AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ವೇಳೆ ಗಣ್ಯರ ಸಾಲಿನಲ್ಲಿ ಕೂತಿದ್ದ ರೌಡಿಶೀಟರ್, ಹೇಗೆ ಕೂರಿಸಿದ್ರಿ ಎಂದು ಬಾಗಲಕೋಟೆ ಜನರ ಆಕ್ರೋಶ

ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರ ಸಾಲಿನಲ್ಲಿ 420, ರೌಡಿಶೀಟರ್ ಪ್ರಕಾಶ್ ಮುಧೋಳ ಕಾಣಿಸಿಕೊಂಡರು. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಎದ್ದಿದೆ. ಗಣ್ಯರ ಸಾಲಲ್ಲಿ ಹೇಗೆ ಕೂರಿಸಿದರು ಎಂದು ಬಾಗಲಕೋಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TV9 Web
| Edited By: |

Updated on:Oct 13, 2024 | 7:56 AM

Share

ಬೆಂಗಳೂರು, ಅ.13: ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿ ಅವರನ್ನು ಹೆದರಿಸಿ ₹1 ಕೋಟಿ ಹಣ ವಸೂಲು ಮಾಡಿದ್ದ ರೌಡಿಶೀಟರ್ ಪ್ರಕಾಶ ಮುಧೋಳ ಮೈಸೂರು ದಸರಾ (Mysuru Dasara) ವೇಳೆ ಗಣ್ಯರ ಸಾಲಿನಲ್ಲಿ ನಾಣಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್​.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್​ ಕೂತಿದ್ದ ವಿಐಪಿ ಸಾಲಿನಲ್ಲಿ ಪ್ರಕಾಶ್‌ ಮುಧೋಳ ಕುಳಿತಿದ್ದರು.

ಮೈಸೂರು ದಸರಾ ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರ ಸಾಲಿನಲ್ಲಿ 420, ರೌಡಿಶೀಟರ್ ಪ್ರಕಾಶ್ ಮುಧೋಳ ಕಾಣಿಸಿಕೊಂಡರು. ಡಿಸಿಎಂ ಡಿಕೆ ಶಿವಕುಮಾರ್, MLC ಯತೀಂದ್ರ ಜೊತೆಗೂ ಪ್ರಕಾಶ್‌ ಮುಧೋಳ ಸೆಲ್ಫಿ ತೆಗೆದುಕೊಂಡಿದ್ದಾರೆ. ಗಣ್ಯರ ಸಾಲಲ್ಲಿ ಪ್ರಕಾಶ್‌ ಮುಧೋಳ ಆಸನ ಪಡೆದಿದ್ದೇಗೆ ಎಂಬ ಪ್ರಶ್ನೆ ಎದ್ದಿದೆ. ಗಣ್ಯರ ಸಾಲಲ್ಲಿ ಹೇಗೆ ಕೂರಿಸಿದರು ಎಂದು ಬಾಗಲಕೋಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರು ದಸರಾ ಮೆರವಣಿಗೆಯಲ್ಲಿ ಪರಮೇಶ್ವರ್ ಭರ್ಜರಿ ಡ್ಯಾನ್ಸ್

ಇತ್ತೀಚೆಗಷ್ಟೇ ಬಾಗಲಕೋಟೆ ತಾಲೂಕಿನ ಸೀಮಿಕೇರಿ ರಾಮಾರೂಢ ಮಠದ ಪರಮರಾಮಾರೂಢಶ್ರೀಗೆ ರೌಡಿಶೀಟರ್​ ಪ್ರಕಾಶ್ ಮುಧೋಳ ಬೆದರಿಕೆ ಹಾಕಿ 1 ಕೋಟಿ ರೂ. ವಸೂಲಿ ‌ಮಾಡಿದ್ದ. ಎಡಿಜಿಪಿ, ಐಜಿಪಿ ಹೆಸರಲ್ಲಿ ಕರೆ ಮಾಡಿ ವಂಚನೆ ಮಾಡಿದ್ದ. ಈ ಸಂಬಂಧ ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಪ್ರಕಾಶ್​ನನ್ನು​​ ಬಂಧಿಸಿದ್ದರು. ಸದ್ಯ 4 ದಿನದ ಹಿಂದೆ ಪ್ರಕಾಶ್ ‌ಮುಧೋಳ ಜಾಮೀನಿನ ಮೇಲೆ ಹೊರ ಬಂದಿದ್ದಾನೆ. ಇದೀಗ ದಸರಾ ಕಾರ್ಯಕ್ರಮದಲ್ಲಿ ಗಣ್ಯರ ವೇದಿಕೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ.

2023ರ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಪ್ರಕಾಶ್ ಸ್ಪರ್ಧಿಸಿದ್ದ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರಿನಲ್ಲಿ ವಂಚನೆಗೆ ಯತ್ನಿಸಿದ್ದ. ಬಾಗಲಕೋಟೆ ಉಸ್ತುವಾರಿ ಸಚಿವ ತಿಮ್ಮಾಪುರ ಅವರ ಅಳಿಯ ಎಂದು ಕಾರ್ ಲೋನ್ ಪಡೆಯಲು ಯತ್ನಿಸಿದ್ದ. ವಂಚನೆ, ಸುಲಿಗೆ ಸೇರಿ ಪ್ರಕಾಶ್ ಮುಧೋಳ ವಿರುದ್ಧ ಒಟ್ಟು 11 ಕೇಸ್​ಗಳಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:45 am, Sun, 13 October 24

‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ