AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ವಿರುದ್ಧ ಸಂಸದ, ಮಾಜಿ ಶಾಸಕರ ದೂರು

ವಿಜಯಾನಂದ ಕಾಶಪ್ಪನವರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ. 307, ಜಾತಿನಿಂದನೆ ಕೇಸ್ ಹಾಕಿಸುತ್ತಿದ್ದಾರೆಂದು ಬಿಜೆಪಿ ಮಾಜಿ ಶಾಸಕ, ಬೆಂಬಲಿಗರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಹುನಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಮಟಕಾ ಅಡ್ಡೆ, ಇಸ್ಪೀಟ್‌, ಅಕ್ರಮ ಮರಳು ಸಾಗಾಣಿಕೆ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗಿವೆ. ಇವುಗಳಿಗೆ ಶಾಸಕ ವಿಜಯಾನಂದ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ವಿರುದ್ಧ ಸಂಸದ, ಮಾಜಿ ಶಾಸಕರ ದೂರು
ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಎಸ್​ಪಿಗೆ ದೂರು
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಆಯೇಷಾ ಬಾನು

Updated on:Oct 22, 2023 | 9:46 AM

ಬಾಗಲಕೋಟೆ, ಅ.22: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ವಿರುದ್ಧ ಅಧಿಕಾರ ದುರುಪಯೋಗ ಆರೋಪ ಮಾಡಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ (Doddanagouda Patil) ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ವಿಜಯಾನಂದ ಕಾಶಪ್ಪನವರ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ. 307, ಜಾತಿನಿಂದನೆ ಕೇಸ್ ಹಾಕಿಸುತ್ತಿದ್ದಾರೆಂದು ಮಾಜಿ ಶಾಸಕರು ಎಸ್​ಪಿಗೆ ದೂರು ಸಲ್ಲಿಸಿದ್ದಾರೆ. ಹಾಗೂ ಶಾಸಕರ ಅಣತಿಯಂತೆ ಪೊಲೀಸರು ನಡೆದುಕೊಳ್ತಿದ್ದಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ಹುನಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಮಟಕಾ ಅಡ್ಡೆ, ಇಸ್ಪೀಟ್‌, ಅಕ್ರಮ ಮರಳು ಸಾಗಾಣಿಕೆ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗಿವೆ. ಇವುಗಳಿಗೆ ಶಾಸಕ ವಿಜಯಾನಂದ ಕುಮ್ಮಕ್ಕು ನೀಡುತ್ತಿದ್ದಾರೆ. ಅಲ್ಲದೆ ಪೊಲೀಸ್ ಪ್ರಕರಣ ದಾಖಲಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಇಳಕಲ್‌ ಹಾಗೂ ಹುನಗುಂದ ಠಾಣೆಯ ಪೊಲೀಸರು ಶಾಸಕರು ಹೇಳಿದಂತೆ ಕೇಳುತ್ತಿದ್ದಾರೆ. ಅಕ್ರಮ ಚಟುವಟಿಕೆಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಾಗಲಕೋಟೆ ಎಸ್ಪಿ ಕಚೇರಿಗೆ ಆಗಮಿಸಿದ ಸಂಸದ ಪಿ.ಸಿ.ಗದ್ದಿಗೌಡ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ಕಾರ್ಯಕರ್ತರು ಎಸ್ಪಿ ಅಮರನಾಥ ರೆಡ್ಡಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯ್ತಿ ಸದಸ್ಯನ ಬರ್ಬರ ಕೊಲೆ! ಅನುಮಾನಾಸ್ಪದ ಓರ್ವ ವ್ಯಕ್ತಿ ಅರೆಸ್ಟ್

ಹುನಗುಂದದಲ್ಲಿ ಮುಂದಿನ ದಿನಗಳಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವುದು ತುಂಬಾ ಕಷ್ಟಕರವಾಗಿದೆ. ಶಾಸಕ ವಿಜಯಾನಂದ ಹಾಗೂ ಅವರ ಬೆಂಬಲಿಗರು ಬಲಾಢ್ಯರಾಗಿರುವುದರಿಂದ ಅನ್ಯಾಯ ಪ್ರಶ್ನಿಸಿ ಜೀವನ ನಡೆಸುವುದು ಕಷ್ಟವಾಗಿದೆ. ಅಮಾಯಕರ ವಿರುದ್ಧ ನಕಲಿ ಎಸ್‌ಸಿ/ಎಸ್‌ಟಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಯಾವುದೇ ವಿಚಾರಣೆ ನಡೆಸದೆ ಮುಗ್ದ ಜನರನ್ನು ದಸ್ತಗಿರಿ ಮಾಡಲಾಗುತ್ತದೆ. ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದು ಬಿಜೆಪಿ ಬೆಂಬಲಿಗರು ಆಗ್ರಹಿಸಿದರು.

ಬಾಗಲಕೋಟೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:44 am, Sun, 22 October 23

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್