AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಯುವಕ

ಸ್ನೇಹಿತನ ಪತ್ನಿ ಜತೆ ಅತಿಯಾದ ಸಲುಗೆ, ನಿರಂತರ ಫೋನ್ ಸಂಪರ್ಕದಲ್ಲಿದ್ದುದೇ ವ್ಯಕ್ತಿಯೊಬ್ಬನ ಪಾಲಿಗೆ ಮುಳುವಾದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಖಾನಾಪುರ ಎಸ್‌ಕೆ ಗ್ರಾಮದಲ್ಲಿ ನಡೆದಿದೆ. ಹೆಂಡತಿ ಜತೆಗಿನ ಅನೈತಿಕ ಸಂಬಂಧದ ಬಗ್ಗೆ ವಾರ್ನ್​​ ಮಾಡಿದ್ದಕ್ಕೆ ಗೆಳೆಯನೇ ಆತನನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಮದ್ಯ ಕುಡಿಸಿ ಸ್ನೇಹಿತನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಯುವಕ
ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ, ಒಳಚಿತ್ರದಲ್ಲಿ ಕೊಲೆಯಾದ ಸೋಮಶೇಖರ್ ಕಿಳ್ಳಿಕೇತರImage Credit source: tv9
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 03, 2026 | 6:17 PM

Share

ಬಾಗಲಕೋಟೆ, ಫೆಬ್ರವರಿ 3: ಬಾಗಲಕೋಟೆ (Bagalkot) ಜಿಲ್ಲೆಯ ಬಾದಾಮಿ ತಾಲ್ಲೂಕಿನ ಖಾನಾಪುರ ಎಸ್‌ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಯುವಕನೊಬ್ಬ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.  ಪತ್ನಿಯೊಂದಿಗೆ ಸ್ನೇಹಿತನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯೇ ಈ ಭೀಕರ ಕೊಲೆಗೆ ಕಾರಣ ಎನ್ನಲಾಗಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಖಾನಾಪುರ ಎಸ್‌ಕೆ ಗ್ರಾಮದ ನಿವಾಸಿ ಸೋಮಶೇಖರ್ ಕಿಳ್ಳಿಕೇತರ (45) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಸ್ನೇಹಿತ ಸಂಜೀವ್ ಕಿಳ್ಳಿಕೇತರ (28) ಕೂಡ ಬಾದಾಮಿ ತಾಲ್ಲೂಕಿನ ಕಾಕನೂರು ಗ್ರಾಮದ ನಿವಾಸಿಯಾಗಿದ್ದಾನೆ.

ಸೋಮಶೇಖರ್​​ ಪತ್ನಿಯೊಂದಿಗೆ ಸಂಜೀವ್ ಅತಿಯಾದ ಸಲುಗೆಯಿಂದ ವರ್ತಿಸುತ್ತಿದ್ದು, ಫೋನ್‌ನಲ್ಲಿ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಇದು ಸೋಮಶೇಖರ್​​ಗೆ ಅನುಮಾನ ಹುಟ್ಟಿಸಿತ್ತು. ಈ ವಿಷಯವಾಗಿ ಸ್ನೇಹಿತನಿಗೆ ದೂರ ಇರಲು ಎಚ್ಚರಿಕೆ ನೀಡಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ತಿಳಿದುಬಂದಿದೆ.

ಆದರೂ ಇಬ್ಬರೂ ಮದ್ಯಪಾನಕ್ಕೆ ಜೊತೆಯಾಗಿ ಸೇರುವ ಸ್ನೇಹಿತರಾಗಿದ್ದರು. ಭಾನುವಾರ ಮಧ್ಯಾಹ್ನ ಸುಮಾರು 3.30ರ ವೇಳೆಗೆ ಇಬ್ಬರೂ ಖಾನಾಪುರ ಎಸ್‌ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಮದ್ಯಪಾನ ಮಾಡಿದ್ದರು. ಆ ಸಂದರ್ಭ ಸೋಮಶೇಖರ್‌ಗೆ ಕಂಠಪೂರ್ತಿ ಮದ್ಯ ಕುಡಿಸಿದ್ದ ಸಂಜೀವ್, ಆತ ಪೂರ್ತಿ ನಶೆಯಲ್ಲಿದ್ದಾಗ ಕಲ್ಲಿನಿಂದ ತಲೆ ಮತ್ತು ಮುಖವನ್ನು ಜಜ್ಜಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರದಿಂದ ಸೋಮಶೇಖರ್ ಕಾಣೆಯಾಗಿದ್ದ ಹಿನ್ನೆಲೆ ಶೋಧ ನಡೆಸಲಾಗಿತ್ತು. ಬಳಿಕ ಮಾವಿನ ತೋಟದಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಪ್ರಕರಣ ಎಂಬುದು ದೃಢಪಟ್ಟಿದೆ.

ಇದನ್ನೂ ಓದಿ: ಸಿಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಘಟನಾ ಸ್ಥಳಕ್ಕೆ ಬಾದಾಮಿ ಪೊಲೀಸರು ಹಾಗೂ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯೆಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವ ಪತ್ತೆಯಾದ ಬಳಿಕ ಮೃತನ ಕುಟುಂಬಸ್ಥರು ಎಸ್‌ಪಿ ಎದುರು ಕಣ್ಣೀರಿಟ್ಟಿದ್ದಾರೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Tue, 3 February 26

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!
ಪರಪ್ಪನ ಅಗ್ರಹಾರ ಜೈಲಲ್ಲಿ ನಿಂತಿಲ್ಲ ರಾಜಾತಿಥ್ಯ: ದಾಳಿ ವೇಳೆ ಸತ್ಯ ಬಯಲು!