AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಪ್ರಿನ್ಸಿಪಾಲ್ ಆತ್ಮಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ವಹಿಸಿವಂತೆ ಆಗ್ರಹಿಸಿದ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್​

ನಾನು ಅವರ ಕುಟುಂಬ ವರ್ಗದವರನ್ನು ಮಾತನಾಡಿಸಿದಾಗ, ‘ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಳ್ಳಲು ಯಾವುದೇ ಸಮಸ್ಯೆ ಇರಲಿಲ್ಲ. ಅವರ ಮಗನಿಗೆ ಮೊನ್ನೆ ತಾನೇ ಎಂಬಿಬಿಎಸ್ ಸೀಟು ಸಿಕ್ಕು ಪ್ರವೇಶ ಮಾಡಿಸಿದ್ದಾರೆ. ಜೊತೆಗೆ ಮಗಳಿಗೆ ಡಿಸೆಂಬರ್​ನಲ್ಲಿ‌ ಮದುವೆ ಕೂಡ ಫಿಕ್ಸ್ ಆಗಿತ್ತು. ಇಂತಹ ಸಂದರ್ಭದಲ್ಲಿ ಈ ರೀತಿ ಮಾಡಿಕೊಳ್ಳಲು ಸಾಧ್ಯವೇ ಇಲ್ಲವೆಂದು, ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ: ಪ್ರಿನ್ಸಿಪಾಲ್ ಆತ್ಮಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ವಹಿಸಿವಂತೆ ಆಗ್ರಹಿಸಿದ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್​
ಮಾಜಿ ಬಿಜೆಪಿ ಶಾಸಕ, ಆತ್ಮಹತ್ಯೆ ಮಾಡಿಕೊಂಡ ಪ್ರಿನ್ಸಿಪಾಲ್​
ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 25, 2023 | 2:33 PM

Share

ಬಾಗಲಕೋಟೆ, ಆ.25: ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ (College Principal) ನಾಗರಾಜ್ ಮುದಗಲ್ ಅವರು ಆಗಸ್ಟ್ 22 ರಂದು ಕಾಲೇಜಿನಲ್ಲಿ ನಸುಕಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ(CBI) ತನಿಖೆಗೆ ವಹಿಸುವಂತೆ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್​ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇಳಕಲ್ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ‘ಆತ್ಮಹತ್ಯೆ ಬಗ್ಗೆ ಕುಟುಂಬದವರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ತನಿಖೆಗೆ ಒಳಪಡಿಸಲು ಹೇಳಿದರು ಎಂದರು.

‘ನಾನು ಅವರ ಕುಟುಂಬ ವರ್ಗದವರನ್ನು ಮಾತನಾಡಿಸಿದಾಗ ‘ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಳ್ಳಲು ಯಾವುದೇ ಸಮಸ್ಯೆ ಇರಲಿಲ್ಲ. ಅವರ ಮಗನಿಗೆ ಮೊನ್ನೆ ತಾನೇ ಎಂಬಿಬಿಎಸ್ ಸೀಟು ಸಿಕ್ಕು ಪ್ರವೇಶ ಮಾಡಿಸಿದ್ದಾರೆ. ಜೊತೆಗೆ ಮಗಳಿಗೆ ಡಿಸೆಂಬರ್​ನಲ್ಲಿ‌ ಮದುವೆ ಕೂಡ ಫಿಕ್ಸ್ ಆಗಿತ್ತು. ಅತ್ಯಂತ ಸಂಭ್ರಮದಲ್ಲಿದ್ದ ಕುಟುಂಬದ ಮುಖ್ಯಸ್ಥ. ಕಾಲೇಜಿನಲ್ಲೆ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಅವರ ಕುಟುಂಬದವರು ಸಂಶಯ ವ್ಯಕ್ತಪಡಿಸಿದ್ದಾರೆ ಎಂದರು.

ಇದನ್ನೂ ಓದಿ:ತುಮಕೂರು: ಮೇಲಾಧಿಕಾರಿಯಿಂದ ಕಿರುಕುಳ ಆರೋಪ; ಡೆತ್​ನೋಟ್ ಬರೆದಿಟ್ಟು ಸಹಾಯಕ ಸರ್ವೆಯರ್​ ಆತ್ಮಹತ್ಯೆಗೆ ಯತ್ನ

ಆತ್ಮಹತ್ಯೆಯ ಹಿಂದೆ ಏನೋ ಒಂದು ವ್ಯವಹಾರ ಕಾರಣವಿರುವ ಶಂಕೆ

ಹೌದು, ಆತ್ಮಹತ್ಯೆಯ ಹಿಂದೆ ಏನೋ ಒಂದು ವ್ಯವಹಾರ ಕಾರಣವಿರುವ ಶಂಕೆ ವ್ಯಕ್ತವಾಗಿದೆ. ಅತಿಸೂಕ್ಷ್ಮ ಮತಿಯವರಾಗಿದ್ದ ನಾಗರಾಜ್ ಮುದಗಲ್ ಅವರ ಆತ್ಮಹತ್ಯೆಯ ಹಿಂದೆ ಏನೋ ಕಾರಣ ಇದೆ. ಹೀಗಾಗಿ ಈ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಳಪಡಿಸಲು ಸರ್ಕಾರಕ್ಕೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್​ ಆಗ್ರಹಿಸುತ್ತೇನೆ ಎಂದರು.

ಇನ್ನು ಇದೆ ವೇಳೆ ‘ಹುನಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕ್ಷೇತ್ರದ ತುಂಬೆಲ್ಲ ಇಸ್ಪೇಟ್ ಅಡ್ಡಗಳು ಓಪನ್ ಆಗಿವೆ. ಮೂರು ತಿಂಗಳಲ್ಲಿ ಜೂಜಾಟ ಕೇಂದ್ರ ತೆರೆಸಿದ್ದು, ಇವರ ಸಾಧನೆ ಎಂದು ಹಾಲಿ ಶಾಸಕರ ವಿರುದ್ದ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್​ ಕಿಡಿಕಾರಿದರು. ಇವರು ಜನರ ಸೇವೆ ಮಾಡಲು ಬಂದಿದ್ದಾರೋ, ಲೂಟಿ ಮಾಡಲು ಬಂದಿದ್ದಾರೋ ಎಂದು ಮೂರು ತಿಂಗಳು ಸುಮ್ಮನಿದ್ದೆ. ಈಗ ಹುನಗುಂದ ಕ್ಷೇತ್ರದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಆರೋಪಿಸಿದರು.

ಯುವ ಸಮುದಾಯವನ್ನು ಜೂಜಾಟಕ್ಕೆ ತಳ್ಳುವ ವ್ಯವಸ್ಥಿತ ಸಂಚು ಕ್ಷೇತ್ರದಲ್ಲಿ ನಡೆದಿದೆ

ಹೌದು, ಇಳಕಲ್ ಪೊಲೀಸ್ ಠಾಣೆ ಹಿಂಭಾಗ, ಮುಖ್ಯರಸ್ತೆಗಳಲ್ಲೆ ಇಸ್ಪೇಟ್ ಅಡ್ಡ ತೆರೆದಿವೆ. ಇದಕ್ಕೆ ಕ್ಷೇತ್ರದ ಕಾಂಗ್ರೆಸ್​ ಶಾಸಕರಾದ ವಿಜಯಾನಂದ ಕಾಶಪ್ಪನವರ್​ ಬೆಂಗಾವಲು ಆಗಿ ನಿಂತಿದ್ದಾರೆ. ಹೀಗಾಗಿ ಪೊಲೀಸರು ಅಕ್ರಮ ಚಟುವಟಿಕೆ ತಡೆಯುತ್ತಿಲ್ಲ, ಅವರಿಗೆ ತಡೆಯಲು ಆಗಲ್ಲ. ಇನ್ನು ಹುನಗುಂದ ಕ್ಷೇತ್ರದಲ್ಲಿ ಪ್ರತ್ಯೇಕ ಇಲಾಖೆಗಳು ಆಗಿವೆ. ಅವರದ್ದೆ ಆದ ಪೊಲೀಸ್ ಠಾಣೆ, ಅವರದ್ದೆ ವಸೂಲಿ ಇಲಾಖೆ ಮಾಡಿಕೊಂಡು, ಅದಕ್ಕೆ ಒಬ್ಬೊಬ್ಬರನ್ನು ಹೆಡ್ ಮಾಡಿದ್ದಾರೆ ಎಂದು ಕಿಡಿಕಾರಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?