಡೀ ಸಮಾಜ ತಲೆತಗ್ಗಿಸುವಂತಾಗಿದೆ.

ಐ ಲವ್​ ತಾಲಿಬಾನಿ ಎಂದ ಬಾಗಲಕೋಟೆ ಯುವಕನ ಮೇಲೆ ದೇಶದ್ರೋಹದ ಕೇಸ್​ ಹಾಕಲು ಸ್ವಧರ್ಮೀಯರಿಂದಲೇ ಆಗ್ರಹ
ವಿವಾದಾತ್ಮಕ ಚಿತ್ರ
TV9 Web
| Edited By: |

Updated on: Aug 20, 2021 | 2:59 PM

Share

ಬಾಗಲಕೋಟೆ: ಅಫ್ಘಾನಿಸ್ತಾನ ರಾಷ್ಟ್ರವನ್ನು ಕೈವಶ ಮಾಡಿಕೊಂಡಿರುವ ತಾಲಿಬಾನ್​ ಉಗ್ರರು ತಮ್ಮ ಆಳ್ವಿಕೆ ಶುರುಮಾಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರವನ್ನು ತೆಕ್ಕೆಗೆ ತೆಗೆದುಕೊಂಡು ಬಂದೂಕು ಹಿಡಿದು ದಬ್ಬಾಳಿಕೆ ನಡೆಸುತ್ತಿದ್ದಾರೆ. ತಾಲಿಬಾನಿಗಳ ಈ ನಡೆಗೆ ವಿಶ್ವದಾದ್ಯಂತ ವ್ಯಾಪಕ ಖಂಡನೆಯೂ ವ್ಯಕ್ತವಾಗುತ್ತಿದೆ. ಭಾರತ ಸೇರಿದಂತೆ ಅನೇಕ ರಾಷ್ಟ್ರಗಳು ಅಮಾಯಕ ಅಫ್ಘಾನಿಸ್ತಾನ್ ಪ್ರಜೆಗಳ ಜೀವಕ್ಕಾಗಿ ಪ್ರಾರ್ಥಿಸುತ್ತಿವೆ. ಆದರೆ, ಇಂತಹ ವಿಷಮ ಘಳಿಗೆಯಲ್ಲಿ ಬಾಗಲಕೋಟೆಯ ಆಸೀಫ್​ ಗಲಗಲಿ ಎಂಬ ವ್ಯಕ್ತಿ ‘ಐ ಲವ್ ತಾಲಿಬಾನಿ’ ಎಂದು ತಾಲಿಬಾನ್​ ಉಗ್ರರನ್ನು ಬೆಂಬಲಿಸುವ ಪೋಸ್ಟ್​ ಶೇರ್ ಮಾಡಿದ್ದು, ಆತನ ವಿವಾದಾತ್ಮಕ ನಡೆಗೆ ಅದೇ ಸಮುದಾಯದವರು ಕಿಡಿಕಾರಿದ್ದಾರೆ. ಅಸಿಪ್ ಗಲಗಲಿಯನ್ನು ತರಾಟೆಗೆ ತೆಗೆದುಕೊಂಡ ಮಹಮದ್ ಯಾಕುಬ್ ಎಂಬುವವರು ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಫೇಸ್​ಬುಕ್​ನಲ್ಲಿ ವೈರಲ್​ ಆಗಿದೆ.

‘ಐ ಲವ್ ತಾಲಿಬಾನಿ’ ಎಂದು ಪೋಸ್ಟ್​ ಹಾಕಿರುವುದು ಖಂಡನೀಯ. ತಾಲಿಬಾನಿಗೂ ನಮಗೂ ಏನು ಸಂಬಂಧ? ಇಂತಹವರಿಂದಲೇ ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬಿರುಕು ಮೂಡುತ್ತಿರುವುದು. ಅವನಿಗೆ ಅಫ್ಘಾನಿಸ್ತಾನ, ತಾಲಿಬಾನ್​ ಇಷ್ಟ ಇದ್ದರೆ ಅಲ್ಲೇ ಹೋಗಿ ಬದುಕಲಿ. ಇವರಿಂದಾಗಿ ಇಡೀ ಸಮಾಜ ತಲೆತಗ್ಗಿಸುವಂತಾಗಿದೆ. ಹೀಗಾಗಿ ಆತ ಎಲ್ಲೇ ಇದ್ದರೂ ಅವನನ್ನು ಒದ್ದು ಒಳಗೆ ಹಾಕಬೇಕು ಎಂದು ಜಮಖಂಡಿ ಪೊಲೀಸರಿಗೆ ಮನವಿ ಮಾಡುತ್ತೇನೆ ಎಂದು  ಮಹಮದ್ ಯಾಕುಬ್ ಫೇಸ್​ಬುಕ್​ ವಿಡಿಯೋದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಪ್ಪಿತಸ್ಥನಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ವಿಡಿಯೊ ಮೂಲಕ ಆಗ್ರಹಿಸಿರುವ ಮಹಮದ್ ಯಾಕುಬ್, ಐ ಲವ್ ತಾಲಿಬಾನಿ ಎಂದು ಪೋಸ್ಟ್​ ಹಾಕಿದ ಆಸೀಫ್ ಗಲಗಲಿಯಿಂದಾಗಿ ಸಮಾಜದ ಎಲ್ಲರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆತನ ವಿರುದ್ಧ ದೇಶದ್ರೋಹ ಸೆಕ್ಷನ್​ ಅಡಿಯಲ್ಲಿ ಕೇಸ್​ ಹಾಕಿ, ದೇಶದ ಸುರಕ್ಷತೆ, ಅಭಿವೃದ್ಧಿಗೆ ಸಂಬಂಧಪಟ್ಟಂತೆ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವುದು ಬಿಟ್ಟು ಈ ರೀತಿ ಮಾತನಾಡುವವರಿಗೆ ತಕ್ಕ ಶಿಕ್ಷೆ ನೀಡಿ. ಆತ ಎಲ್ಲೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಜಮಖಂಡಿ ಪೊಲೀಸರಲ್ಲಿ ಕೇಳಿಕೊಂಡಿದ್ದಾರೆ.

ವಿವಾದಾತ್ಮಕ ಪೋಸ್ಟ್​ ಹಾಕಿದ ಆಸೀಫ್ ಗಲಗಲಿ ವಿರುದ್ಧ ಹರಿಹಾಯ್ದ ಮಹಮದ್ ಯಾಕುಬ್ ಅವರ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದ್ದು, ದೇಶದ ವಿಚಾರಕ್ಕೆ ಬಂದಾಗ ಹೀಗೆ ಧ್ವನಿ ಎತ್ತುವುದು ಹಾಗೂ ದೇಶದ್ರೋಹಿಗಳ ವಿರುದ್ಧ ಸಿಡಿದೇಳುವುದು ಅಗತ್ಯ ಎಂದು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದ್ದು, ಜನರು ಅತ್ಯಧಿಕ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನಕ್ಕಾಗಿ ಹೋರಾಡುತ್ತಿರುವ ತಾಲಿಬಾನ್ ಉಗ್ರ ಸಂಘಟನೆಯಲ್ಲ; ಭಾರತದ ಕವಿಯ ವಿವಾದಾತ್ಮಕ ಹೇಳಿಕೆ 

‘ನೀನು ಮಹಿಳೆ, ಮನೆಗೆ ಹೋಗು’ ಎಂದರು; ತಾಲಿಬಾನ್ ಆಡಳಿತದ ಕರಾಳ ಅನುಭವ ಬಿಚ್ಚಿಟ್ಟ ಅಫ್ಘಾನಿಸ್ತಾನದ ಟಿವಿ ನಿರೂಪಕಿ

Follow Us
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ