AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB: ಈ ಹಿಂದೆ ಎಸಿಬಿ ದಾಳಿಗೆ ಒಳಗಾಗಿದ್ದ ಬಾಗಲಕೋಟೆ ಆರ್ ಟಿಒ ಅಧಿಕಾರಿ ಸಸ್ಪೆಂಡ್, ಕಾರಣ ಇಂಟರೆಸ್ಟಿಂಗ್ ಆಗಿದೆ!

Bagalkot RTO: ಬಾಗಲಕೋಟೆಯ ಆರ್ ಟಿ ಒ ಅಧಿಕಾರಿ ಯಲ್ಲಪ್ಪ ಪಡಸಾಲಿ 4 ಕೋಟಿ 11 ಲಕ್ಷ 28 ಸಾವಿರದ 372 ರೂ ಹೆಚ್ಚುವರಿ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದಾಯಕ್ಕಿಂತ 239.11 ಪಟ್ಟು ಆಸ್ತಿ ಹೆಚ್ಚುವರಿಯಾಗಿರುವ ಹಿನ್ನೆಲೆ ಅಮಾನತು ಮಾಡಲಾಗಿದೆ.

ACB: ಈ ಹಿಂದೆ ಎಸಿಬಿ ದಾಳಿಗೆ ಒಳಗಾಗಿದ್ದ ಬಾಗಲಕೋಟೆ ಆರ್ ಟಿಒ ಅಧಿಕಾರಿ ಸಸ್ಪೆಂಡ್, ಕಾರಣ ಇಂಟರೆಸ್ಟಿಂಗ್ ಆಗಿದೆ!
ಈ ಹಿಂದೆ ಎಸಿಬಿ ದಾಳಿಗೆ ಒಳಗಾಗಿದ್ದ ಬಾಗಲಕೋಟೆ ಆರ್ ಟಿಒ ಅಧಿಕಾರಿ ಸಸ್ಪೆಂಡ್, ಕಾರಣ ಇಂಟರೆಸ್ಟಿಂಗ್ ಆಗಿದೆ!
TV9 Web
| Edited By: |

Updated on:Sep 21, 2022 | 4:02 PM

Share

ಬಾಗಲಕೋಟೆ: ಈ ಹಿಂದೆ ಭ್ರಷ್ಟಾಚಾರ ವಿರೋಧಿ ದಳದಿಂದ ದಾಳಿಗೆ (ACB raid) ಒಳಗಾಗಿದ್ದ ಬಾಗಲಕೋಟೆಯ ಆರ್ ಟಿ ಒ ಅಧಿಕಾರಿಯನ್ನು ಅಮಾನತು ‌ಮಾಡಿ (Suspend) ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರಿಂದ ಈ ಆದೇಶ ಹೊರಬಿದ್ದಿದೆ. ಯಲ್ಲಪ್ಪ ಪಡಸಾಲಿ ಅಮಾನತ್ತಾದ ಆರ್ ಟಿ ಒ ಅಧಿಕಾರಿ (Bagalkot RTO).

ಅಧಿಕಾರಿಯ ಸಸ್ಪೆಂಡ್ ಹಿಂದಿರುವ ಕಾರಣ ಇಂಟರೆಸ್ಟಿಂಗ್:

ಕಳೆದ ಜೂನ್ 17, 2022 ರಂದು ಯಲ್ಲಪ್ಪ ಪಡಸಾಲಿ ಅವರಿಗೆ ಸೇರಿದ ಧಾರವಾಡ ಮತ್ತು ಬಾಗಲಕೋಟೆಯಲ್ಲಿರುವ ಮನೆಗಳ‌ ಮೇಲೆ ಧಾರವಾಡ ಎಸಿಬಿ ತಂಡದಿಂದ ದಾಳಿ ನಡೆದಿತ್ತು. ಮೇಲ್ನೋಟಕ್ಕೆ ಆದಾಯಕ್ಕಿಂತ ಅಧಿಕ ಆಸ್ತಿ ಇರೋದು ಸಾಬೀತಾದ ಹಿನ್ನೆಲೆ ಅಮಾನತು ಸರ್ಕಾರವು ಭ್ರಷ್ಟ ಅಧಿಕಾರಿಯನ್ನು ಮನೆಗೆ ಕಳಿಸಿದೆ. ಕರ್ತವ್ಯದ ಮೇಲಿದ್ದರೆ ಸಾಕ್ಷ್ಯ ನಾಶ ಸಾಧ್ಯತೆ ಹಿನ್ನೆಲೆ ಅಮಾನತು ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆಯ ಆರ್ ಟಿ ಒ ಅಧಿಕಾರಿ ಯಲ್ಲಪ್ಪ ಪಡಸಾಲಿ 4 ಕೋಟಿ 11 ಲಕ್ಷ 28 ಸಾವಿರದ 372 ರೂ ಹೆಚ್ಚುವರಿ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದಾಯಕ್ಕಿಂತ 239.11 ಪಟ್ಟು ಆಸ್ತಿ ಹೆಚ್ಚುವರಿಯಾಗಿರುವ ಹಿನ್ನೆಲೆ ಅಮಾನತು ಮಾಡಲಾಗಿದೆ. ಯಲ್ಲಪ್ಪ ಪಡಸಾಲಿ ಒಟ್ಟು ಸ್ಥಿರಾಸ್ತಿಗಳ ಮೌಲ್ಯ 5 ಕೋಟಿ 3 ಲಕ್ಷ 28 ಸಾವಿರದ 373 ರೂ. ಒಟ್ಟು ಖರ್ಚುಗಳ ಮೊತ್ತ 80 ಲಕ್ಷ. ಬಲ್ಲ ‌ಮೂಲಗಳ ಆದಾಯದ ಅಂದಾಜು ಮೌಲ್ಯ 1 ಕೋಟಿ 72 ಲಕ್ಷ ರೂಪಾಯಿ.

ಕೋಳಿ ಫಾರ್ಮ್ ನಿರ್ಮಾಣಕ್ಕೆ ಅನುಮತಿ ನೀಡಲು ಲಂಚ ಬೇಡಿಕೆ: ಪಿಡಿಒ, ಬಿಲ್​ ಕಲೆಕ್ಟರ್​​ಗೆ 4 ವರ್ಷ ಜೈಲು

ತುಮಕೂರು: ಕೋಳಿ ಫಾರ್ಮ್ ನಿರ್ಮಾಣಕ್ಕೆ ಎನ್​ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ, ಪಿಡಿಒ ಮತ್ತು ಬಿಲ್​ ಕಲೆಕ್ಟರ್​​ಗೆ ತುಮಕೂರಿನ 7ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿರಾ ತಾಲೂಕಿನ ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಡಿ.ಎಂ.ನಾಗರಾಜು ಮತ್ತು ಬಿಲ್‌ ಕಲೆಕ್ಟರ್ ಶಿವಣ್ಣ 2018 ರಲ್ಲಿ ಕೋಳಿ ಫಾರಂ ನಿರ್ಮಾಣಕ್ಕೆ ಎನ್​ಒಸಿ ಕೊಡಲು 10 ಸಾವಿರ ಲಂಚ ಕೇಳಿದ್ದರು.

ಲಂಚ ಪಡೆಯಲೆಂದು ಬಿಲ್‌ ಕಲೆಕ್ಟರ್ ಶಿವಣ್ಣ ತೆರಳಿದ್ದ, ಈ ವೇಳೆ ಶಿವಣ್ಣ ರೇಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದನು. ತನಿಕೆ ಬಳಿಕ ಪ್ರಕರಣ ಸಾಭೀತಾಗಿದ್ದು, ಬಿಲ್‌ ಕಲೆಕ್ಟರ್ ಶಿವಣ್ಣ ಮತ್ತು ಪಿಡಿಒ ಡಿ.ಎಂ.ನಾಗರಾಜುಗೆ 4 ವರ್ಷ ಜೈಲು ಶಿಕ್ಷೆ, 30 ಸಾವಿರ ದಂಡ ವಿಧಿಸಿ ನ್ಯಾಯಮೂರ್ತಿ ಟಿ.ಪಿ ರಾಮೇಲಿಂಗೇಗೌಡ ರಿಂದ ಶಿಕ್ಷೆ ಪ್ರಕಟ ಮಾಡಿದ್ದಾರೆ.

RTO ನಿವೃತ್ತ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ, 63 ಲಕ್ಷ ದಂಡ!

ಬೆಳಗಾವಿ: ನಿವೃತ್ತಿಯಾಗಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ಮತ್ತು 63 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಬೆಳಗಾವಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ನಿವೃತ್ತ ಸಾರಿಗೆ ಅಧಿಕಾರಿ ಪಿ. ಶಾಂತಕುಮಾರ ಶಿಕ್ಷೆಗೆ ಒಳಗಾದ ನಿವೃತ್ತ ಅಧಿಕಾರಿ. ಶಾಂತಕುಮಾರ ಪ್ರಸ್ತುತ ಬೆಳಗಾವಿ ‌ನಗರದ ಆಂಜನೇಯ ನಗರದಲ್ಲಿ ವಾಸವಾಗಿದ್ದಾರೆ. ಶಾಂತಕುಮಾರ ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್‌ದವರು.

ಬೀದರ ಜಿಲ್ಲೆಯ ಹುಮನಾಬಾದ್ ಆರ್‌ಟಿಓ ಆಗಿದ್ದಾಗ ಭ್ರಷ್ಟಾಚಾರ ನಡೆಸಿದ್ದರು. ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಎಸಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿಕೊಂಡಿದ್ದರು. ಈ ಸಂಬಂಧ ಗುಪ್ತ ಮಾಹಿತಿ ಕಲೆ ಹಾಕಿದ್ದ ಲೋಕಾಯುಕ್ತ ಎಸ್ಪಿ ಆರ್.ಕೆ. ಪಾಟೀಲ್‌ ಅವರು ಶಾಂತಕುಮಾರ ಮನೆಯ ಮೇಲೆ ದಾಳಿ ಮಾಡಿ, ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದರು.

ಲೋಕಾಯುಕ್ತ ಅಧಿಕಾರಿಗಳು 2010 ಮೇ 3 ರಂದು ಪಿ. ಶಾಂತಕುಮಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ನಡೆಸಿದ್ದ ಬೆಳಗಾವಿ ಲೋಕಾಯುಕ್ತ ಎಸ್ಪಿ ಆರ್. ಬಿ. ಹವಾಲ್ದಾರ್ ಅವರು 1.14 ಕೋಟಿ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಮೋಹನ ಪ್ರಭು ಅವರು ಸುದೀರ್ಘ ವಿಚಾರಣೆಯ ಬಳಿಕ ಇಂದು ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸದಿದ್ರೆ ಆರೋಪಿ ಅಥವಾ ಪತ್ನಿಯ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಲು ಸಹ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Wed, 21 September 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ