AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ವಿರುದ್ಧ ಸಂಸದ, ಮಾಜಿ ಶಾಸಕರ ದೂರು

ವಿಜಯಾನಂದ ಕಾಶಪ್ಪನವರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ. 307, ಜಾತಿನಿಂದನೆ ಕೇಸ್ ಹಾಕಿಸುತ್ತಿದ್ದಾರೆಂದು ಬಿಜೆಪಿ ಮಾಜಿ ಶಾಸಕ, ಬೆಂಬಲಿಗರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಹುನಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಮಟಕಾ ಅಡ್ಡೆ, ಇಸ್ಪೀಟ್‌, ಅಕ್ರಮ ಮರಳು ಸಾಗಾಣಿಕೆ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗಿವೆ. ಇವುಗಳಿಗೆ ಶಾಸಕ ವಿಜಯಾನಂದ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ವಿರುದ್ಧ ಸಂಸದ, ಮಾಜಿ ಶಾಸಕರ ದೂರು
ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಎಸ್​ಪಿಗೆ ದೂರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Oct 22, 2023 | 9:46 AM

Share

ಬಾಗಲಕೋಟೆ, ಅ.22: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ (Doddanagouda Patil) ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ವಿಜಯಾನಂದ ಕಾಶಪ್ಪನವರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ. 307, ಜಾತಿನಿಂದನೆ ಕೇಸ್ ಹಾಕಿಸುತ್ತಿದ್ದಾರೆಂದು ಮಾಜಿ ಶಾಸಕರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಹಾಗೂ ಶಾಸಕರ ಅಣತಿಯಂತೆ ಪೊಲೀಸರು ನಡೆದುಕೊಳ್ತಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ಹುನಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಮಟಕಾ ಅಡ್ಡೆ, ಇಸ್ಪೀಟ್‌, ಅಕ್ರಮ ಮರಳು ಸಾಗಾಣಿಕೆ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗಿವೆ. ಇವುಗಳಿಗೆ ಶಾಸಕ ವಿಜಯಾನಂದ ಕುಮ್ಮಕ್ಕು ನೀಡುತ್ತಿದ್ದಾರೆ. ಅಲ್ಲದೆ ಪೊಲೀಸ್ ಪ್ರಕರಣ ದಾಖಲಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಇಳಕಲ್‌ ಹಾಗೂ ಹುನಗುಂದ ಠಾಣೆಯ ಪೊಲೀಸರು ಶಾಸಕರು ಹೇಳಿದಂತೆ ಕೇಳುತ್ತಿದ್ದಾರೆ. ಅಕ್ರಮ ಚಟುವಟಿಕೆಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಾಗಲಕೋಟೆ ಎಸ್ಪಿ ಕಚೇರಿಗೆ ಆಗಮಿಸಿದ ಸಂಸದ ಪಿ.ಸಿ.ಗದ್ದಿಗೌಡ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ಕಾರ್ಯಕರ್ತರು ಎಸ್ಪಿ ಅಮರನಾಥ ರೆಡ್ಡಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯ್ತಿ ಸದಸ್ಯನ ಬರ್ಬರ ಕೊಲೆ! ಅನುಮಾನಾಸ್ಪದ ಓರ್ವ ವ್ಯಕ್ತಿ ಅರೆಸ್ಟ್

ಹುನಗುಂದದಲ್ಲಿ ಮುಂದಿನ ದಿನಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವುದು ತುಂಬಾ ಕಷ್ಟಕರವಾಗಿದೆ. ಶಾಸಕ ವಿಜಯಾನಂದ ಹಾಗೂ ಅವರ ಬೆಂಬಲಿಗರು ಬಲಾಢ್ಯರಾಗಿರುವುದರಿಂದ ಅನ್ಯಾಯ ಪ್ರಶ್ನಿಸಿ ಜೀವನ ನಡೆಸುವುದು ಕಷ್ಟವಾಗಿದೆ. ಅಮಾಯಕರ ವಿರುದ್ಧ ನಕಲಿ ಎಸ್‌ಸಿ/ಎಸ್‌ಟಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಯಾವುದೇ ವಿಚಾರಣೆ ನಡೆಸದೆ ಮುಗ್ದ ಜನರನ್ನು ದಸ್ತಗಿರಿ ಮಾಡಲಾಗುತ್ತದೆ. ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಬಿಜೆಪಿ ಬೆಂಬಲಿಗರು ಆಗ್ರಹಿಸಿದರು.

ಬಾಗಲಕೋಟೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:44 am, Sun, 22 October 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!