AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ವೇಳೆ ಗಣ್ಯರ ಸಾಲಿನಲ್ಲಿ ಕೂತಿದ್ದ ರೌಡಿಶೀಟರ್, ಹೇಗೆ ಕೂರಿಸಿದ್ರಿ ಎಂದು ಬಾಗಲಕೋಟೆ ಜನರ ಆಕ್ರೋಶ

ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರ ಸಾಲಿನಲ್ಲಿ 420, ರೌಡಿಶೀಟರ್ ಪ್ರಕಾಶ್ ಮುಧೋಳ ಕಾಣಿಸಿಕೊಂಡರು. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಎದ್ದಿದೆ. ಗಣ್ಯರ ಸಾಲಲ್ಲಿ ಹೇಗೆ ಕೂರಿಸಿದರು ಎಂದು ಬಾಗಲಕೋಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow us
TV9 Web
| Updated By: ಆಯೇಷಾ ಬಾನು

Updated on:Oct 13, 2024 | 7:56 AM

ಬೆಂಗಳೂರು, ಅ.13: ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿ ಅವರನ್ನು ಹೆದರಿಸಿ ₹1 ಕೋಟಿ ಹಣ ವಸೂಲು ಮಾಡಿದ್ದ ರೌಡಿಶೀಟರ್ ಪ್ರಕಾಶ ಮುಧೋಳ ಮೈಸೂರು ದಸರಾ (Mysuru Dasara) ವೇಳೆ ಗಣ್ಯರ ಸಾಲಿನಲ್ಲಿ ನಾಣಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್​.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್​ ಕೂತಿದ್ದ ವಿಐಪಿ ಸಾಲಿನಲ್ಲಿ ಪ್ರಕಾಶ್‌ ಮುಧೋಳ ಕುಳಿತಿದ್ದರು.

ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರ ಸಾಲಿನಲ್ಲಿ 420, ರೌಡಿಶೀಟರ್ ಪ್ರಕಾಶ್ ಮುಧೋಳ ಕಾಣಿಸಿಕೊಂಡರು. ಡಿಸಿಎಂ ಡಿಕೆ ಶಿವಕುಮಾರ್, MLC ಯತೀಂದ್ರ ಜೊತೆಗೂ ಪ್ರಕಾಶ್‌ ಮುಧೋಳ ಸೆಲ್ಫಿ ತೆಗೆದುಕೊಂಡಿದ್ದಾರೆ. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಎದ್ದಿದೆ. ಗಣ್ಯರ ಸಾಲಲ್ಲಿ ಹೇಗೆ ಕೂರಿಸಿದರು ಎಂದು ಬಾಗಲಕೋಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು ದಸರಾ ಮೆರವಣಿಗೆಯಲ್ಲಿ ಪರಮೇಶ್ವರ್ ಭರ್ಜರಿ ಡ್ಯಾನ್ಸ್

ಇತ್ತೀಚೆಗಷ್ಟೇ ಬಾಗಲಕೋಟೆ ತಾಲೂಕಿನ ಸೀಮಿಕೇರಿ ರಾಮಾರೂಢ ಮಠದ ಪರಮರಾಮಾರೂಢಶ್ರೀಗೆ ರೌಡಿಶೀಟರ್​ ಪ್ರಕಾಶ್ ಮುಧೋಳ ಬೆದರಿಕೆ ಹಾಕಿ 1 ಕೋಟಿ ರೂ. ವಸೂಲಿ ‌ಮಾಡಿದ್ದ. ಎಡಿಜಿಪಿ, ಐಜಿಪಿ ಹೆಸರಲ್ಲಿ ಕರೆ ಮಾಡಿ ವಂಚನೆ ಮಾಡಿದ್ದ. ಈ ಸಂಬಂಧ ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಪ್ರಕಾಶ್​ನನ್ನು​​ ಬಂಧಿಸಿದ್ದರು. ಸದ್ಯ 4 ದಿನದ ಹಿಂದೆ ಪ್ರಕಾಶ್ ‌ಮುಧೋಳ ಜಾಮೀನಿನ ಮೇಲೆ ಹೊರ ಬಂದಿದ್ದಾನೆ. ಇದೀಗ ದಸರಾ ಕಾರ್ಯಕ್ರಮದಲ್ಲಿ ಗಣ್ಯರ ವೇದಿಕೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ.

2023ರ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಕಾಶ್ ಸ್ಪರ್ಧಿಸಿದ್ದ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರಿನಲ್ಲಿ ವಂಚನೆಗೆ ಯತ್ನಿಸಿದ್ದ. ಬಾಗಲಕೋಟೆ ಉಸ್ತುವಾರಿ ಸಚಿವ ತಿಮ್ಮಾಪುರ ಅವರ ಅಳಿಯ ಎಂದು ಕಾರ್ ಲೋನ್ ಪಡೆಯಲು ಯತ್ನಿಸಿದ್ದ. ವಂಚನೆ, ಸುಲಿಗೆ ಸೇರಿ ಪ್ರಕಾಶ್ ಮುಧೋಳ ವಿರುದ್ಧ ಒಟ್ಟು 11 ಕೇಸ್​ಗಳಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:45 am, Sun, 13 October 24

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ