AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಧೋಳದಲ್ಲಿ ರಾತ್ರೋರಾತ್ರಿ ಮನೆ ಕಳ್ಳತನಕ್ಕೆ ಬಂದ ಚಡ್ಡಿ ಗ್ಯಾಂಗ್: ಅಮೆರಿಕದಿಂದಲೇ ತಪ್ಪಿಸಿದ ಯುವತಿ!

ಬಾಗಲಕೋಟೆಯ ಮುಧೋಳದ ಆ ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಮಾತ್ರ ವಾಸವಾಗಿದ್ದರು. ಇದನ್ನೇ ಬಂಡವಾಳ‌ ಮಾಡಿಕೊಂಡ ಚಡ್ಡಿ ಕಳ್ಳರ ಗ್ಯಾಂಗ್ ಮನೆ ಕಳ್ಳತನಕ್ಕೆ ಬಂದಿತ್ತು. ಆದರೆ, ಇದನ್ನು ಗಮನಿಸಿದ್ದು ಆ ದಂಪತಿಯ ಅಮೆರಿಕದಲ್ಲಿ ನೆಲೆಸಿರುವ ಮಗಳು. ಬಳಿಕ ಕಳ್ಳರ ಪ್ಲ್ಯಾನ್ ಠುಸ್ ಆಗಿದ್ದೇ ರೋಚಕ!

ಮುಧೋಳದಲ್ಲಿ ರಾತ್ರೋರಾತ್ರಿ ಮನೆ ಕಳ್ಳತನಕ್ಕೆ ಬಂದ ಚಡ್ಡಿ ಗ್ಯಾಂಗ್: ಅಮೆರಿಕದಿಂದಲೇ ತಪ್ಪಿಸಿದ ಯುವತಿ!
ಮುಧೋಳದಲ್ಲಿರುವ ಎಂಜಿನಿಯರ್​ ಹನುಮಂತಗೌಡರ ಮನೆ ಹಾಗೂ ಅಮೆರಿಕದಲ್ಲಿರುವ ಅವರ ಮಗಳು ಶ್ರುತಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 28, 2025 | 7:06 AM

Share

ಬಾಗಲಕೋಟೆ, ಆಗಸ್ಟ್ 28: ಒಬ್ಬನ ಮುಖಕ್ಕೆ ಮಂಕಿ ಕ್ಯಾಪ್, ಮತ್ತೊಬ್ಬನ ಮುಖದಲ್ಲಿ ಮಾಸ್ಕ್, ಮೈಮೇಲೆ ಶರ್ಟ್ ಇದೆ ಆದರೆ ಪ್ಯಾಂಟೇ ಇಲ್ಲ. ಇರೋದು ಬರೀ ಚಡ್ಡಿ! ಅವರು ಕಳ್ಳಬೆಕ್ಕಿನಂತೆ ಹೆಜ್ಜೆ ಮೇಲೆ ಹೆಜ್ಜೆ ಇಟ್ಟು ಬಂದಿದ್ದರು. ಇವರು ಬರುತ್ತಿರುವುದು ಮನೆ ಒಳಗಿದ್ದವರಿಗಂತೂ ಗೊತ್ತಾಗಿಲ್ಲ. ಆದರೆ, ದೂರದ ಅಮೆರಿಕದಲ್ಲಿ ಕೂತಿದ್ದ ಮನೆ ಮಗಳಿಗೆ ಗೊತ್ತಾಗಿತ್ತು. ಇದು ಬಾಗಲಕೋಟೆ (Bagalkot) ಜಿಲ್ಲೆಯ ಮುಧೋಳದಲ್ಲಿರುವ (Mudhol) ನಿವೃತ್ತ ಪಿಡಬ್ಲ್ಯುಡಿ ಎಂಜಿನಿಯರ್​ ಹನುಮಂತಗೌಡರ ಮನೆಯಲ್ಲಿ ನಡೆದ ಘಟನೆ. ಮಂಗಳವಾರ ರಾತ್ರಿ ನಾಲ್ಕು ಜನರ ಚಡ್ಡಿ ಗ್ಯಾಂಗ್​ (Chaddi Gang) ತಡರಾತ್ರಿ​ 1 ಗಂಟೆಗೆ ಎಂಟ್ರಿ ಕೊಟ್ಟಿತ್ತು. ಮನೆಗೆ ಸಿಸಿಟಿವಿ ಕ್ಯಾಮರಾ ಹಾಕಿಸಿದ್ದಾರೆ. ಹನುಮಂತಗೌಡರ ಅಮೆರಿಕದಲ್ಲಿರುವ ಪುತ್ರಿ ಶ್ರುತಿ ತನ್ನ ಮೊಬೈಲ್​​ಗೆ ಸಿಸಿ ಕ್ಯಾಮರಾ ಕನೆಕ್ಟ್​ ಮಾಡಿಕೊಂದ್ದು, ಅಲ್ಲಿಂದಲೇ ಮನೆಯವರನ್ನು ಗಮನಿಸುತ್ತಿದ್ದರು. ಆದರೆ, ರಾತ್ರಿ ಚಡ್ಡಿ ಗ್ಯಾಂಗ್ ಮನೆ ಬಳಿ ಬರುತ್ತಿದ್ದಂತೆಯೇ, ಶ್ರುತಿ ಮೊಬೈಲ್​ಗೆ ಅಲರ್ಟ್ ಮೆಸೇಜ್ ಬಂದಿದೆ. ಈ ವೇಳೆ ಅವರು ಕ್ಯಾಮರಾ ಚೆಕ್ ಮಾಡಿದಾಗ ಚಡ್ಡಿ ಗ್ಯಾಂಗ್ ಕಾಣಿಸಿದೆ.

ಅಮೆರಿಕದಲ್ಲೇ ಕೂತು ಖದೀಮರನ್ನು ನೋಡಿದ ಶ್ರುತಿ, ಕೂಡಲೇ ಮನೆಯವರಿಗೆ ಫೋನ್ ಮಾಡಿದ್ದಾರೆ.ಕಳ್ಳರು ನುಗ್ಗಿರುವ ಬಗ್ಗೆ ಹೇಳಿದ್ದಾರೆ. ಎಚ್ಚೆತ್ತ ಹನುಮಂತಗೌಡ, ಮನೆ ಬಾಗಿಲು ತೆರೆದಾಗ ಚಡ್ಡಿ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿದೆ.

ಇನ್ನು ಈ ಚಡ್ಡಿ ಗ್ಯಾಂಗ್, ಹನುಮಂತಗೌಡರ ಮನೆಗೆ ನುಗ್ಗುವ ಮೊದಲು, ಅಶೋಕ್ ಕರಿಹೊನ್ನ ಎಂಬವರ ಮನೆಗೂ ನುಗ್ಗಿತ್ತಂತೆ. ಅಲ್ಲಿ 100 ಗ್ರಾಂ ಚಿನ್ನ ದೋಚಿ ಪರಾರಿಯಾಗಿದೆ. ಸದ್ಯ, ಅಮೆರಿಕದಲ್ಲಿ ನೆಲೆಸಿದ್ದ ಸಾಫ್ಟ್​ವೇರ್ ಎಂಜಿನಿಯರ್​ ಶ್ರುತಿ ಸಮಯಪ್ರಜ್ಞೆಯಿಂದ ಮನೆ ಕಳ್ಳತನ ತಪ್ಪಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಕೂತು ಬಾಗಲಕೋಟೆ ಮನೆ ಕಳ್ಳತನ ತಪ್ಪಿಸಿದ ಶೃತಿ: ಆಗಿದ್ದೇನು?

ಇದೀಗ ಚಡ್ಡಿ ಗ್ಯಾಂಗ್ ಬಗ್ಗೆ ಕೇಸ್​ ದಾಖಲಿಸಿಕೊಂಡಿರುವ ಮುಧೋಳ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಒಟ್ಟಿನಲ್ಲಿ ಮುಧೋಳ ಕಳ್ಳತನ ಪ್ರಕರಣ ಅಮೆರಿಕದಿಂದ ಬಯಲಾಗಿದ್ದು, ಪೊಲೀಸರು ಚಡ್ಡಿ ಗ್ಯಾಂಗ್ ಅನ್ನು ಆದಷ್ಟು ಬೇಗ ಹಿಡಿದು, ಮುಂದೆ ಆಗಬಹುದಾದ ಇನ್ನಷ್ಟು ಕಳ್ಳತನ ಪ್ರಕರಣಗಳನ್ನು ತಡೆಯಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ