AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ಇಂದು ಕೂಡ ಮುಂದುವರೆಯಲಿದೆ ಮುಧೋಳ ಬಂದ್, ನ.19ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಉಸ್ತುವಾರಿ ಸಚಿವರ ಭರವಸೆ ಈಡೇರದ ಹಿನ್ನೆಲೆ ಇಂದು ಕೂಡ ಮುಧೋಳ ಬಂದ್ ಮುಂದುವರಿಸಲು ರೈತರು ತೀರ್ಮಾನಿಸಿದ್ದಾರೆ. ಮುಧೋಳ ತಾಲೂಕಿನಲ್ಲಿ ನ.19ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ.

ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ಇಂದು ಕೂಡ ಮುಂದುವರೆಯಲಿದೆ ಮುಧೋಳ ಬಂದ್, ನ.19ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ
ಮುಧೋಳ ಬಂದ್
TV9 Web
| Edited By: |

Updated on:Nov 17, 2022 | 8:56 AM

Share

ಬಾಗಲಕೋಟೆ: ಕಬ್ಬು ಬೆಳೆಗೆ(Sugarcane) ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ರೈತರು(Farmers) ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆ ನ.16 ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಬಂದ್ ನಡೆಸಲಾಗಿದ್ದು ಇಂದು ಕೂಡ ಅದು ಮುಂದುವರೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ್ದ ಭರವಸೆ ಈಡೇರಿಸದ ಹಿನ್ನೆಲೆ ಇಂದು ಕೂಡ ಮುಧೋಳ ಬಂದ್ ಮುಂದುವರಿಸಲು ತೀರ್ಮಾನಿಸಲಾಗಿದೆ. ತುರ್ತು ವಾಹನಗಳು, ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದ್ದು ಮುಧೋಳ ತಾಲೂಕಿನಲ್ಲಿ ಸಾರಿಗೆ ಸಂಚಾರದಲ್ಲಿ ಅಡಚಣೆ ಸಾಧ್ಯತೆ ಇದೆ. ಮುಧೋಳ ತಾಲೂಕಿನಲ್ಲಿ ನ.19ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿದೆ.

ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ, ಒಂದು ತಿಂಗಳಿಂದ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಟನ್​​​​ ಕಬ್ಬಿಗೆ ಕನಿಷ್ಟ 2900 ರೂಪಾಯಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಆದ್ರೆ ಕಾರ್ಖಾನೆಗಳು ₹2800 ರೂ ನೀಡುವುದಾಗಿ ಒಪ್ಪಿಕೊಂಡಿವೆ. ಹೀಗಾಗಿ ನ 15ರಂದು ಮುಧೋಳ ನಗರದ ಸಂಗೊಳ್ಳಿರಾಯಣ್ಣ ವೃತ್ತದಲ್ಲಿ ಧರಣಿ ನಡೆಸಲಾಯಿತು. ಕಾರ್ಖಾನೆಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಕಲ್ಲು ತೂರಾಟ, ಕಚೇರಿ, ವಾಹನಗಳ ಧ್ವಂಸವೂ ನಡೆದಿದೆ. ಇದೆಲ್ಲದ್ದರಿಂದ ಎಚ್ಚೆತ್ತಿದ್ದ ಜನಪ್ರತಿನಿಧಿಗಳು ಸಭೆ ನಡೆಸಿದ್ರು. ಸಕ್ಕರೆ ಸಚಿವ ಶಂಕರಪಾಟಿಲ್‌ ಮುನೇನಕೊಪ್ಪ, ಉಸ್ತುವಾರಿ ಸಚಿವ ಸಿಸಿ ಪಾಟಿಲ್, ಸಚಿವ ಗೋವಿಂದ ಕಾರಜೋಳ ಅವರು, ರೈತರು, ಅಧಿಕಾರಿಗಳು, ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಜತೆ ಡಿಸಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ್ರು. ಆದ್ರೆ, ಆ ಸಭೆಯೂ ಫಲಪ್ರದವಾಗಲಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ರೈತ ಸಂಘ ನ.16ರಂದು ಬಾಗಲಕೋಟೆ ಜಿಲ್ಲೆ ಮುಧೋಳ ಟೌನ್​ ಬಂದ್​ಗೆ ಕರೆ ನೀಡದರು. ಅದರಂತೆಯೇ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು ಬಹುತೇಕ ಬಂದ್ ಆಗಿತ್ತು.

ಆದ್ರೆ ನವೆಂಬರ್ 16ರಂದು ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಭರವಸೆ ಈಡೇರದ ಹಿನ್ನೆಲೆ ಇಂದು ಕೂಡ ಬಂದ್ ಮುಂದುವರೆಯಲಿದೆ. ನಿನ್ನೆಯಂತೆ ಇಂದು ಕೂಡ ಮುಧೋಳ ಟೌನ್ ಬಂದ್ ಆಗಲಿದೆ. ಆದ್ರೆ ಶಾಲಾ ಬಸ್, ಹಾಲು ಸರಬರಾಜು ವಾಹನ, ಪತ್ರಿಕೆ ವಾಹನ, ಆಂಬುಲೆನ್ಸ್ ಓಡಾಟಕ್ಕೆ ಯಾವುದೇ ತೊಂದರೆ ಇರುವುದಿಲ್ಲ.

Published On - 8:18 am, Thu, 17 November 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!