AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಎಗ್ಗಿಲ್ಲದೆ ಸಾಗುತ್ತಿದೆ ಮಣ್ಣು ಗಣಿಗಾರಿಕೆ: ಮನಬಂದಂತೆ ಅಗೆದು ಬೆಟ್ಟ ನೆಲಸಮ

Bagalkote News: ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ, ಸೀಮಿಕೇರಿ ಗದ್ದನಕೇರಿ ವ್ಯಾಪ್ತಿಯಲ್ಲಿ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಸರಕಾರಿ ಜಾಗೆಯಲ್ಲಿ ಬೆಟ್ಟ, ಗುಡ್ಡ ಅಗೆದು ಮಣ್ಣು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಖಾಸಗಿ ಜಮೀನುಗಳ ಭೂಮಿ ಒಡಲನ್ನು ಅಗೆದು ಮಣ್ಣು ದಂದೆ ಸಾಗಾಣಿಕೆ‌ ಮಾಡುತ್ತಿದ್ದಾರೆ.

ಬಾಗಲಕೋಟೆ: ಎಗ್ಗಿಲ್ಲದೆ ಸಾಗುತ್ತಿದೆ ಮಣ್ಣು ಗಣಿಗಾರಿಕೆ: ಮನಬಂದಂತೆ ಅಗೆದು ಬೆಟ್ಟ ನೆಲಸಮ
ಮಣ್ಣು ಗಣಿಗಾರಿಕೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 04, 2023 | 4:43 PM

Share

ಬಾಗಲಕೋಟೆ, ಅಕ್ಟೋಬರ್​ 04: ಆ‌ ನಗರದ ಸುತ್ತಮುತ್ತ ಗುಡ್ಡಬೆಟ್ಟಗಳಿವೆ. ಕೆಲ‌ವರ ಖಾಸಗಿ ಜಮೀನುಗಳು ಕೂಡ ಬೆಟ್ಟದ ರೀತಿಯಲ್ಲೇ ಇವೆ. ಆದರೆ ಇಂತಹ ಜಾಗದಲ್ಲಿ ಮಣ್ಣು ಗಣಿಗಾರಿಕೆ (mud mining) ಎಗ್ಗಿಲ್ಲದೆ ಸಾಗುತ್ತಿದೆ. ಕೆಲವರು ನಿಯಮ ಪಾಲಿಸಿದರೆ ಬಹುತೇಕರು ನಿಯಮ ಉಲ್ಲಂಘಿಸಿ ಮಣ್ಣು ಗಣಿಗಾರಿಕೆ ‌ನಡೆಸುತ್ತಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ, ಸೀಮಿಕೇರಿ ಗದ್ದನಕೇರಿ ವ್ಯಾಪ್ತಿಯಲ್ಲಿ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಸರಕಾರಿ ಜಾಗೆಯಲ್ಲಿ ಬೆಟ್ಟ ಗುಡ್ಡ ಅಗೆದು ಮಣ್ಣು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಖಾಸಗಿ ಜಮೀನುಗಳ ಭೂಮಿ ಒಡಲನ್ನು ಅಗೆದು ಮಣ್ಣು ದಂದೆ ಸಾಗಾಣಿಕೆ‌ ಮಾಡುತ್ತಿದ್ದಾರೆ.

ಇದರಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೂ ಜೊತೆಗೆ ಇತರೆ ಖಾಸಗಿ ಕೆಲಸಕ್ಕೂ ಮಣ್ಣು ಸಾಗಾಣಿಕೆ ‌ನಡೆಯುತ್ತಿದೆ.ಈ ಮಧ್ಯೆ ಹೆದ್ದಾರಿ ಪ್ರಾಧಿಕಾರದಿಂದ ರಾಜಸ್ವ ಸರಿಯಾಗಿ ತುಂಬುತ್ತಿಲ್ಲ ಎಂಬ ಸಂಶಯ ಸ್ಥಳೀಯರಿಂದ ವ್ಯಕ್ತವಾಗಿದೆ.ಈ ಬಗ್ಗೆ ಪರಿಶೀಲನೆ ಆಗಬೇಕು ಜೊತೆಗೆ ಆಕ್ರಮ ಮಣ್ಣು ಗಣಿಗಾರಿಕೆಯನ್ನು ತಡೆಯಬೇಕು ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೀರು ಬೇಡ ನೀರು ಬೇಕು: ಮದ್ಯ ನಿಷೇಧ, ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ವಿರೋಧ, ಮಹಿಳೆಯರ ಪ್ರತಿಭಟನೆ

ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ ಗುಡ್ಡ, ಗದ್ದನಕೇರಿ ವ್ಯಾಪ್ತಿಯ ಗುಡ್ಡದ ಜಾಗದಲ್ಲಿ ಅನೇಕ ವರ್ಷಗಳಿಂದ ಮಣ್ಣು ಗಣಿಗಾರಿಕೆ ನಡೆಯುತ್ತಲೇ ಇದೆ. ಆಕ್ರಮ ಮಣ್ಣು ಗಣಿಗಾರಿಕೆಯಿಂದ ಗುಡ್ಡದ ಲಕ್ಷಣಗಳೇ ಬದಲಾಗಿವೆ. ಆದರೆ ಇಷ್ಟೆಲ್ಲ ಆಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಯಾವುದೇ ‌ಕಠಿಣ ಕ್ರಮ ‌ಕೈಗೊಳ್ಳುತ್ತಿಲ್ಲ. ಕಾಟಾಚಾರಕ್ಕೆ ಕೆಲವೊಂದು ವಾಹನ ಹಿಡಿದು ಕೇಸ್ ಹಾಕೋದನ್ನು ಬಿಟ್ಟರೆ ಶಾಸ್ವತವಾಗಿ ಇದನ್ನು ಬಂದ್ ‌ಮಾಡುವ ಕೆಲಸ ನಡೆಯುತ್ತಿಲ್ಲ.

ಇದನ್ನೂ ಓದಿ: ಬಾಗಲಕೋಟೆ: ಸರ್ಕಾರಕ್ಕೆ ಸೆಡ್ಡು ಹೊಡೆದು ಕಂಕನವಾಡಿ ರೈತರಿಂದ ಬ್ಯಾರಲ್ ತೇಲುಸೇತುವೆ ನಿರ್ಮಾಣ

ಮಣ್ಣು ಸಾಗಾಣಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಕೇಳಿದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಅವರು ನಮ್ಮ ಇಲಾಖೆಗೆ ರಾಜಧನ ಕಟ್ಟಿಯೇ ಮಣ್ಣನ್ನು ರಸ್ತೆಗೆ ಸಾಗಿಸಿಕೊಳ್ಳುತ್ತಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಹಾಗೂ ಗದ್ದನಕೇರಿ ಕ್ರಾಸ್ ಎರಡು ಕಡೆ ಅವರು ಮಣ್ಣನ್ನು ಖಾಸಗಿ ವ್ಯಕ್ತಿಗಳಿಂದ ಪಡೆಯುತ್ತಿದ್ದಾರೆ. ಒಟ್ಟು 14 ಸಾವಿರದ 744 ಟನ್ ಮೊಹರಂ ಮಣ್ಣು ಸಾಗಿಸಿದ್ದು, ಇದಕ್ಕೆ 15 ಲಕ್ಷ 77 ಸಾವಿರ ರೂ ರಾಜಸ್ವ ಕಟ್ಟಿದ್ದಾರೆ. ಉಳಿದಂತೆ ಮುಚಖಂಡಿ ಸೇರಿದಂತೆ ಇತರೆ ಜಾಗದಲ್ಲಿ ಆಕ್ರಮ‌ ಮಣ್ಣು ಗಣಿಗಾರಿಕೆ ಬಗ್ಗೆ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಅಂತಾರೆ.

ನಗರದ ಸುತ್ತಮುತ್ತ ಅಕ್ರಮ ಮಣ್ಣು ದಂದೆ ಸಾಗಿಸುತ್ತಿದ್ದು, ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಇದಕ್ಕೆ ಕಡಿವಾಣ ಹಾಕಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ